ಸರ್ಕಾರಿ ಕಡತ ಪಾಕ್, ಚೀನಾಕ್ಕೆ ಕೊಡಲ್ಲವೆಂದು ಏನ್ ಗ್ಯಾರಂಟಿ: ಕಾಂಟ್ರಾಕ್ಟರ್​​ ವಿರುದ್ದ ಉಪ ಲೋಕಾಯುಕ್ತ ಗರಂ

ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಸ್ಕಾಂ ಮತ್ತು ಜಲಮಂಡಳಿ ಸೇರಿದಂತೆ 45 ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕಾಂಟ್ರಾಕ್ಟರ್ ಕೈಯಲ್ಲಿ ಬೆಸ್ಕಾಂ ಕಚೇರಿ ಕಡತ ನೋಡಿದ ಉಪ ಲೋಕಾಯುಕ್ತರು, ನೀವು ನಮ್ಮ ಸರ್ಕಾರಿ ಕಡತ ಚೀನಾ, ಪಾಕಿಸ್ತಾನಕ್ಕೆ ಕೊಡಲ್ಲ ಅಂತ ಏನು ಗ್ಯಾರಂಟಿ ಎಂದು ಗರಂ ಆಗಿದ್ದಾರೆ.

ಸರ್ಕಾರಿ ಕಡತ ಪಾಕ್, ಚೀನಾಕ್ಕೆ ಕೊಡಲ್ಲವೆಂದು ಏನ್ ಗ್ಯಾರಂಟಿ: ಕಾಂಟ್ರಾಕ್ಟರ್​​ ವಿರುದ್ದ ಉಪ ಲೋಕಾಯುಕ್ತ ಗರಂ
ಸರ್ಕಾರಿ ಕಡತ ಪಾಕ್, ಚೀನಾಕ್ಕೆ ಕೊಡಲ್ಲವೆಂದು ಏನ್ ಗ್ಯಾರಂಟಿ: ಕಾಂಟ್ರಾಕ್ಟರ್​​ ವಿರುದ್ದ ಉಪ ಲೋಕಾಯುಕ್ತ ಗರಂ
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on: Dec 19, 2024 | 8:13 PM

ಬೆಂಗಳೂರು, ಡಿಸೆಂಬರ್​ 19: ಇಂದು ನಗರದ 45 ಕಡೆ ಏಕಕಾಲದಲ್ಲಿ ಬೆಸ್ಕಾಂ ಮತ್ತು ಜಲಮಂಡಳಿ ಸೇರಿ ಇತರೆ ಕಚೇರಿಗಳ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಂ.ಜಿ.ರಸ್ತೆಯ ಬೆಸ್ಕಾಂ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಸರ್ಕಾರಿ ಕಡತ ತೆಗೆದುಕೊಂಡು‌ ಹೋಗುತ್ತಿದ್ದ ಕಾಂಟ್ರಾಕ್ಟರ್​​ ವಿರುದ್ದ ಉಪ ಲೊಕಾಯುಕ್ತ ಫುಲ್ ಗರಂ ಆಗಿದ್ದಾರೆ. ನೀವು ನಮ್ಮ ಸರ್ಕಾರಿ ಕಡತ ಚೀನಾ, ಪಾಕಿಸ್ತಾನಕ್ಕೆ ಕೊಡಲ್ಲ ಅಂತ ಏನು ಗ್ಯಾರಂಟಿ? ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಇನ್ನು  ಸರ್ಕಾರಿ ಕಡತ ತೆಗೆದುಕೊಂಡು‌ ಹೋಗುತ್ತಿದ್ದ ಕಾಂಟ್ರಾಕ್ಟರ್​​ ವಿರುದ್ಧ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್‌ ಕೇಸ್ ದಾಖಲಿಸುವಂತೆ ಉಪ ಲೋಕಾಯುಕ್ತ ಬಿ.ವೀರಪ್ಪ ಸೂಚನೆ ನೀಡಿದ್ದಾರೆ. ಬೆಸ್ಕಾಂ ಇಂಜಿನಿಯರ್ ರಾಜೇಶ್ ಎ1 ಆರೋಪಿ  ಮಾಡುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಸಾರ್ವಜನಿಕರಿಂದ ದೂರು: ಬೆಸ್ಕಾಂ, ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಗುತ್ತಿಗೆದಾರ ಪವನ್, ಎಲೆಕ್ಟ್ರಿಕಲ್​ ಕೆವಿ‌ ರೆಡ್ಡಿ, ಜ್ಯೋತಿ ಎಲೆಕ್ಟ್ರಿಕ್ಸ್​ ರಾಕೇಶ್ ವಿರುದ್ದ ಕ್ರಿಮಿನಲ್ ಕೇಸ್​ಗೆ ಸೂಚಿಸಲಾಗಿದೆ. ಅದ್ಹೇಗೆ ಸರ್ಕಾರಿ ಕಡತ ಹೊರಗಡೆಯವರೆಗೆ ಕೊಡುತ್ತೀರಿ? ನಿಮ್ಮ ಮೇಲೆ ಕ್ರಿಮಿನಲ್‌ ಕೇಸ್ ಬೀಳುತ್ತೆ ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ಸಮವಸ್ತ್ರ ಧರಿಸದ ಸಿಬ್ಬಂದಿಗೆ ಉಪ ಲೋಕಾಯುಕ್ತ ಬಿ. ವೀರಪ್ಪ ಫುಲ್ ಕ್ಲಾಸ್

ಇಂದಿರಾ ನಗರದ ಕೋಡಿಹಳ್ಳಿಯಲ್ಲಿರುವ ಬೆಸ್ಕಾಂ ಕಚೇರಿ ಮೇಲೆ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಜೀನ್ಸ್ ಪ್ಯಾಂಟ್, ಟೀ ಷರ್ಟ್ ಧರಿಸಿದ್ದ ಸಿಬ್ಬಂದಿಗೆ ಉಪ ಲೋಕಾಯುಕ್ತ ಬಿ. ವೀರಪ್ಪ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಸ್ಕಾಂ ಪೂರ್ವ ವಿಭಾಗ ಇಂಜಿನಿಯರ್ ಕಚೇರಿಯಲ್ಲಿ ಪರಿಶೀಲನೆ ಮಾಡಲಾಗಿದೆ.

1.86 ಲಕ್ಷ ಲಂಚ ಪಡೆದು ಓಡಿ ಹೋಗಿತ್ತಿದ್ದ ಅಧಿಕಾರಿ

ಇನ್ನು ಗುತ್ತಿಗೆದಾರನಿಂದ 1.86 ಲಕ್ಷ ರೂ. ಲಂಚ ಪಡೆದು ಓಡಿ ಹೋಗಿತ್ತಿದ್ದ ಜಲಮಂಡಳಿ ಅಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಇಂದಿರಾ ನಗರ ಜಲಮಂಡಳಿ ಸಿನೀಯರ್ ಅಸಿಸ್ಟಂಟ್ ಚಿದಾನಂದ ಸಿಕ್ಕಿಬಿದ್ದಿದ್ದಾರೆ. ಜಲ ಮಂಡಳಿ ಗುತ್ತಿಗೆದಾರ ತಿಮ್ಮೇಗೌಡನಿಂದ ಚಿದಾನಂದ ಲಂಚ ಪಡೆದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್ ಬಾಸ್​ಗೆ ಆಯ್ಕೆ ಆಗುವುದು ಹೇಗೆ? ಪ್ರಕ್ರಿಯೆ ವಿವರಿಸಿದ ಗೋಲ್ಡ್ ಸುರೇಶ್
ಬಿಗ್ ಬಾಸ್​ಗೆ ಆಯ್ಕೆ ಆಗುವುದು ಹೇಗೆ? ಪ್ರಕ್ರಿಯೆ ವಿವರಿಸಿದ ಗೋಲ್ಡ್ ಸುರೇಶ್
ರವಿ ಮಾತಿಂದ ಲಕ್ಷ್ಮಿ ಹೆಬ್ಬಾಳ್ಕರ್ ಬಹಳ ನೊಂದುಕೊಂಡಿದ್ದಾರೆ: ಸಿದ್ದರಾಮಯ್ಯ
ರವಿ ಮಾತಿಂದ ಲಕ್ಷ್ಮಿ ಹೆಬ್ಬಾಳ್ಕರ್ ಬಹಳ ನೊಂದುಕೊಂಡಿದ್ದಾರೆ: ಸಿದ್ದರಾಮಯ್ಯ
ಆಸೀಸ್ ಮಾಧ್ಯಮಗಳ ಮೇಲೆ ಮುಗಿಬಿದ್ದ ವಿರಾಟ್ ಕೊಹ್ಲಿ
ಆಸೀಸ್ ಮಾಧ್ಯಮಗಳ ಮೇಲೆ ಮುಗಿಬಿದ್ದ ವಿರಾಟ್ ಕೊಹ್ಲಿ
ಸಹ ಸ್ಪರ್ಧಿಗಳ ಸ್ವಿಮ್ಮಿಂಗ್ ಪೂಲ್​ಗೆ ತಳ್ಳಿದ ಮೋಕ್ಷಿತಾ, ರಜತ್
ಸಹ ಸ್ಪರ್ಧಿಗಳ ಸ್ವಿಮ್ಮಿಂಗ್ ಪೂಲ್​ಗೆ ತಳ್ಳಿದ ಮೋಕ್ಷಿತಾ, ರಜತ್
ಸಚಿವೆ ವಿರುದ್ಧ ಕೆಟ್ಟ ಪದವನ್ನು ನಾನು ಬಳಸಿಲ್ಲ, ದಾಖಲೆ ನೋಡಿ: ಸಿಟಿ ರವಿ
ಸಚಿವೆ ವಿರುದ್ಧ ಕೆಟ್ಟ ಪದವನ್ನು ನಾನು ಬಳಸಿಲ್ಲ, ದಾಖಲೆ ನೋಡಿ: ಸಿಟಿ ರವಿ
ಬಿಜೆಪಿ ಮುಖಂಡ ಯಾರ ಒತ್ತಾಸೆ ಮೇರೆಗೆ ಸಂಪರ್ಕಿಸಿದರೋ ಗೊತ್ತಿಲ್ಲ: ಕೃಷ್ಣ
ಬಿಜೆಪಿ ಮುಖಂಡ ಯಾರ ಒತ್ತಾಸೆ ಮೇರೆಗೆ ಸಂಪರ್ಕಿಸಿದರೋ ಗೊತ್ತಿಲ್ಲ: ಕೃಷ್ಣ
ಮಲ್ಲಿಕಾರ್ಜುನ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ: ಬಸವರಾಜು
ಮಲ್ಲಿಕಾರ್ಜುನ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ: ಬಸವರಾಜು
ನಿವೃತ್ತಿ ಬೆನ್ನಲ್ಲೇ ಟೀಮ್ ಇಂಡಿಯಾ ತೊರೆದ ಅಶ್ವಿನ್​ಗೆ ಅದ್ಧೂರಿ ಸ್ವಾಗತ
ನಿವೃತ್ತಿ ಬೆನ್ನಲ್ಲೇ ಟೀಮ್ ಇಂಡಿಯಾ ತೊರೆದ ಅಶ್ವಿನ್​ಗೆ ಅದ್ಧೂರಿ ಸ್ವಾಗತ
ಸಿದ್ದರಾಮಯ್ಯ ಸಹ ಬಂಗಾರಪ್ಪ ಹಾಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ: ಮಧು
ಸಿದ್ದರಾಮಯ್ಯ ಸಹ ಬಂಗಾರಪ್ಪ ಹಾಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ: ಮಧು
ರಕ್ತನಾಳಗಳು ಸಂಕುಚಿತಗೊಳ್ಳುವುದರಿಂದ ಹೃದಯಾಘಾತದ ಅಪಾಯ ಹೆಚ್ಚು: ಡಾಕ್ಟರ್
ರಕ್ತನಾಳಗಳು ಸಂಕುಚಿತಗೊಳ್ಳುವುದರಿಂದ ಹೃದಯಾಘಾತದ ಅಪಾಯ ಹೆಚ್ಚು: ಡಾಕ್ಟರ್