AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?

ಬಿಪಿಎಲ್​ ಕಾರ್ಡ್​ಗೆ ಅರ್ಜಿ ಸಲ್ಲಿಸುವವರಿಗೆ ಹಿಂದಿನ ಮಾನದಂಡಗಳನ್ನೇ ಅನುಸರಿಸಲಾಗುತ್ತದೆ. ಅವುಗಳ ವಿವರ ಇಲ್ಲಿದೆ.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?
ಸಾಂದರ್ಭಿಕ ಚಿತ್ರ
Ganapathi Sharma
|

Updated on:Jun 07, 2023 | 2:31 PM

Share

ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದ್ದು, ಈ ಕುರಿತು ಆಹಾರ ಇಲಾಖೆಯ ಹೆಚ್ಚುವರಿ ನಿರ್ಧೆಶಕ ಘನೇಂದ್ರ ಕುಮಾರ್ ಸೋಮವಾರ ಮಾಹಿತಿ ನೀಡಿದ್ದಾರೆ. ಸದ್ಯ ಆಹಾರ ಇಲಾಖೆಯ ವೆಬ್​​ಸೈಟ್ ಡೆವಲಪ್ ಮಾಡುತ್ತಿದ್ದೇವೆ. ಡೆವೆಲಪ್ ಆದ ತಕ್ಷಣ ಅರ್ಜಿ ಅಹ್ವಾನ ಮಾಡುತ್ತೇವೆ. ಅರ್ಜಿ ಸಲ್ಲಿಸುವವರಿಗೆ ಹೊಸದಾಗಿ ಯಾವುದೇ ಮಾನದಂಡ ಇಲ್ಲ. ಬದಲಾಗಿ ಈ ಹಿಂದೆ ಇದ್ದಂತಹ ಮಾನದಂಡಗಳನ್ನೇ ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಮಾನದಂಡಗಳೇನು?

  • ಸರ್ಕಾರಿ ನೌಕರರಾಗಿರಬಾರದು
  • ಸರ್ಕಾರಕ್ಕೆ ಯಾವುದೇ ರೀತಿ ತೆರಿಗೆ ಪಾವತಿಸುವವರಾಗಿರಬಾರದು
  • ಮನೆಯ ಆದಾಯ ಒಂದು ಲಕ್ಷದ 20 ಸಾವಿರ ರೂ. ಮೀರಿರಬಾರದು
  • 3 ಹೆಕ್ಟೇರ್ ಗಿಂತ ಹೆಚ್ಚು ಜಮೀನು ಇರಬಾರದು
  • ಯಾವುದೇ ಕಮರ್ಷಿಯಲ್ ವಾಹನಗಳಿರಬಾರದು

ಪ್ರಸ್ತುತ ಈ ಹಿಂದೆ ಇದ್ದಂತಹ ಆಹಾರ ಇಲಾಖೆಯ ವೆಬ್​​ಸೈಟ್​​ನಲ್ಲಿಯೇ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗುತ್ತದೆ. ಎಷ್ಟು ಅರ್ಜಿಗಳನ್ನು ಅಂತಿಮಗೊಳಿಸಬೇಕು ಎಂಬ ಬಗ್ಗೆ ಸರ್ಕಾರದಿಂದ ಒಪ್ಪಿಗೆ ಪಡೆಯಬೇಕಿದೆ. ಕಳೆದ ಫೆಬ್ರವರಿಯವರೆಗೆ 2 ಲಕ್ಷದ 95 ಸಾವಿರದಷ್ಡು ಅರ್ಜಿಗಳು ಬಂದಿದೆ. ಅವುಗಳನ್ನು ದೃಡೀಕರಣ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ

ದೃಢೀಕರಣ ಪ್ರಕ್ರಿಯೆಯ ನಂತರವಷ್ಟೇ ಪಡಿತರ ಚೀಟಿಗಳನ್ನ ಕೊಡಲಾಗುತ್ತದೆ. ಜುಲೈ 1 ರಿಂದ 10 ಕೆಜಿ ಅಕ್ಕಿ ಕೊಡುವುದಕ್ಕೆ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಅಕ್ಕಿಯನ್ನು ಐಎಫ್​ಸಿಎ ಯಿಂದ ತರಿಸಿಕೊಳ್ಳಲಾಗುತ್ತದೆ. ಒಂದು ತಿಂಗಳಿಗೆ 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ನಷ್ಟು ಅಕ್ಕಿಬೇಕಾಗುತ್ತದೆ. ಇದಕ್ಕೆ ಸರಿಸುಮಾರು 600 ಕೋಟಿಯಷ್ಟು ಹಣ ಖರ್ಚಾಗುವ ಸಾಧ್ಯತೆ ಇದೆ. ಈ ಹಿಂದೆ 2 ಲಕ್ಷದ 17 ಲಕ್ಷ ಮೆಟ್ರಿಕ್ ಟನ್ ನಷ್ಟು ಅಕ್ಕಿಬೇಕಾಗುತ್ತಿತ್ತು. ಈ ಹಿಂದೆ 360 ಕೋಟಿಯಷ್ಟು ಹಣ ಖರ್ಚಾಗುತ್ತಿತ್ತು. ಇದೀಗಾ 240 ಕೋಟಿಯಷ್ಟು ಹೆಚ್ಚುವರಿಯಾಗಿ ಖರ್ಚು ಮಾಡಬೇಕಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Mon, 5 June 23

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ