AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?

ಬಿಪಿಎಲ್​ ಕಾರ್ಡ್​ಗೆ ಅರ್ಜಿ ಸಲ್ಲಿಸುವವರಿಗೆ ಹಿಂದಿನ ಮಾನದಂಡಗಳನ್ನೇ ಅನುಸರಿಸಲಾಗುತ್ತದೆ. ಅವುಗಳ ವಿವರ ಇಲ್ಲಿದೆ.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Jun 07, 2023 | 2:31 PM

ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದ್ದು, ಈ ಕುರಿತು ಆಹಾರ ಇಲಾಖೆಯ ಹೆಚ್ಚುವರಿ ನಿರ್ಧೆಶಕ ಘನೇಂದ್ರ ಕುಮಾರ್ ಸೋಮವಾರ ಮಾಹಿತಿ ನೀಡಿದ್ದಾರೆ. ಸದ್ಯ ಆಹಾರ ಇಲಾಖೆಯ ವೆಬ್​​ಸೈಟ್ ಡೆವಲಪ್ ಮಾಡುತ್ತಿದ್ದೇವೆ. ಡೆವೆಲಪ್ ಆದ ತಕ್ಷಣ ಅರ್ಜಿ ಅಹ್ವಾನ ಮಾಡುತ್ತೇವೆ. ಅರ್ಜಿ ಸಲ್ಲಿಸುವವರಿಗೆ ಹೊಸದಾಗಿ ಯಾವುದೇ ಮಾನದಂಡ ಇಲ್ಲ. ಬದಲಾಗಿ ಈ ಹಿಂದೆ ಇದ್ದಂತಹ ಮಾನದಂಡಗಳನ್ನೇ ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಮಾನದಂಡಗಳೇನು?

  • ಸರ್ಕಾರಿ ನೌಕರರಾಗಿರಬಾರದು
  • ಸರ್ಕಾರಕ್ಕೆ ಯಾವುದೇ ರೀತಿ ತೆರಿಗೆ ಪಾವತಿಸುವವರಾಗಿರಬಾರದು
  • ಮನೆಯ ಆದಾಯ ಒಂದು ಲಕ್ಷದ 20 ಸಾವಿರ ರೂ. ಮೀರಿರಬಾರದು
  • 3 ಹೆಕ್ಟೇರ್ ಗಿಂತ ಹೆಚ್ಚು ಜಮೀನು ಇರಬಾರದು
  • ಯಾವುದೇ ಕಮರ್ಷಿಯಲ್ ವಾಹನಗಳಿರಬಾರದು

ಪ್ರಸ್ತುತ ಈ ಹಿಂದೆ ಇದ್ದಂತಹ ಆಹಾರ ಇಲಾಖೆಯ ವೆಬ್​​ಸೈಟ್​​ನಲ್ಲಿಯೇ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗುತ್ತದೆ. ಎಷ್ಟು ಅರ್ಜಿಗಳನ್ನು ಅಂತಿಮಗೊಳಿಸಬೇಕು ಎಂಬ ಬಗ್ಗೆ ಸರ್ಕಾರದಿಂದ ಒಪ್ಪಿಗೆ ಪಡೆಯಬೇಕಿದೆ. ಕಳೆದ ಫೆಬ್ರವರಿಯವರೆಗೆ 2 ಲಕ್ಷದ 95 ಸಾವಿರದಷ್ಡು ಅರ್ಜಿಗಳು ಬಂದಿದೆ. ಅವುಗಳನ್ನು ದೃಡೀಕರಣ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ

ದೃಢೀಕರಣ ಪ್ರಕ್ರಿಯೆಯ ನಂತರವಷ್ಟೇ ಪಡಿತರ ಚೀಟಿಗಳನ್ನ ಕೊಡಲಾಗುತ್ತದೆ. ಜುಲೈ 1 ರಿಂದ 10 ಕೆಜಿ ಅಕ್ಕಿ ಕೊಡುವುದಕ್ಕೆ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಅಕ್ಕಿಯನ್ನು ಐಎಫ್​ಸಿಎ ಯಿಂದ ತರಿಸಿಕೊಳ್ಳಲಾಗುತ್ತದೆ. ಒಂದು ತಿಂಗಳಿಗೆ 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ನಷ್ಟು ಅಕ್ಕಿಬೇಕಾಗುತ್ತದೆ. ಇದಕ್ಕೆ ಸರಿಸುಮಾರು 600 ಕೋಟಿಯಷ್ಟು ಹಣ ಖರ್ಚಾಗುವ ಸಾಧ್ಯತೆ ಇದೆ. ಈ ಹಿಂದೆ 2 ಲಕ್ಷದ 17 ಲಕ್ಷ ಮೆಟ್ರಿಕ್ ಟನ್ ನಷ್ಟು ಅಕ್ಕಿಬೇಕಾಗುತ್ತಿತ್ತು. ಈ ಹಿಂದೆ 360 ಕೋಟಿಯಷ್ಟು ಹಣ ಖರ್ಚಾಗುತ್ತಿತ್ತು. ಇದೀಗಾ 240 ಕೋಟಿಯಷ್ಟು ಹೆಚ್ಚುವರಿಯಾಗಿ ಖರ್ಚು ಮಾಡಬೇಕಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Mon, 5 June 23

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?