AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಈಗ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ?

ಒಂದು ಕಡೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆಯಿದೆ. ಇನ್ನೊಂದು ಕಡೆ ಚುನಾವಣಾ ಪ್ರಚಾರದಲ್ಲಿ ರಮೇಶ್ ಜಾರಹೊಳಿ ಪ್ರಚಾರಕ್ಕೆ ಭಾಗಿಯಾಗದೇ ಎಲ್ಲಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ.

ರಮೇಶ್ ಜಾರಕಿಹೊಳಿ ಈಗ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ?
ರಮೇಶ್​ ಜಾರಕಿಹೊಳಿ
shruti hegde
|

Updated on:Mar 30, 2021 | 1:28 PM

Share

ಬೆಳಗಾವಿ: ಒಂದು ಕಡೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆಯಿದೆ. ಇನ್ನೊಂದು ಕಡೆ ಚುನಾವಣಾ ಪ್ರಚಾರದಲ್ಲಿ ರಮೇಶ್ ಜಾರಹೊಳಿ ಪ್ರಚಾರಕ್ಕೆ ಭಾಗಿಯಾಗಬೇಕಿತ್ತು. ಈ ನಡುವೆ ರಮೇಶ್​ ಜಾರಕಿಹೊಳಿ ಅವರಿಗೆ ಟೆನ್ಶನ್ ಶುರುವಾದಂತಿದೆ.

ನಿನ್ನೆ ತಡರಾತ್ರಿ ಗೋಕಾಕ್ ನಿವಾಸಕ್ಕೆ ಆಗಮಿಸಿರುವ ರಮೇಶ್ ಜಾರಕಿಹೊಳಿ‌ ಮನೆಯಿಂದ ಹೊರಬಂದಿಲ್ಲ. ಬೆಳಗಾವಿ ಚುನಾವಣೆ ಪ್ರಚಾರಕ್ಕೂ ಬಾರದೇ ರಮೇಶ್ ಜಾರಕಿಹೊಳಿ ಮನೆಯಲ್ಲೇ ಕುಳಿತಿದ್ದಾರೆ.

ಯುವತಿಯನ್ನು ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ; ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಬೆಂಗಳೂರಿನಲ್ಲಿ ಇದ್ದಾಳೆ. ಅರ್ಧ ಗಂಟೆ ಅಥವಾ ಒಂದು ಗಂಟೆ, ಇಲ್ಲವೇ ಎರಡು ಗಂಟೆಗಳಲ್ಲಿ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಹೇಳಿದ್ದಾರೆ. ಮೊದಲು ಸಿಆರ್‌ಪಿಸಿ 164 ಪ್ರಕಾರ ಕೋರ್ಟ್​ನಲ್ಲಿ ಹೇಳಿಕೆ ದಾಖಲು ಮಾಡುತ್ತೇವೆ ಎಂದು ನ್ಯಾಯಾಧೀಶರು ಆದೇಶಿಸಿದ ಬೆನ್ನಲ್ಲೇ ವಕೀಲ ಜಗದೀಶ್ ಈ ಹೇಳಿಕೆ ನೀಡಿದ್ದಾರೆ.

ನ್ಯಾಯಾಲಯ ಯಾವಾಗ ಹೇಳುತ್ತೋ ಆವಾಗ ಯುವತಿಯನ್ನು ಕರೆದುಕೊಂಡು ಬರುತ್ತೇವೆ. ನ್ಯಾಯಾಲಯ ಕರೆತನ್ನಿ ಅಂದ್ರೆ ಕರೆದುಕೊಂಡು ಬರ್ತೀನಿ. ಸೆಕ್ಯೂರಿಟಿ ಸಿದ್ದತೆಯಾದ ತಕ್ಷಣ ಅನುಮತಿ ಕೊಡಬಹುದು. ಯುವತಿ ಇರೋ ಜಾಗದಲ್ಲಿ ಈಗಾಗಲೇ ಭದ್ರತೆ ಒದಗಿಸಲಾಗಿದೆ. ನ್ಯಾಯಾಲಯ ಅನುಮತಿ ಕೊಟ್ಟ ತಕ್ಷಣ ಕರೆದುಕೊಂಡು ಬರ್ತೀನಿ. ಕಳೆದ 28 ದಿನಗಳಿಂದ ಆಕೆ ಒತ್ತಡದಲ್ಲಿದ್ದರು. ಅವರ ಆರೋಗ್ಯ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ. ಸಂತ್ರಸ್ತೆ ಕೋರ್ಟ್​ನಿಂದ ನಾಲ್ಕು ಕಿಮೀ ದೂರದಲ್ಲಿದ್ದಾಳೆ. ಐದು ಕಾರಿನಲ್ಲಿ ಯುವತಿಯ ಜತೆ ವಕೀಲರ ತಂಡ ಆಗಮಿಸುತ್ತಿದೆ ಎಂಬ ಮಾಹಿತಿಗಳೂ ದೊರೆತಿವೆ.

ಇದನ್ನೂ ಓದಿ: ಮೊದಲು ಕೋರ್ಟ್​ನಲ್ಲಿ ಸಿಡಿ ಯುವತಿಯ ಹೇಳಿಕೆ ದಾಖಲಿಸಲು ಜಡ್ಜ್ ಆದೇಶ

ಕೋರ್ಟ್​ಗೆ ಸಿಡಿ ಲೇಡಿ ಹಾಜರ್​ ಸಾಧ್ಯತೆ! ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ

Published On - 1:09 pm, Tue, 30 March 21

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ