BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?

ಬಿಪಿಎಲ್​ ಕಾರ್ಡ್​ಗೆ ಅರ್ಜಿ ಸಲ್ಲಿಸುವವರಿಗೆ ಹಿಂದಿನ ಮಾನದಂಡಗಳನ್ನೇ ಅನುಸರಿಸಲಾಗುತ್ತದೆ. ಅವುಗಳ ವಿವರ ಇಲ್ಲಿದೆ.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?
ಸಾಂದರ್ಭಿಕ ಚಿತ್ರ
Follow us
|

Updated on:Jun 07, 2023 | 2:31 PM

ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದ್ದು, ಈ ಕುರಿತು ಆಹಾರ ಇಲಾಖೆಯ ಹೆಚ್ಚುವರಿ ನಿರ್ಧೆಶಕ ಘನೇಂದ್ರ ಕುಮಾರ್ ಸೋಮವಾರ ಮಾಹಿತಿ ನೀಡಿದ್ದಾರೆ. ಸದ್ಯ ಆಹಾರ ಇಲಾಖೆಯ ವೆಬ್​​ಸೈಟ್ ಡೆವಲಪ್ ಮಾಡುತ್ತಿದ್ದೇವೆ. ಡೆವೆಲಪ್ ಆದ ತಕ್ಷಣ ಅರ್ಜಿ ಅಹ್ವಾನ ಮಾಡುತ್ತೇವೆ. ಅರ್ಜಿ ಸಲ್ಲಿಸುವವರಿಗೆ ಹೊಸದಾಗಿ ಯಾವುದೇ ಮಾನದಂಡ ಇಲ್ಲ. ಬದಲಾಗಿ ಈ ಹಿಂದೆ ಇದ್ದಂತಹ ಮಾನದಂಡಗಳನ್ನೇ ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಮಾನದಂಡಗಳೇನು?

  • ಸರ್ಕಾರಿ ನೌಕರರಾಗಿರಬಾರದು
  • ಸರ್ಕಾರಕ್ಕೆ ಯಾವುದೇ ರೀತಿ ತೆರಿಗೆ ಪಾವತಿಸುವವರಾಗಿರಬಾರದು
  • ಮನೆಯ ಆದಾಯ ಒಂದು ಲಕ್ಷದ 20 ಸಾವಿರ ರೂ. ಮೀರಿರಬಾರದು
  • 3 ಹೆಕ್ಟೇರ್ ಗಿಂತ ಹೆಚ್ಚು ಜಮೀನು ಇರಬಾರದು
  • ಯಾವುದೇ ಕಮರ್ಷಿಯಲ್ ವಾಹನಗಳಿರಬಾರದು

ಪ್ರಸ್ತುತ ಈ ಹಿಂದೆ ಇದ್ದಂತಹ ಆಹಾರ ಇಲಾಖೆಯ ವೆಬ್​​ಸೈಟ್​​ನಲ್ಲಿಯೇ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗುತ್ತದೆ. ಎಷ್ಟು ಅರ್ಜಿಗಳನ್ನು ಅಂತಿಮಗೊಳಿಸಬೇಕು ಎಂಬ ಬಗ್ಗೆ ಸರ್ಕಾರದಿಂದ ಒಪ್ಪಿಗೆ ಪಡೆಯಬೇಕಿದೆ. ಕಳೆದ ಫೆಬ್ರವರಿಯವರೆಗೆ 2 ಲಕ್ಷದ 95 ಸಾವಿರದಷ್ಡು ಅರ್ಜಿಗಳು ಬಂದಿದೆ. ಅವುಗಳನ್ನು ದೃಡೀಕರಣ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ

ದೃಢೀಕರಣ ಪ್ರಕ್ರಿಯೆಯ ನಂತರವಷ್ಟೇ ಪಡಿತರ ಚೀಟಿಗಳನ್ನ ಕೊಡಲಾಗುತ್ತದೆ. ಜುಲೈ 1 ರಿಂದ 10 ಕೆಜಿ ಅಕ್ಕಿ ಕೊಡುವುದಕ್ಕೆ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಅಕ್ಕಿಯನ್ನು ಐಎಫ್​ಸಿಎ ಯಿಂದ ತರಿಸಿಕೊಳ್ಳಲಾಗುತ್ತದೆ. ಒಂದು ತಿಂಗಳಿಗೆ 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ನಷ್ಟು ಅಕ್ಕಿಬೇಕಾಗುತ್ತದೆ. ಇದಕ್ಕೆ ಸರಿಸುಮಾರು 600 ಕೋಟಿಯಷ್ಟು ಹಣ ಖರ್ಚಾಗುವ ಸಾಧ್ಯತೆ ಇದೆ. ಈ ಹಿಂದೆ 2 ಲಕ್ಷದ 17 ಲಕ್ಷ ಮೆಟ್ರಿಕ್ ಟನ್ ನಷ್ಟು ಅಕ್ಕಿಬೇಕಾಗುತ್ತಿತ್ತು. ಈ ಹಿಂದೆ 360 ಕೋಟಿಯಷ್ಟು ಹಣ ಖರ್ಚಾಗುತ್ತಿತ್ತು. ಇದೀಗಾ 240 ಕೋಟಿಯಷ್ಟು ಹೆಚ್ಚುವರಿಯಾಗಿ ಖರ್ಚು ಮಾಡಬೇಕಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Mon, 5 June 23

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!