AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರ ಸ್ತ್ರೀಯೊಂದಿಗೆ ಸಲುಗೆ: ಸುಪಾರಿ ನೀಡಿ ಪತಿಯ ಎರಡು ಕಾಲು ಮುರಿಸಿದ ಪತ್ನಿ!

ವ್ಯಕ್ತಿಯೋರ್ವ ಪರಸ್ತ್ರಿಯೊಂದಿಗೆ ಬಹಳ ಸಲುಗೆಯಿಂದ ಇರುವುದು ಹೆಂಡತಿ ಕೆಂಗಣ್ಣಿಗೆ ಗುರಿಯಾಗಿದೆ. ಈ ಸಂಬಂಧ ಪತ್ನಿ ಪ್ರಶ್ನಿಸಿದ್ದು, ಆಕೆಯೊಂದಿಗಿನ ಸ್ನೇಹ ಬಿಡಬೇಕೆಂದು ಆಗ್ರಹಿಸಿದ್ದಾಳೆ. ಆದರೂ ಹೆಂಡ್ತಿ ಮಾತು ಕೇಳದ ಪತಿ ಪರಸ್ತ್ರಿಯೊಂದಿಗಿನ ಸ್ನೇಹ ಮುಂದುವರಿಸಿದ್ದಾನೆ. ಇದರಿಂದ ಕೆರಳದ ಪತ್ನಿ ಮನೆಯಿಂದ ಆಚೆ ಹೋಗಲು ಆಗಬಾರದು ಎಂದು ಹೆಂಡ್ತಿ, ಸುಪಾರಿ ನೀಡಿ ಗಂಡನ ಕಾಲು ಮುರಿಸಿದ್ದಾಳೆ.

ಪರ ಸ್ತ್ರೀಯೊಂದಿಗೆ ಸಲುಗೆ: ಸುಪಾರಿ ನೀಡಿ ಪತಿಯ ಎರಡು ಕಾಲು ಮುರಿಸಿದ ಪತ್ನಿ!
Kalaburagi
ಶಿವಕುಮಾರ್ ಪತ್ತಾರ್
| Edited By: |

Updated on: Feb 07, 2025 | 12:07 PM

Share

ಕಲಬುರಗಿ, (ಫೆಬ್ರವರಿ 07): ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಎರಡು ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿ. ಇನ್ನು ಈ ಸಂಬಂಧ ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಸುಪಾರಿ ತೆಗೆದುಕೊಂಡು ವೆಂಕಟೇಶನ ಕಾಲು ಮುರಿದ ಆರೀಫ್, ಮನಹೋರ, ಸುನೀಲ್ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಕೆಲ ತಿಂಗಳಿನಿಂದ ಓರ್ವ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ, ಈ ಸಂಬಂಧ ಕೋಪಗೊಂಡಿದ್ದ ಪತ್ನಿ ಉಮಾದೇವಿ, ಮಹಿಳೆ ಜೊತೆಗಿನ ಸ್ನೇಹ ಬಿಡುವಂತೆ ಒತ್ತಾಯಿಸಿದ್ದಾಳೆ. ಆದರೂ ವೆಂಕಟೇಶ್ ತನ್ನ ಸಲುಗೆ ಮುಂದುವರಿಸಿದ್ದಾನೆ. ಇದರಿಂದ ಕೆರಳಿ ಪತ್ನಿ ಉಮಾದೇವಿ ಸುಪಾರಿ ನೀಡಿ ವೆಂಕಟೇಶನ ಎರಡು ಕಾಲುಗಳನ್ನ ಮುರಿಸಿದ್ದಾಳೆ.

ವೆಂಕಟೇಶ ಮಹಿಳೆಯೊಂದಿಗಿನ ಸಲುಗೆ ಬಗ್ಗೆ ಹೆಂಡ್ತಿ ಪ್ರಶ್ನಿಸಿದ್ದಳು. ಅವಳ ಸ್ನೇಹ ಬಿಡುವಂತೆ ಆಗ್ರಹಿಸಿದ್ದಳು. ಆದರೂ ಹೆಂಡ್ತಿ ಮಾತು ಕೇಳದ ವೆಂಕಟೇಶ ತನ್ನ ಸ್ನೇಹ ಮುಂದುವರಿಸಿದ್ದಾನೆ. ಇದರಿಂದ ವೆಂಕಟೇಶ್ ಹಾಗೂ ಉಮಾದೇವಿ ನಡುವೆ ನಡುವೆ ಹಲವು ಬಾರಿ ಜಗಳವಾಗಿತ್ತು. ಆದರೂ ಮಾತು ಕೇಳದ ವೆಂಕಟೇಶನ ಕಾಲು ಮುರಿಸಿದರೆ ಮನೆಯಲ್ಲೇ ಬಿದ್ದಿರುತ್ತಾನೆಂದು ಪ್ಲ್ಯಾನ್ ಮಾಡಿದ ಉಮಾದೇವಿ ಬೇರೆಯವರಿಗೆ 5 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಾಳೆ.

ಇದನ್ನೂ ಓದಿ: ಸ್ನೇಹಿತನೊಂದಿಗೆ ಸರಸ, ಸಂಸಾರದಲ್ಲಿ ವಿರಸ: ಪತ್ನಿಯನ್ನ ಏಳೆಂಟು ಬಾರಿ ಚುಚ್ಚಿ…ಚುಚ್ಚಿ ಕೊಂದ

ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರೀಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಬಳಿಕ ವೆಂಕಟೇಶ್‌ ಮಗ ಇದು ದರೋಡೆ ಪ್ರಕರಣದ ವೇಳೆ ಕಾಲು ಮುರಿತ ಎಂದು ದೂರು ನೀಡಿದ್ದ. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಸಹ ಬ್ರಹ್ಮಪೂರ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?