AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?

ಬಿಪಿಎಲ್​ ಕಾರ್ಡ್​ಗೆ ಅರ್ಜಿ ಸಲ್ಲಿಸುವವರಿಗೆ ಹಿಂದಿನ ಮಾನದಂಡಗಳನ್ನೇ ಅನುಸರಿಸಲಾಗುತ್ತದೆ. ಅವುಗಳ ವಿವರ ಇಲ್ಲಿದೆ.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jun 07, 2023 | 2:31 PM

Share

ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದ್ದು, ಈ ಕುರಿತು ಆಹಾರ ಇಲಾಖೆಯ ಹೆಚ್ಚುವರಿ ನಿರ್ಧೆಶಕ ಘನೇಂದ್ರ ಕುಮಾರ್ ಸೋಮವಾರ ಮಾಹಿತಿ ನೀಡಿದ್ದಾರೆ. ಸದ್ಯ ಆಹಾರ ಇಲಾಖೆಯ ವೆಬ್​​ಸೈಟ್ ಡೆವಲಪ್ ಮಾಡುತ್ತಿದ್ದೇವೆ. ಡೆವೆಲಪ್ ಆದ ತಕ್ಷಣ ಅರ್ಜಿ ಅಹ್ವಾನ ಮಾಡುತ್ತೇವೆ. ಅರ್ಜಿ ಸಲ್ಲಿಸುವವರಿಗೆ ಹೊಸದಾಗಿ ಯಾವುದೇ ಮಾನದಂಡ ಇಲ್ಲ. ಬದಲಾಗಿ ಈ ಹಿಂದೆ ಇದ್ದಂತಹ ಮಾನದಂಡಗಳನ್ನೇ ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಮಾನದಂಡಗಳೇನು?

  • ಸರ್ಕಾರಿ ನೌಕರರಾಗಿರಬಾರದು
  • ಸರ್ಕಾರಕ್ಕೆ ಯಾವುದೇ ರೀತಿ ತೆರಿಗೆ ಪಾವತಿಸುವವರಾಗಿರಬಾರದು
  • ಮನೆಯ ಆದಾಯ ಒಂದು ಲಕ್ಷದ 20 ಸಾವಿರ ರೂ. ಮೀರಿರಬಾರದು
  • 3 ಹೆಕ್ಟೇರ್ ಗಿಂತ ಹೆಚ್ಚು ಜಮೀನು ಇರಬಾರದು
  • ಯಾವುದೇ ಕಮರ್ಷಿಯಲ್ ವಾಹನಗಳಿರಬಾರದು

ಪ್ರಸ್ತುತ ಈ ಹಿಂದೆ ಇದ್ದಂತಹ ಆಹಾರ ಇಲಾಖೆಯ ವೆಬ್​​ಸೈಟ್​​ನಲ್ಲಿಯೇ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗುತ್ತದೆ. ಎಷ್ಟು ಅರ್ಜಿಗಳನ್ನು ಅಂತಿಮಗೊಳಿಸಬೇಕು ಎಂಬ ಬಗ್ಗೆ ಸರ್ಕಾರದಿಂದ ಒಪ್ಪಿಗೆ ಪಡೆಯಬೇಕಿದೆ. ಕಳೆದ ಫೆಬ್ರವರಿಯವರೆಗೆ 2 ಲಕ್ಷದ 95 ಸಾವಿರದಷ್ಡು ಅರ್ಜಿಗಳು ಬಂದಿದೆ. ಅವುಗಳನ್ನು ದೃಡೀಕರಣ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ

ದೃಢೀಕರಣ ಪ್ರಕ್ರಿಯೆಯ ನಂತರವಷ್ಟೇ ಪಡಿತರ ಚೀಟಿಗಳನ್ನ ಕೊಡಲಾಗುತ್ತದೆ. ಜುಲೈ 1 ರಿಂದ 10 ಕೆಜಿ ಅಕ್ಕಿ ಕೊಡುವುದಕ್ಕೆ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಅಕ್ಕಿಯನ್ನು ಐಎಫ್​ಸಿಎ ಯಿಂದ ತರಿಸಿಕೊಳ್ಳಲಾಗುತ್ತದೆ. ಒಂದು ತಿಂಗಳಿಗೆ 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ನಷ್ಟು ಅಕ್ಕಿಬೇಕಾಗುತ್ತದೆ. ಇದಕ್ಕೆ ಸರಿಸುಮಾರು 600 ಕೋಟಿಯಷ್ಟು ಹಣ ಖರ್ಚಾಗುವ ಸಾಧ್ಯತೆ ಇದೆ. ಈ ಹಿಂದೆ 2 ಲಕ್ಷದ 17 ಲಕ್ಷ ಮೆಟ್ರಿಕ್ ಟನ್ ನಷ್ಟು ಅಕ್ಕಿಬೇಕಾಗುತ್ತಿತ್ತು. ಈ ಹಿಂದೆ 360 ಕೋಟಿಯಷ್ಟು ಹಣ ಖರ್ಚಾಗುತ್ತಿತ್ತು. ಇದೀಗಾ 240 ಕೋಟಿಯಷ್ಟು ಹೆಚ್ಚುವರಿಯಾಗಿ ಖರ್ಚು ಮಾಡಬೇಕಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Mon, 5 June 23

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ