AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM ಕೊವಿಡ್ ನಿಧಿಗೆ ಹರಿದು ಬರ್ತಿದೆ ಹಣ, ಆದ್ರೆ ನಯಾ ಪೈಸೆ ಬಳಸಿಲ್ಲ ಯಾಕೆ?

ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟ ಎದುರಿಸಲು ಸಿಎಂ ಕೊವಿಡ್ ಪರಿಹಾರ ನಿಧಿಯನ್ನು ಕಾಯ್ದಿಸಲಾಗಿತ್ತು. ಇದರಲ್ಲಿ ಸಂಗ್ರಹವಾಗುವ ಹಣವನ್ನು ಕೊವಿಡ್ ಚಿಕಿತ್ಸೆಗೆ ಹಾಗೂ ಇತರ ನಿರ್ವಾಹಣೆಗೆ ಬಳಸಲು ತೀರ್ಮಾನಿಸಲಾಗಿತ್ತು. ಆದರೆ ಸಿಎಂ ಕೊವಿಡ್ ಪರಿಹಾರ ನಿಧಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ಕೋಟಿ ಗಟ್ಟಲೆ ಹಣ ಇದ್ರೂ ಸರ್ಕಾರ ನಯಾ ಪೈಸೆ ಖರ್ಚು ಮಾಡಿಲ್ಲ ಯಾಕೆ? ಸೋಂಕಿತರ ಚಿಕಿತ್ಸೆಗೆ, ವೈದ್ಯಕೀಯ ಸೇವೆಗೆ ಬಳಸಿಕೊಂಡಿಲ್ಲ ಯಾಕೆ? ಕೋಟಿ ಕೋಟಿ ಹಣವನ್ನ ಕಟ್ಟಿಟ್ಟು ಮಾಡೋದೇನು? ಎಂಬ ಪ್ರಶ್ನೆ ಎದ್ದಿದೆ. ಜೂನ್ 18ರವರೆಗೆ […]

CM ಕೊವಿಡ್ ನಿಧಿಗೆ ಹರಿದು ಬರ್ತಿದೆ ಹಣ, ಆದ್ರೆ ನಯಾ ಪೈಸೆ ಬಳಸಿಲ್ಲ ಯಾಕೆ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 03, 2020 | 12:27 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟ ಎದುರಿಸಲು ಸಿಎಂ ಕೊವಿಡ್ ಪರಿಹಾರ ನಿಧಿಯನ್ನು ಕಾಯ್ದಿಸಲಾಗಿತ್ತು. ಇದರಲ್ಲಿ ಸಂಗ್ರಹವಾಗುವ ಹಣವನ್ನು ಕೊವಿಡ್ ಚಿಕಿತ್ಸೆಗೆ ಹಾಗೂ ಇತರ ನಿರ್ವಾಹಣೆಗೆ ಬಳಸಲು ತೀರ್ಮಾನಿಸಲಾಗಿತ್ತು.

ಆದರೆ ಸಿಎಂ ಕೊವಿಡ್ ಪರಿಹಾರ ನಿಧಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ಕೋಟಿ ಗಟ್ಟಲೆ ಹಣ ಇದ್ರೂ ಸರ್ಕಾರ ನಯಾ ಪೈಸೆ ಖರ್ಚು ಮಾಡಿಲ್ಲ ಯಾಕೆ? ಸೋಂಕಿತರ ಚಿಕಿತ್ಸೆಗೆ, ವೈದ್ಯಕೀಯ ಸೇವೆಗೆ ಬಳಸಿಕೊಂಡಿಲ್ಲ ಯಾಕೆ? ಕೋಟಿ ಕೋಟಿ ಹಣವನ್ನ ಕಟ್ಟಿಟ್ಟು ಮಾಡೋದೇನು? ಎಂಬ ಪ್ರಶ್ನೆ ಎದ್ದಿದೆ.

ಜೂನ್ 18ರವರೆಗೆ ಸಿಎಂ ಕೊವಿಡ್ ಪರಿಹಾರ ನಿಧಿ ಖಾತೆಗೆ ಬರೋಬ್ಬರಿ ₹290 ಕೋಟಿ 98 ಲಕ್ಷ ಹಣ ಸಂಗ್ರಹವಾಗಿದೆ. ₹290 ಕೋಟಿ ಸಂಗ್ರಹವಾದ್ರೂ ಒಂದು ರೂಪಾಯಿ ಖರ್ಚು ಮಾಡಿಲ್ಲ. ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಿಎಂ ಕೊವಿಡ್ ಪರಿಹಾರ ನಿಧಿಗೆ ಹಣ ಜಮೆಯಾಗಿದೆ. ಸಂಗ್ರಹವಾದ ಹಣದಲ್ಲಿ ಸರ್ಕಾರ ನಯಾ ಪೈಸೆ ಖರ್ಚು ಮಾಡಿಲ್ಲ. ಆದರೆ ಆ ಪೂರ್ತಿ ಹಣವನ್ನ ಕೊವಿಡ್ ಸೇವೆಗಳಿಗೆ ಬಳಸಲು ಕಾಯ್ದಿರಿಸಲಾಗಿದೆ.

ಇದುವರೆಗೂ ಕೊರೊನಾ ತುರ್ತು ಸೇವೆಗೆ ಹಣ ಬಳಕೆ ಮಾಡಿಲ್ಲ. ಹೀಗಾಗಿ ಸಿಎಂ ಪರಿಹಾರ ನಿಧಿ ಬಳಕೆ ಮಾಡದೆ ಇರೋದಕ್ಕೆ ವೆಲ್​ಫೇರ್ ಪಾರ್ಟಿ ಆಫ್ ಇಂಡಿಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿಯಿಂದ ವಿಚಾರ ಬಹಿರಂಗವಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದೇ ದೊಡ್ಡ ಸವಾಲಾಗಿದೆ. ಈ ಮಧ್ಯೆ ಇರುವ ಹಣವನ್ನು ಬಳಸಿಕೊಳ್ಳದೆ ಅದನ್ನು ಹಾಗೇ ರಕ್ಷಿಸುತ್ತಿರುವುದ ಯಾಕೆ ಅನ್ನುವುದೇ ನಿಗೂಢವಾಗಿದೆ. ಇದಕ್ಕೆ ಉತ್ತರ ನಮ್ಮ ಸಿಎಂ ಸಾಹೇಬ್ರೇ ಕೊಡಬೇಕು.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ