AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಕಾಡಂಚಿನ ಗ್ರಾಮದಲ್ಲಿ ಅರ್ಧಕ್ಕರ್ಧ ಜನರಿಗೆ ಕೊರೊನಾ ಪಾಸಿಟಿವ್: ಇಡೀ ಊರನ್ನೇ ಸೀಲ್​ಡೌನ್ ಮಾಡಿದ ಅಧಿಕಾರಿಗಳು

ಆರೋಗ್ಯಾಧಿಕಾರಿಗಳು ಏಪ್ರಿಲ್ 10 ಮತ್ತು 11ರಂದು ಅಬನಾಳಿ ಗ್ರಾಮದ 350 ಜನರ ಪೈಕಿ 249 ಜನರ ತಪಾಸಣೆ ನಡೆಸಿ ಮೂಗು ಹಾಗೂ ಗಂಟಲು ದ್ರವದ ಮಾದರಿಯನ್ನು ತೆಗೆದು RT-PCR ಪರೀಕ್ಷೆಗೆ ಕಳುಹಿಸಿದ್ದಾರೆ. ನಿನ್ನೆ (ಏಪ್ರಿಲ್ 20) ವರದಿ ಲಭ್ಯವಾಗಿದ್ದು, ಸಂಗ್ರಹಿಸಿದ್ದ 249 ಮಾದರಿಗಳ ಪೈಕಿ 146 ಮಾದರಿಗಳು ಕೊವಿಡ್ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.

ಬೆಳಗಾವಿಯ ಕಾಡಂಚಿನ ಗ್ರಾಮದಲ್ಲಿ ಅರ್ಧಕ್ಕರ್ಧ ಜನರಿಗೆ ಕೊರೊನಾ ಪಾಸಿಟಿವ್: ಇಡೀ ಊರನ್ನೇ ಸೀಲ್​ಡೌನ್ ಮಾಡಿದ ಅಧಿಕಾರಿಗಳು
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Apr 21, 2021 | 7:34 AM

Share

ಬೆಳಗಾವಿ: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ ಮೇ.4ರ ತನಕ ಕೆಲ ಕಠಿಣ ನಿಯಮಗಳನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನಡುವೆ ಕೆಲವೆಡೆ ಕಾರ್ಮಿಕರ ವಲಸೆ ಆರಂಭವಾಗಿದ್ದು, ಬೆಳಗಾವಿ ಜಿಲ್ಲೆಗೆ ಇದು ಮಾರಕವಾಗಿ ಪರಿಣಮಿಸುತ್ತಿದೆ. ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಾಡಂಚಿನಲ್ಲಿರುವ ಪುಟ್ಟ ಗ್ರಾಮವಾದ ಅಬನಾಳಿ ಎಂಬಲ್ಲಿ ಬರೋಬ್ಬರಿ 146 ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಇಡೀ ಗ್ರಾಮವನ್ನೇ ಸೀಲ್​ಡೌನ್ ಮಾಡಿದ್ದಾರೆ. ಮಹಾರಾಷ್ಟ್ರದಿಂದ ಸ್ವಗ್ರಾಮಕ್ಕೆ ಬರುತ್ತಿರುವ ಕಾರ್ಮಿಕರಿಂದಲೇ ಕೊರೊನಾ ವೇಗವಾಗಿ ಹಬ್ಬುತ್ತಿದೆ ಎನ್ನಲಾಗುತ್ತಿರುವುದರಿಂದ ಸೋಂಕು ನಿಯಂತ್ರಿಸಲು ಕಠಿಣ ಕ್ರಮಗಳ ಮೊರೆ ಹೋಗಿದ್ದಾರೆ.

ಅಬನಾಳಿ ಗ್ರಾಮದಲ್ಲಿ ಏಪ್ರಿಲ್ 6 ರಂದು ಹೋಳಿ ಹುಣ್ಣಿಮೆ ನಿಮಿತ್ತ ಸಾತೇರಿ ದೇವಿ ಜಾತ್ರೆ ನಡೆದಿತ್ತು. ಜಾತ್ರೆಯ ಅಂಗವಾಗಿ ನಾಟಕ ಪ್ರದರ್ಶನವನ್ನೂ ಹಮ್ಮಿಕೊಳ್ಳಲಾಗಿತ್ತು. ಊರ ಜಾತ್ರೆಯಾದ್ದರಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾರ್ಮಿಕರು ಮರಳಿ ಊರಿಗೆ ಬಂದಿದ್ದಾರೆ. ಅದಾಗಿ ಮೂರು ದಿನಗಳ ಅಂತರದಲ್ಲಿ ಅಂದರೆ ಏಪ್ರಿಲ್ 9ರ ಸುಮಾರಿಗೆ ಅಬನಾಳಿ ಗ್ರಾಮದ ಕೆಲವರಲ್ಲಿ ಕೊರೊನಾ ಸೋಂಕಿನ ಗುಣಲಕ್ಷಣಗಳು ಕಾಣಿಸಿಕೊಂಡಿವೆ. ಇದಾದ ನಂತರ ಎಚ್ಚೆತ್ತ ಆರೋಗ್ಯಾಧಿಕಾರಿಗಳು ಏಪ್ರಿಲ್ 10 ಮತ್ತು 11 ರಂದು ಅಬನಾಳಿ ಗ್ರಾಮದ 350 ಜನರ ಪೈಕಿ 249 ಜನರ ತಪಾಸಣೆ ನಡೆಸಿ ಮೂಗು ಹಾಗೂ ಗಂಟಲು ದ್ರವದ ಮಾದರಿಯನ್ನು ತೆಗೆದು RT-PCR ಪರೀಕ್ಷೆಗೆ ಕಳುಹಿಸಿದ್ದಾರೆ.

ಕೊರೊನಾ ಪರೀಕ್ಷೆಗೆ ಸಂಬಂಧಿಸಿದಂತೆ ನಿನ್ನೆ (ಏಪ್ರಿಲ್ 20) ವರದಿ ಲಭ್ಯವಾಗಿದ್ದು, ಸಂಗ್ರಹಿಸಿದ್ದ 249 ಮಾದರಿಗಳ ಪೈಕಿ 146 ಮಾದರಿಗಳು ಕೊವಿಡ್ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಮೊದಲೇ ಪುಟ್ಟ ಗ್ರಾಮವಾಗಿರುವ ಅಬನಾಳಿಯೊಂದರಲ್ಲೇ ಹೀಗೆ ಸಾಲು ಸಾಲು ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಕಂಗಾಲಾದ ಅಧಿಕಾರಿಗಳು ತಕ್ಷಣ ಗ್ರಾಮಕ್ಕೆ ಧಾವಿಸಿದ್ದಾರೆ. ಖಾನಾಪುರ ತಹಶಿಲ್ದಾರ್ ರೇಷ್ಮಾ ತಾಳಿಕೋಟಿ, ಟಿಹೆಚ್‌ಒ ಡಾ.ಸಂಜೀವ್ ನಾಂದ್ರೆ ಹಾಗೂ ಇನ್ನಿತರರು ಭೇಟಿ ನೀಡಿ ಸೋಂಕಿತರನ್ನು ಊರ ಹೊರಗೆ ಕರೆದು ಕೂರಿಸಿ ಮುಂಜಾಗ್ರತಾ ಕ್ರಮದ ಪಾಠ ಮಾಡಿದ್ದಾರೆ. ಬಳಿಕ ಗ್ರಾಮದ ಹೊರವಲಯದಲ್ಲಿ ಮರದ ಕೊಂಬೆಗಳನ್ನು ಹಾಕಿ ಇಡೀ ಗ್ರಾಮವನ್ನೇ ಸೀಲ್‌ಡೌನ್ ಮಾಡಿದ್ದಾರೆ.

(Whole Village Sealed Down as Half of the villagers tested positive for coronavirus in Belagavi)

ಇದನ್ನೂ ಓದಿ: Karnataka Weekend Curfew: ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ವೀಕೆಂಡ್​ ಕರ್ಫ್ಯೂ ಘೋಷಿಸಿದ ಸರ್ಕಾರ, ಶಾಲಾ-ಕಾಲೇಜುಗಳು ಕ್ಲೋಸ್​ 

ಕೊರೊನಾ ಮೂರನೇ ಬಾರಿಗೆ ರೂಪಾಂತರ; ಅಕ್ಟೋಬರ್​ನಲ್ಲೇ ಸುಳಿವಿದ್ದರೂ ಮೈಮರೆತುಬಿಟ್ಟಿತಾ ಭಾರತ?

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ