Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಯ ಅಪಹರಿಸಿ ಮುಸ್ಲಿಂ ಯುವತಿ ಜೊತೆ ಮದುವೆ; ಮಂಗಳೂರಿನ ಬಿಲ್ಡರ್ ಪತ್ನಿಯಿಂದ ಪೊಲೀಸರಿಗೆ ದೂರು

ಬಿಲ್ಡರ್ ಮತ್ತು ಅಲೂಗಡ್ಡೆ, ಈರುಳ್ಳಿ ಹೋಲ್ ಸೇಲ್ ವ್ಯಾಪಾರಿ ಗಂಗಾಧರ, ವ್ಯವಹಾರದ ಹಿನ್ನೆಲೆಯಲ್ಲಿ ಜನವರಿಯಲ್ಲಿ ‌ಮನೆಯಿಂದ ಹೊರ ಹೋಗಿದ್ದರು. ಅದರೆ ನಂತರದಲ್ಲಿ ಫೋನ್ ಸಂಪರ್ಕಕ್ಕೂ ಸಿಗದೇ ಗಂಗಾಧರ ನಾಪತ್ತೆಯಾಗಿದ್ದರು. ಆದರೆ ವ್ಯವಹಾರ ನಿಮಿತ್ತ ಹೋದ ಕಾರಣ ನಾಪತ್ತೆ ದೂರನ್ನು ಯಶೋಧ ನೀಡಿರಲಿಲ್ಲ.

ಉದ್ಯಮಿಯ ಅಪಹರಿಸಿ ಮುಸ್ಲಿಂ ಯುವತಿ ಜೊತೆ ಮದುವೆ; ಮಂಗಳೂರಿನ ಬಿಲ್ಡರ್ ಪತ್ನಿಯಿಂದ ಪೊಲೀಸರಿಗೆ ದೂರು
ಪತಿ ಗಂಗಾಧರ ಮುಸ್ಲಿಂ ಯುವತಿ ಜೊತೆ ಮದುವೆಯಾಗಿರುವ ಚಿತ್ರಣ
Follow us
preethi shettigar
|

Updated on: Mar 24, 2021 | 1:41 PM

ದಕ್ಷಿಣ ಕನ್ನಡ: ಬಿಲ್ಡರ್‌ನನ್ನು ಅಪಹರಿಸಿ ಮದುವೆ ಮಾಡಿಸಿದ ಆರೋಪದ ಮೇಲೆ ಬಿಲ್ಡರ್​ನ ಪತ್ನಿ ಪೊಲೀಸರಿಗೆ ದೂರು ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಗೆ ಬೋಳಾರದ ಯಶೋಧಾ (54) ಎಂಬವವರು ದೂರು‌ ನೀಡಿದ್ದು, ತನ್ನ ಪತಿ ಗಂಗಾಧರ (62) ಎಂಬವರನ್ನ ಅಪಹರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ್ದು ಅಷ್ಟೇ ಅಲ್ಲದೇ ಪತಿಗೆ ಬೇರೆ ಮದುವೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಲ್ಡರ್ ಮತ್ತು ಅಲೂಗಡ್ಡೆ, ಈರುಳ್ಳಿ ಹೋಲ್ ಸೇಲ್ ವ್ಯಾಪಾರಿ ಗಂಗಾಧರ, ವ್ಯವಹಾರದ ಹಿನ್ನೆಲೆಯಲ್ಲಿ ಜನವರಿಯಲ್ಲಿ ‌ಮನೆಯಿಂದ ಹೊರ ಹೋಗಿದ್ದರು. ಅದರೆ ನಂತರದಲ್ಲಿ ಫೋನ್ ಸಂಪರ್ಕಕ್ಕೂ ಸಿಗದೇ ಗಂಗಾಧರ ನಾಪತ್ತೆಯಾಗಿದ್ದರು. ಆದರೆ ವ್ಯವಹಾರ ನಿಮಿತ್ತ ಹೋದ ಕಾರಣ ನಾಪತ್ತೆ ದೂರನ್ನು ಯಶೋಧ ನೀಡಿರಲಿಲ್ಲ. ಸದ್ಯ ಮುಸ್ಲಿಂ ಯುವತಿ ಜೊತೆ ಗಂಗಾಧರ್​ಗೆ ವಿವಾಹವಾಗಿರುವ ಮಾಹಿತಿ‌ ಸಿಕ್ಕಿದೆ.

ಈ ಮಾಹಿತಿಯನ್ನು ವಿವಾಹದ ಫೋಟೋಗಳ ಸಹಿತ ಗಂಗಾಧರ್ ಸ್ನೇಹಿತನಿಂದ ಪಡೆದ ಯಶೋಧಾ, ದುಷ್ಕರ್ಮಿಗಳು ಅಪಹರಿಸಿ ಅಕ್ರಮ ಬಂಧನದಲ್ಲಿರಿಸಿ ಮತಾಂತರ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮತಾಂತರದ ಬಳಿಕ ಮುಸ್ಲಿಂ ಯುವತಿ ಜೊತೆ ಬಲವಂತವಾಗಿ ಮದುವೆ ಮಾಡಿದ್ದಾರೆ. ನನ್ನ ಪತಿಯನ್ನು ಹುಡುಕಿ ಕೊಡಿ ಎಂದು ಮದುವೆ ಫೋಟೋಗಳ ಸಹಿತ ಪಾಂಡೇಶ್ವರ ಠಾಣೆಗೆ ಯಶೋಧಾ ದೂರು ನೀಡಿದ್ದಾರೆ. ಇನ್ನು ಈ ಪ್ರಕರಣದ ವಿಶೇಷ ತನಿಖೆಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಗ್ರಹಿದ್ದು, ಸದ್ಯ ದೂರಿನ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

complaint

ದೂರಿನ ಪ್ರತಿ

complaint

ಗಂಡನನ್ನು ಹುಡುಕಿ ಕೊಡುವಂತೆ ಠಾಣೆಯಲ್ಲಿ ದೂರು

ಇದನ್ನೂ ಓದಿ:

ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಡಿಮ್ಯಾಂಡ್; ಕರ್ನಾಟಕ ಜನಾಭಿವೃದ್ಧಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಸೇರಿ ಮೂವರು ಅರೆಸ್ಟ್

ವರ್ತೂರು ಪ್ರಕಾಶ್​ ಅಪಹರಣದ ಹಿಂದೆ ಮಹಿಳೆ? ಮಾಜಿ ಸಚಿವರು ಹೇಳಿದ ಕಿಡ್ನಾಪ್​ ಪ್ರಸಂಗದ ಸುತ್ತ ಅನುಮಾನದ ಹುತ್ತ!

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್