Karnataka Budget 2024 Date: ಕರ್ನಾಟಕ ಬಜೆಟ್​ ಯಾವಾಗ, ಸಮಯ? ಗಾತ್ರ ಎಷ್ಟು? ಲೈವ್ ವೀಕ್ಷಿಸುವುದು ಹೇಗೆ?

Karnataka Budget 2024-25 Live Streaming: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್‌ 2024 ಮಂಡನೆಗೆ ಅಣಿಯಾಗುತ್ತಿದ್ಧಾರೆ. ಬೆಂಗಳೂರಿನಲ್ಲಿ ವಿವಿಧ ವಲಯಗಳ ಪ್ರಮುಖರೊಂದಿಗೆ ಚರ್ಚಿಸಿ ಅವರ ಬೇಡಿಕೆಗಳ ಪಟ್ಟಿಯನ್ನು ಸ್ವೀಕರಿಸುತ್ತಿದ್ದಾರೆ. ಸಾಮಾಜಿಕ ವಲಯ, ಕೃಷಿಕರು, ಮಹಿಳೆಯರು, ಉದ್ಯಮ ವಲಯ ಬೇಡಿಕೆಗಳನ್ನು ಸಲ್ಲಿಸಿವೆ. ಇನ್ನು ಪ್ರಮುಖವಾಗಿ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಬಜೆಟ್​ ಮಂಡನೆಯಾಗುತ್ತಿರುವುದು ಮಹತ್ವ ಪಡೆದುಕೊಂಡಿದೆ. ಇನ್ನು ಬಜೆಟ್​ ಯಾವಾಗ ಸಮಯಕ್ಕೆ ಮಂಡನೆಯಾಗಲಿದೆ? ಎಲ್ಲಿ ಲೈವ್ ವೀಕ್ಷಣೆ ಮಾಡಬಹುದು ಎನ್ನುವ ವಿವರ ಈ ಕೆಳಗಿನಂತಿದೆ.

Karnataka Budget 2024 Date: ಕರ್ನಾಟಕ ಬಜೆಟ್​ ಯಾವಾಗ, ಸಮಯ? ಗಾತ್ರ ಎಷ್ಟು? ಲೈವ್ ವೀಕ್ಷಿಸುವುದು ಹೇಗೆ?
ವಿಧಾನಸೌಧ
Follow us
| Updated By: Digi Tech Desk

Updated on:Feb 16, 2024 | 9:27 AM

ಬೆಂಗಳೂರು, (ಫೆಬ್ರವರಿ 14): ಈಗಾಗಲೇ ಕರ್ನಾಟಕದ 2024-25ನೇ ಸಾಲಿನ ಬಜೆಟ್​ (Karnataka Budget) ಅಧಿವೇಶನ ಪ್ರಾರಂಭವಾಗಿದ್ದು, ಮೊದಲ ದಿನ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಫೆಬ್ರವರಿ 16ರಂದು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಮಾಡುವ ನಿರೀಕ್ಷೆಗಳಿವೆ.

ಬಜೆಟ್​ ಯಾವಾಗ? ಯಾವ ಸಮಯಕ್ಕೆ?

ಫೆ.16ರ ಬೆಳಗ್ಗೆ 10.15ಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್​ ನೇರಪ್ರಸಾರವನ್ನು ಟಿವಿ9 ವಾಹಿನಿ ಹಾಗೂ ಟಿವಿ9 ಡಿಜಿಟಲ್​ನಲ್ಲಿ ನೋಡಬಹುದಾಗಿದೆ. ಬಜೆಟ್​​ ಮಂಡನಗೂ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ 15ನೇ ಬಾರಿಯ ಬಜೆಟ್ ಮಂಡಣೆ ಇದಾಗಿರಲಿದ್ದು ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ.

ಇದನ್ನೂ ಓದಿ: Chalo Delhi: ಬಜೆಟ್ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಈ ಬಾರಿ ಎಷ್ಟು ಗಾತ್ರದ ಬಜೆಟ್?

ಈ ಬಾರಿ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ. ದಾಟಿರಲಿಲ್ಲ. ಆದ್ರೆ. ಈ ಬಾರಿ ಸುಮಾರು 50 ಸಾವಿರ ಕೋಟಿ ರೂ.ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂ.ತಲುಪಲಿದೆ.

ಸಿದ್ದರಾಮಯ್ಯ ಅವರು ಮಂಡಿಸಿದ ಮೊದಲ ಆಯವ್ಯಯದ ಗಾತ್ರ 12,616 ಕೋಟಿ ಆಗಿದ್ದರೆ 13 ನೇ ಆಯವ್ಯಯದ ಗಾತ್ರ 2,09,181 ಕೋಟಿ ಆಗಿತ್ತು. 14 ನೇ ಆಯವ್ಯಯದ ಗಾತ್ರ 3,35,000 ಕೋಟಿ‌ ಆಗಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಅಂದಾಜಿಸಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ.

ಗ್ಯಾರಂಟಿಗಳೇ ದೊಡ್ಡ ಹೊರೆ

ಈ ಬಾರಿ ದೊಡ್ಡ ಸವಾಲಾಗಿರುವುದು ಪಂಚ ಗ್ಯಾರಂಟಿ (Congress Guarntee) ಹೊರೆ ಹಾಗೂ ಬರದ ಬರೆ. ಇತ್ತ ಪ್ರಸಕ್ತ ವರ್ಷದಲ್ಲಿ ರಾಜಸ್ವ ಸಂಗ್ರಹ ನಿಗದಿತ ಗುರಿ ತಲುಪದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅದರಲ್ಲೂ 2024-25ನೇ ಸಾಲಿನ ಬಜೆಟ್​ನಲ್ಲಿ ಪಂಚ ಗ್ಯಾರಂಟಿ ವೆಚ್ಚದ ಮಧ್ಯೆ ಅಭಿವೃದ್ಧಿಗೆ ವೇಗ ಕೊಡುವ ಸಮತೋಲಿತ ಬಜೆಟ್ ಕೊಡುವ ಅನಿವಾರ್ಯತೆ ಇದೆ. ಈ ಬಾರಿ ಅಲ್ಪ ಪ್ರಮಾಣದ ಆದಾಯ ಬಜೆಟ್ ಮಂಡಿಸುವ ಸಾಧ್ಯತೆಗಳಿವೆ. ರಾಜಸ್ವ ಗುರಿ ಹೆಚ್ಚಿಸಿ, ಉಳಿದಂತೆ ಸಾಲದ ಮೊರೆ ಹೋಗುವ ಲೆಕ್ಕಾಚಾರದಲ್ಲಿ ಸಿದ್ದರಾಮಯ್ಯ ಇದ್ದಾರೆ.

ಸಿದ್ದರಾಮಯ್ಯಗೆ ಈ ಬಾರಿಯ ಬಜೆಟ್ ಮಂಡನೆ ವೇಳೆ ದೊಡ್ಡ ಸವಾಲಾಗಿರುವುದು ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವುದು.‌ 2023-24 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗೆ 38,000 ಕೋಟಿ ರೂ. ಅನುದಾನ ಬೇಕಾಗಿದ್ದರೆ, 2024-25 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸಮಾರು 58,000 ಕೋಟಿ ರೂ. ಅನುದಾನ ಮೀಸಲಿಡುವ ಅನಿವಾರ್ಯತೆ ಇದೆ. ಇಷ್ಟೊಂದು ದೊಡ್ಡ ಪ್ರಮಾಣದ ಹಣ ಹೊಂದಿಸುವುದೇ ದೊಡ್ಡ ಸವಾಲಾಗಿದೆ. ಒಂದೆಡೆ ಸೀಮಿತ ಆದಾಯ ಮೂಲ, ಇನ್ನೊಂದೆಡೆ ತೆರಿಗೆ ಸಂಗ್ರಹ ಗುರಿ ಮುಟ್ಟದೇ ಇರುವುದು ದೊಡ್ಡ ಸಂಕಷ್ಟ ತಂದೊಡ್ಡಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಈ ಬಾರಿ ಪಂಚ ಗ್ಯಾರಂಟಿಗಾಗಿ ಬೇಕಾಗಿರುವ ವಾರ್ಷಿಕ 58,000 ಕೋಟಿ ರೂ.‌ ಹಣ ಹೊಂದಿಸಲು ನಾನಾ ಲೆಕ್ಕಾಚಾರಗಳನ್ನು ಹಾಕಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Wed, 14 February 24

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ