AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮಗಳ ಹೇಳಿಕೆ ಪಡೆಯುವಾಗ ಕಾಂಗ್ರೆಸ್ ಪದಾಧಿಕಾರಿ ಯಾಕೆ ಉಪಸ್ಥಿತರಿದ್ದರು? ಇದು ಕಾನೂನು ಬಾಹಿರ ಪ್ರಕ್ರಿಯೆ: ಸಿಡಿ ಸಂತ್ರಸ್ತೆಯ ತಂದೆಯಿಂದ ಆರೋಪ

ಇನ್ನು ಲೈಂಗಿಕ ದೌರ್ಜನ್ಯದ ಸಂದರ್ಭದಲ್ಲಿ ವೈದ್ಯಕೀಯ ಪರೀಕ್ಷೆಯೇ ಮುಖ್ಯ. ಆದರೆ ನನ್ನ ಮಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸದೆ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ನಾನು, ಕುಟುಂಬದ ಸದಸ್ಯರು, ಪುತ್ರಿ ರಾಜಕೀಯದ ಬಲಿಪಶುಗಳಾಗಿದ್ದೇವೆ ಎಂದು ಆರೋಪಿಸಿದ್ದಾರೆ.

ನನ್ನ ಮಗಳ ಹೇಳಿಕೆ ಪಡೆಯುವಾಗ ಕಾಂಗ್ರೆಸ್ ಪದಾಧಿಕಾರಿ ಯಾಕೆ ಉಪಸ್ಥಿತರಿದ್ದರು? ಇದು ಕಾನೂನು ಬಾಹಿರ ಪ್ರಕ್ರಿಯೆ: ಸಿಡಿ ಸಂತ್ರಸ್ತೆಯ ತಂದೆಯಿಂದ ಆರೋಪ
ಯುವತಿ ಹಾಗೂ ಆಕೆಯ ತಂದೆ
Lakshmi Hegde
| Edited By: |

Updated on:Mar 31, 2021 | 7:55 PM

Share

ಬೆಂಗಳೂರು: ಸಿಡಿ ಸಂತ್ರಸ್ತೆಯ ನಿನ್ನೆಯಷ್ಟೇ ಜಡ್ಜ್​ ಎದುರು ಬಂದು ದೂರಿನ ರೂಪದಲ್ಲಿ ಹೇಳಿಕೆ ನೀಡಿದ್ದಳು. ಆದರೆ ಇದೀಗ ಆಕೆಯ ತಂದೆ ಈ ಹೇಳಿಕೆಯನ್ನು ಪರಿಗಣಿಸಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್​ ಅಂತಿಮ ಆದೇಶದವರೆಗೂ ಹೇಳಿಕೆಯನ್ನು ಗಣನೆಗೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.  ಅಷ್ಟೇ ಅಲ್ಲ, ನನ್ನ ಮಗಳ ಹೇಳಿಕೆಯನ್ನು ಪಡೆಯುವಾಗ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್​ ಉಪಸ್ಥಿತಿ ಇದ್ದಿದ್ದು ಯಾಕೆಂದು ಪ್ರಶ್ನೆ ಮಾಡಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದರೆ, ನನ್ನ ಮಗಳು ಹೇಳಿಕೆ ನೀಡುವಾಗ ಸೂರ್ಯಮುಕುಂದ ರಾಜ್ ಇರುವುದು ಸ್ಪಷ್ಟವಾಗುತ್ತದೆ. ಸಿಆರ್​ಪಿಸಿ 164ರಡಿ ಹೇಳಿಕೆ ದಾಖಲು ಮಾಡಿಕೊಳ್ಳುವಾಗ ಕಾಂಗ್ರೆಸ್ ಪದಾಧಿಕಾರಿ ಇದ್ದಿದ್ದು ಯಾಕೆ? ನನ್ನ ಮಗಳ ಹೇಳಿಕೆ ದಾಖಲು ಪ್ರಕ್ರಿಯೆಯೇ ಕಾನೂನು ಬಾಹಿರವಾಗಿದೆ. ಆಕೆಯ ಗೌರವ-ಘನತೆ, ವ್ಯಕ್ತಿತ್ವಕ್ಕೆ ಧಕ್ಕೆ ತರುವ ಬೆಳವಣಿಗೆ ನಡೆದಿದೆ ಎಂದು ಹೈಕೋರ್ಟ್​ಗೆ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ವೈದ್ಯಕೀಯ ಪರೀಕ್ಷೆ ಮುಖ್ಯ ಇನ್ನು ಲೈಂಗಿಕ ದೌರ್ಜನ್ಯದ ಸಂದರ್ಭದಲ್ಲಿ ವೈದ್ಯಕೀಯ ಪರೀಕ್ಷೆಯೇ ಮುಖ್ಯ. ಆದರೆ ನನ್ನ ಮಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸದೆ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ನಾನು, ಕುಟುಂಬದ ಸದಸ್ಯರು, ಪುತ್ರಿ ರಾಜಕೀಯದ ಬಲಿಪಶುಗಳಾಗಿದ್ದೇವೆ. ನಮ್ಮ ಕುಟುಂಬದ ಘನತೆ, ಗೌರವಕ್ಕೆ ಧಕ್ಕೆ ತರುವ ಎಲ್ಲ ಬೆಳವಣಿಗೆಗಳೂ ಆಗಿವೆ. ಸಂವಿಧಾನದ 21ನೇ ವಿಧಿ ಅಡಿ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದೆಲ್ಲಕ್ಕೂ ಗೃಹ ಇಲಾಖೆ, ಎಸ್‌ಐಟಿ, ಕಬ್ಬನ್‌ ಪಾರ್ಕ್‌ ಪೊಲೀಸರೇ ಹೊಣೆ ಎಂದು ಅರ್ಜಿಯಲ್ಲಿ ತಿಳಿಸಿರುವ ಯುವತಿಯ ತಂದೆ, ಸಿಆರ್‌ಪಿಸಿ 164 ಹೇಳಿಕೆ ರದ್ದುಪಡಿಸಲು ಮನವಿ ಮಾಡಿದ್ದಾರೆ. ನಾವೀಗ ಬೇರೆ ದಾರಿ ಕಾಣದೆ ಹೈಕೋರ್ಟ್​ ಮೆಟ್ಟಿಲೇರಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ:  ಸಿಡಿ ಸಂತ್ರಸ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​; ಮಗಳ ಹೇಳಿಕೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ತಂದೆ

Published On - 7:38 pm, Wed, 31 March 21

Follow Us
Lakshmi Hegde
Lakshmi Hegde
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​