AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಯಾರು ವಾರಂಟ್​ ನೀಡ್ತಾರೆ: ಸಿಎಂ ಬಿಎಸ್​ವೈ, ಸಚಿವ ನಿರಾಣಿ ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚನೆ

ನೀವು ರಾಜ್ಯದ ಸಿಎಂ. ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ? ಅವರು ಬೇಕಿದ್ದರೆ ಮನವಿ ಪತ್ರ ಜಾರಿ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಜತೆಗೆ ತನಿಖೆ ಮುಂದುವರಿಸಲು ಸೂಚಿಸಿದೆ.

ನಿಮಗೆ ಯಾರು ವಾರಂಟ್​ ನೀಡ್ತಾರೆ: ಸಿಎಂ ಬಿಎಸ್​ವೈ, ಸಚಿವ ನಿರಾಣಿ ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚನೆ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on: Jan 27, 2021 | 6:58 PM

Share

ನವದೆಹಲಿ: ನಕಲಿ ಸಹಿಮಾಡಿ 26 ಎಕರೆ ಜಮೀನು ಹಿಂಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಬಂಧಿಸದಂತೆ ತನಿಖಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ, ತನಿಖೆಗೆ ತಡೆ ನೀಡಲು ಕೋರ್ಟ್​ ನಿರಾಕರಿಸಿದೆ.

ದೇವನಹಳ್ಳಿಯಲ್ಲಿ ವಸತಿ ಯೋಜನೆಯ ಭೂಮಿಯನ್ನು 2011ರಲ್ಲಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಿಂಪಡೆದಿದ್ದರು. ನಕಲಿ ಸಹಿಮಾಡಿ 26 ಎಕರೆ ಜಮೀನು ಹಿಂಪಡೆಯಲಾಗಿದೆ ಎಂದು ಉದ್ಯಮಿ ಆಲಂ ಪಾಷಾ ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಲೋಕಾಯುಕ್ತದಲ್ಲಿ ಆಲಂ ಪಾಷಾ ದೂರು ದಾಖಲಿಸಿದ್ದರು.

ಪ್ರಕರಣ ರದ್ದುಗೊಳಿಸಲು ಬಿಎಸ್​ವೈ, ನಿರಾಣಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಬಿಎಸ್​ವೈ, ನಿರಾಣಿ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಸಿಎಂ ಯಡಿಯೂರಪ್ಪ, ಸಚಿವ ನಿರಾಣಿ ಬಂಧಿಸದಂತೆ ಸೂಚನೆ ನೀಡಿದೆ.

ನೀವು ರಾಜ್ಯದ ಸಿಎಂ. ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ? ಅವರು ಬೇಕಿದ್ದರೆ ಮನವಿ ಪತ್ರ ಜಾರಿ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಜತೆಗೆ ತನಿಖೆ ಮುಂದುವರಿಸಲು ಸೂಚಿಸಿದೆ.

ಕೆಐಎಡಿಬಿ ಭೂ ಹಂಚಿಕೆ ವಿವಾದ: ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸುಪ್ರೀಂಕೋರ್ಟ್​ಗೆ ಯಡಿಯೂರಪ್ಪ ಅರ್ಜಿ

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್