ಬಿಎಸ್​​ವೈ ವಿರುದ್ಧ ಪ್ರಾಸಿಕ್ಯೂಷನ್​ ಕೊಡಿಸಿದ್ದು ಯಾರು? ಈಗ ಸಿದ್ದರಾಮಯ್ಯ ಭಯಗೊಂಡಿದ್ದಾರೆ: ಶೋಭಾ ಕಿಡಿ

ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ಇಂದು ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯಪಾಲರ ನೊಟೀಸ್​ಗೆ ಸಿಎಂ ಸಿದ್ದರಾಮಯ್ಯ ಭಯಗೊಂಡಿದ್ದಾರೆ. ಯಡಿಯೂರಪ್ಪ ವಿರುದ್ದ ಪ್ರಾಸಿಕ್ಯೂಷನ್​ಗೆ ಕೊಡಿಸಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಬಿಎಸ್​​ವೈ ವಿರುದ್ಧ ಪ್ರಾಸಿಕ್ಯೂಷನ್​ ಕೊಡಿಸಿದ್ದು ಯಾರು? ಈಗ ಸಿದ್ದರಾಮಯ್ಯ ಭಯಗೊಂಡಿದ್ದಾರೆ: ಶೋಭಾ ಕಿಡಿ
ಬಿಎಸ್​​ವೈ ವಿರುದ್ಧ ಪ್ರಾಸಿಕ್ಯೂಷನ್​ ಕೊಡಿಸಿದ್ದು ಯಾರು? ಈಗ ಸಿದ್ದರಾಮಯ್ಯ ಭಯಗೊಂಡಿದ್ದಾರೆ: ಶೋಭಾ ಕಿಡಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 01, 2024 | 4:03 PM

ಬೆಂಗಳೂರು/ದೆಹಲಿ, ಆಗಸ್ಟ್​ 01: ಬಿಎಸ್​ ಯಡಿಯೂರಪ್ಪ (Yediyurappa) ವಿರುದ್ದ ಪ್ರಾಸಿಕ್ಯೂಷನ್​ಗೆ ಕೊಡಿಸಿದ್ದು ಯಾರು? ರಾಜ್ಯಪಾಲರ ನೊಟೀಸ್​​ಗೆ ಸಿಎಂ ಸಿದ್ದರಾಮಯ್ಯ (Siddaramaiah) ಭಯಗೊಂಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೆ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಂದ ಯಡಿಯೂರಪ್ಪಗೆ ನೊಟೀಸ್ ಕೊಡಿಸಿತ್ತು. ಆದ್ದರಿಂದ ಅವರು ಸಾಕಷ್ಟು ಅನುಭವಿಸಿದ್ದರು ಎಂದು ಹೇಳಿದ್ದಾರೆ.

ಇಂದು ಸಂಪುಟ ಸಭೆಯಲ್ಲಿ ಗವರ್ನರ್ ವಿರುದ್ಧ ನಿರ್ಣಯ ತೆಗೆದುಕೊಂಡಿದ್ದಾರೆ. ಕಾನೂನಿನ ವಿರುದ್ಧ, ಸಂವಿಧಾನದ ವಿರುದ್ದ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ

ನೀವು ತಪ್ಪು ಮಾಡಿಲ್ಲ ಅಂದರೆ ಯಾಕೆ ಹೆದರುತ್ತಿದ್ದೀರಿ. ನೀವು ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ. ನಿರಪರಾಧಿ ಎಂದಾದರೆ ಮತ್ತೆ ಅಧಿಕಾರಕ್ಕೆ ಹಿಡಿಯಿರಿ. ಆದರೆ ರಾಜ್ಯಪಾಲರ ನೊಟೀಸ್​ಗೆ ನೀವು ಉತ್ತರಿಸಬೇಕು. ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ, ರಾಜೀನಾಮೆ ನೀಡಬೇಕು. ರಾಜ್ಯಪಾಲರ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಮುಡಾ ಹಗರಣ: ಮತ್ತೆ ವರದಿ ಕೇಳಿದ ರಾಜ್ಯಪಾಲ

ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಾಗಿರುವುದಿರಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿನ್ನೆ ವರದಿ ಕೇಳಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಮುಂಚೆ ಕೂಡ ರಾಜ್ಯಪಾಲರಿಗೆ ಹಗರಣದ ವರದಿ ನೀಡಲಾಗಿತ್ತು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಅಧಿಕಾರ ಇದ್ಯಾ? ಕಾನೂನು ಏನು ಹೇಳುತ್ತೆ?

ಇನ್ನು ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ಇಂದು ನಿರ್ಣಯ ಕೈಗೊಳ್ಳಲಾಗಿದೆ. ಜೊತೆಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಬಿಜೆಪಿ ಪಾದಯಾತ್ರೆ ಮಾಡೇ ಮಾಡುತ್ತೇವೆ

ವಾಲ್ಮೀಕಿ, ಮುಡಾ ಹಗರಣ ಖಂಡಿಸಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಪಾದಯಾತ್ರೆ ಮಾಡೇ ಮಾಡುತ್ತೇವೆ. ಜನರನ್ನು ಬರದೆ ಇರಲು ತಡೆಯಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಒಬ್ಬರಿರಬಹುದು ಅಥವಾ ಇಬ್ಬರಿರಬಹುದು ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ