ನಿಮಗೆ ಯಾರು ವಾರಂಟ್​ ನೀಡ್ತಾರೆ: ಸಿಎಂ ಬಿಎಸ್​ವೈ, ಸಚಿವ ನಿರಾಣಿ ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚನೆ

ನೀವು ರಾಜ್ಯದ ಸಿಎಂ. ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ? ಅವರು ಬೇಕಿದ್ದರೆ ಮನವಿ ಪತ್ರ ಜಾರಿ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಜತೆಗೆ ತನಿಖೆ ಮುಂದುವರಿಸಲು ಸೂಚಿಸಿದೆ.

ನಿಮಗೆ ಯಾರು ವಾರಂಟ್​ ನೀಡ್ತಾರೆ: ಸಿಎಂ ಬಿಎಸ್​ವೈ, ಸಚಿವ ನಿರಾಣಿ ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚನೆ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
Edited By:

Updated on: Jan 27, 2021 | 6:58 PM

ನವದೆಹಲಿ: ನಕಲಿ ಸಹಿಮಾಡಿ 26 ಎಕರೆ ಜಮೀನು ಹಿಂಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಬಂಧಿಸದಂತೆ ತನಿಖಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ, ತನಿಖೆಗೆ ತಡೆ ನೀಡಲು ಕೋರ್ಟ್​ ನಿರಾಕರಿಸಿದೆ.

ದೇವನಹಳ್ಳಿಯಲ್ಲಿ ವಸತಿ ಯೋಜನೆಯ ಭೂಮಿಯನ್ನು 2011ರಲ್ಲಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಿಂಪಡೆದಿದ್ದರು. ನಕಲಿ ಸಹಿಮಾಡಿ 26 ಎಕರೆ ಜಮೀನು ಹಿಂಪಡೆಯಲಾಗಿದೆ ಎಂದು ಉದ್ಯಮಿ ಆಲಂ ಪಾಷಾ ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಲೋಕಾಯುಕ್ತದಲ್ಲಿ ಆಲಂ ಪಾಷಾ ದೂರು ದಾಖಲಿಸಿದ್ದರು.

ಪ್ರಕರಣ ರದ್ದುಗೊಳಿಸಲು ಬಿಎಸ್​ವೈ, ನಿರಾಣಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಬಿಎಸ್​ವೈ, ನಿರಾಣಿ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಸಿಎಂ ಯಡಿಯೂರಪ್ಪ, ಸಚಿವ ನಿರಾಣಿ ಬಂಧಿಸದಂತೆ ಸೂಚನೆ ನೀಡಿದೆ.

ನೀವು ರಾಜ್ಯದ ಸಿಎಂ. ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ? ಅವರು ಬೇಕಿದ್ದರೆ ಮನವಿ ಪತ್ರ ಜಾರಿ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಜತೆಗೆ ತನಿಖೆ ಮುಂದುವರಿಸಲು ಸೂಚಿಸಿದೆ.

ಕೆಐಎಡಿಬಿ ಭೂ ಹಂಚಿಕೆ ವಿವಾದ: ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸುಪ್ರೀಂಕೋರ್ಟ್​ಗೆ ಯಡಿಯೂರಪ್ಪ ಅರ್ಜಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us