AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಹೆಚ್ಚುವರಿ ಕಾವೇರಿ ನೀರು ಪಡೆಯಲು ತಮಿಳುನಾಡಿಗೆ ಅವಕಾಶ ನೀಡಲ್ಲ- ಮುಖ್ಯಮಂತ್ರಿ ಯಡಿಯೂರಪ್ಪ

ಹೆಚ್ಚುವರಿ ಕಾವೇರಿ ನೀರು ಪಡೆಯಲು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಅವಕಾಶ ನೀಡಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಇಂತಹ ಹೇಳಿಕೆಗಳನ್ನು ಕೊಡುವುದರಿಂದ ಉಪಯೋಗವಿಲ್ಲ ಎಂದರು.

ಯಾವುದೇ ಕಾರಣಕ್ಕೂ ಹೆಚ್ಚುವರಿ ಕಾವೇರಿ ನೀರು ಪಡೆಯಲು ತಮಿಳುನಾಡಿಗೆ ಅವಕಾಶ ನೀಡಲ್ಲ- ಮುಖ್ಯಮಂತ್ರಿ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
| Edited By: |

Updated on: Feb 22, 2021 | 12:49 PM

Share

ಬೆಂಗಳೂರು: ಹೆಚ್ಚುವರಿ ಕಾವೇರಿ ನೀರನ್ನು ಪಡೆಯಲು ತಮಿಳುನಾಡು ಕಣ್ಣು ಹಾಕಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಕಾವೇರಿ ನೀರು ಪಡೆಯಲು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಅವಕಾಶ ನೀಡಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಇಂತಹ ಹೇಳಿಕೆಗಳನ್ನು ಕೊಡುವುದರಿಂದ ಉಪಯೋಗವಿಲ್ಲ. ಯಾವ ಕಾರಣಕ್ಕೂ ಮತ್ತೊಮ್ಮೆ ತಗೊಳ್ಳೋದು, ಕೊಡೋದಕ್ಕೆ ಅವಕಾಶ ಇಲ್ಲ. ನಾವು ಕೂಡ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತೇವೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಯೋಚನೆ ಮಾಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕಾವೇರಿ ನದಿ ಜೋಡಣೆಗೆ ಶಂಕುಸ್ಥಾಪನೆ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಫೆಬ್ರವರಿ 21ರಂದು ಕಾವೇರಿ ನದಿಗಳ ಜೋಡಣೆ ಮೊದಲ ಹಂತದ ಬೃಹತ್​ ಯೋಜನೆಗೆ ಚಾಲನೆ ನೀಡಿದ್ದಾರೆ. ಇದು 6,941 ಕೋಟಿ ರೂ. ವೆಚ್ಚದ ಯೋಜನೆಯಾಗಿದ್ದು, ಮೊದಲ ಹಂತದಲ್ಲಿ ವೆಲ್ಲಾರು, ವೈಗೈ, ಗುಂಡಾರು ಜೋಡಣೆಗಳನ್ನು ಮಾಡಲಾಗುವುದು. ಈ ಯೋಜನೆಗಿಂದು ವಿರಾಳಿಮಲೈ- ಕುಣ್ಣತ್ತೂರು ಬಳಿ ಸಿಎಂ ಪಳಿನಿಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಮಾರ್ಚ್​ 1ರಂದು ಪ್ರಧಾನಿ ನರೇಂದ್ರ ಮೋದಿ ಇನ್ನೊಮ್ಮೆ ಚಾಲನೆ ನೀಡಲಿದ್ದಾರೆ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವ ಬೆನ್ನಲ್ಲೇ ಅಲ್ಲಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಕಾವೇರಿ ನದಿ ನೀರಿನ ಬಗ್ಗೆ ಮತ್ತಷ್ಟು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇನ್ನು ಮೊದಲಿನಿಂದಲೂ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಕಾವೇರಿ ವಿವಾದ ಇದ್ದು, ಸದ್ಯ ತಮಿಳುನಾಡು ಕೈಗೆತ್ತಿಕೊಂಡಿರುವ ನದಿ ಜೋಡಣೆಯಿಂದಲೂ ರಾಜ್ಯಕ್ಕೆ ಅನನುಕೂಲವಾಗಲಿದೆ ಎಂದು ಜಲತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಮೇಶ್​ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ಅತ್ತ ತಮಿಳುನಾಡು ಸಿಎಂ ಕಾವೇರಿ ನದಿ ಜೋಡಣೆಗಳ ಯೋಜನೆಗೆ ಶಂಕುಸ್ಥಾಪನೆ ಮಾಡುತ್ತಿದ್ದರೆ, ಅದರಿಂದ ರಾಜ್ಯಕ್ಕೆ ಆಗುವ ಅನಾನುಕೂಲದ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್​ ಜಾರಕಿಹೊಳಿ ಸಭೆ ನಡೆಸಿದ್ದಾರೆ. ರಾಜ್ಯದ ವಕೀಲರ ತಂಡ, ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಮುಂದೆ ಯಾವ ರೀತಿಯಲ್ಲಿ ಕಾನೂನು ಹೋರಾಟ ನಡೆಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಹಾಗೇ, ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್​ರನ್ನು ರಮೇಶ್​ ಜಾರಕಿಹೊಳಿ ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: ಗೋದಾವರಿ-ಕಾವೇರಿ ನದಿ ಜೋಡಣೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಿ: ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮನವಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್