ಕರ್ನಾಟಕಕ್ಕೆ ಹನಿ ನೀರು ಕೊಡಲ್ಲ ಎಂದಿದ್ದ ಸೋನಿಯಾ ಗಾಂಧಿ ಪಕ್ಷ, ಯಾವ ಪುರುಷಾರ್ಥಕ್ಕಾಗಿ ಮಹದಾಯಿ ಸಮಾವೇಶ ಮಾಡ್ತಿದೆ? -ಸಚಿವ ಜೋಶಿ ಪ್ರಶ್ನೆ

Mahadayi rally: 2006 ರಲ್ಲಿ ಲೋಕಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮೂಲಕ ಕುಡಿಯುವ ನೀರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕೇಂದ್ರಕ್ಕೆ ನಾನು ಒತ್ತಾಯಿಸಿದ್ದೆ. ಮಹದಾಯಿಗಾಗಿ ರೈತರು ಹೋರಾಟ ಕೈಗೊಂಡಾಗ ಮಹಿಳೆಯರು, ರೈತರ ಮೇಲೆ ಲಾಠಿಚಾರ್ಜ್ ಮಾಡಿಸಿದ್ದು ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ.

ಕರ್ನಾಟಕಕ್ಕೆ ಹನಿ ನೀರು ಕೊಡಲ್ಲ ಎಂದಿದ್ದ ಸೋನಿಯಾ ಗಾಂಧಿ ಪಕ್ಷ, ಯಾವ ಪುರುಷಾರ್ಥಕ್ಕಾಗಿ ಮಹದಾಯಿ ಸಮಾವೇಶ ಮಾಡ್ತಿದೆ? -ಸಚಿವ ಜೋಶಿ ಪ್ರಶ್ನೆ
ಕರ್ನಾಟಕಕ್ಕೆ ಹನಿ ನೀರು ಕೊಡಲ್ಲ ಎಂದಿದ್ದ ಸೋನಿಯಾ ಗಾಂಧಿ
Follow us
| Updated By: ಸಾಧು ಶ್ರೀನಾಥ್​

Updated on: Jan 02, 2023 | 5:02 PM

ಹುಬ್ಬಳ್ಳಿಯಲ್ಲಿ ಇಂದು ಸೋಮವಾರ ಮಹದಾಯಿ (Mahadayi) ಸಮಾವೇಶ ನಡೆಸುತ್ತಿರುವ ಕಾಂಗ್ರೆಸ್ ನಡೆಯನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಹದಾಯಿ ಸಮಾವೇಶ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು (Pralhad Joshi), ಮಹದಾಯಿ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಕಾಂಗ್ರೆಸ್ ಕೊಡುಗೆ ಏನು..? ಎಂದು ಪ್ರಶ್ನಿಸಿದರು.

ಕುಡಿಯುವ ನೀರಿಗೋಸ್ಕರ ನಾವು ಕಾಲುವೆ ಕಟ್ಟಿದರೆ, ಕಾಲುವೆಗೆ ನೀರು ಹೋಗದಂತೆ ಗೋಡೆ ಕಟ್ಟಿದ್ದು ಗೋವಾ ಕಾಂಗ್ರೆಸ್ ಸರ್ಕಾರ.‌ ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರನ್ನು ಕೊಡಲ್ಲ ಎಂದು ಗೋವಾಗೆ (Goa) ಹೋಗಿ ಭಾಷಣ ಮಾಡಿದವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು. ಮನಮೋಹನ್ ಸಿಂಗ್ ಅವರಿಗೆ ನಾವೆಲ್ಲ ಹೋಗಿ ಕುಡಿಯುವ ನೀರನ್ನಷ್ಟು ಬಿಟ್ಟು ಉಳಿದಿದ್ದನ್ನ ಟ್ರಿಬುನಲ್ ಗೆ ವಹಿಸಿ ಎಂದು ಮನವಿ ಮಾಡಿದ್ದೆವು. ಆದರೆ ಅಂದು ಪ್ರಧಾನಿ ಆಗಿದ್ದ ಮನಮೋಹನ್ ಸಿಂಗ್ ಸಮಸ್ಯೆ ಬಗೆಹರಿಸದೆ ಮಹದಾಯಿ ವಿವಾದವನ್ನ ಟ್ರಿಬುನಲ್ ಗೆ ವಹಿಸಿದ್ರು. ಈಗ ಯಾವ ಪುರುಷಾರ್ಥಕ್ಕಾಗಿ ಕಾಂಗ್ರೆಸ್ ಹುಬ್ಬಳ್ಳಿಯಲ್ಲಿ ಮಹದಾಯಿ ಸಮಾವೇಶ ನಡೆಸ್ತಿದೆ..? ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದರು.

2006 ರಲ್ಲಿ ಲೋಕಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮೂಲಕ ಕುಡಿಯುವ ನೀರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಾನು ಒತ್ತಾಯಿಸಿದ್ದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಳಸ ಬಂಡೂರಿ ಯೋಜನೆ ಸಿದ್ಧಪಡಿಸಿದರೆ ಅದರ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗಿದ್ದು ಗೋವಾ ಕಾಂಗ್ರೆಸ್ ಸರ್ಕಾರ. ಮಹದಾಯಿಗಾಗಿ ರೈತರು ಬೃಹತ್ ಹೋರಾಟ ಕೈಗೊಂಡಾಗ, ಮಹಿಳೆಯರ ಮೇಲೆ, ರೈತರ ಮೇಲೆ ಲಾಠಿಚಾರ್ಜ್ ಮಾಡಿಸಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ.

ಮಹದಾಯಿ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಕೊಡುಗೆ ನೀಡಿದ್ದರೆ ಅದು ಬಿಜೆಪಿ ಸರ್ಕಾರ:

 

ಟ್ರಿಬುನಲ್ ಅವಾರ್ಡ್ ಬಳಿಕ ಅದನ್ನ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ದು ನರೇಂದ್ರ ಮೋದಿಯವರು. ಅಲ್ಲದೇ ಇದೀಗ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕಳಸ ಬಂಡೂರಿ ಯೋಜನೆಯ ಡಿಪಿಆರ್ ಗೂ ಅನುಮತಿ ನೀಡಿದೆ.

ಎರಡೂವರೆ ತಿಂಗಳೊಳಗೆ ಕಳಸ ಬಂಡೂರಿ ಯೋಜನೆ ಕಾಮಗಾರಿ ಆರಂಭಿಸಲು ಶಂಕುಸ್ಥಾಪನೆ ನೆರವೇರಿಸುವುದಾಗಿ ಸ್ವತಃ ಸಿಎಂ, ನೀರಾವರಿ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಫಾರೆಸ್ಟ್ ಕ್ಲಿಯರೆನ್ಸ್ ಕೂಡ ರಾಜ್ಯ ಸರ್ಕಾರದ ಮಟ್ಟದಲ್ಲೇ ತೆಗೆದುಕೊಳ್ಳಲು ಅವಕಾಶವಿದೆ. ಹೀಗಿರುವಾಗ ಕಾಂಗ್ರೆಸ್ ಯಾವ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಮಹದಾಯಿ ಸಮಾವೇಶ ನಡೆಸ್ತಿದೆ ಎಂದು ಪ್ರಲ್ಹಾದ್ ಜೋಶಿ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ:

ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ: ಕಾಂಗ್ರೆಸ್ಸಿಗರ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಸಿಎಂ ಬೊಮ್ಮಾಯಿ

ಡಿಪಿಆರ್ ಗೆ ಕೇಂದ್ರ ಅನುಮೋದನೆ ನೀಡಿದ ಆದೇಶದಲ್ಲಿ ಡೇಟ್ ಇಲ್ಲ ಎಂದು ಎಚ್.ಕೆ. ಪಾಟೀಲ್ ಹೇಳಿದ್ರು. ಎಲ್ಲರಿಗೂ ಸಿಕ್ಕಿರುವ ಡೇಟ್ ಇವರಿಗೆ ಮಾತ್ರ ಸಿಗಲ್ವಾ..? ಎಚ್.ಕೆ ಪಾಟೀಲ್ ನೀರಾವರಿ ಸಚಿವರಾಗಿ ಪುಸ್ತಕ ಬರೆಸಿದ್ದು ಬಿಟ್ಟರೆ ಬೇರೆ ಏನೂ ಮಾಡಲಿಲ್ಲ ಎಂದು ಇದೇ ವೇಳೆ ಪ್ರಲ್ಹಾದ್ ಜೋಶಿ ಟೀಕೆ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’