AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪತಿ-ಪತ್ನಿ ಮುಖಾಮುಖಿ: ಗಮನ ಸೆಳೆದಿದೆ ದಂಪತಿ ಸ್ಪರ್ಧೆ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ 7ನೇ ಹೊಸಕೋಟೆ ಗ್ರಾಮ ಪಂಚಾಯತಿ ಇಂತಹ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ‌ ಗಂಡನಿಗೆ ಎದುರಾಳಿಯಾಗಿ ಹೆಂಡತಿಯೇ ಅಖಾಡಕ್ಕೆ ದುಮುಕಿದ್ದಾಳೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪತಿ-ಪತ್ನಿ ಮುಖಾಮುಖಿ: ಗಮನ ಸೆಳೆದಿದೆ ದಂಪತಿ ಸ್ಪರ್ಧೆ
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಒಂದೇ ವಾರ್ಡ್​ನಿಂದ ಸ್ಪರ್ಧಿಸಿರುವ ಪತಿ ಕಿಶೋರ್ ಮತ್ತು ಪತ್ನಿ ಶ್ರೀಜಾ
preethi shettigar
| Edited By: |

Updated on: Dec 20, 2020 | 1:10 PM

Share

ಕೊಡಗು: ಚುನಾವಣೆ ಎಂದಾಗ ಗೆಲುವು, ಸೋಲು ಕಾಮನ್. ಎದುರಾಳಿ ವಿರುದ್ಧ ಗೆದ್ದು ಬೀಗಬೇಕು ಎನ್ನುವುದು ಪ್ರತಿಯೊಬ್ಬ ಅಭ್ಯರ್ಥಿಯ ಗುರಿ ಆಗಿರುವುದು ಅಷ್ಟೇ ನಿಜ. ಆದ್ರೆ ಹೆಂಡತಿಯೇ ಚುನಾವಣೆಯ ಸ್ಪರ್ಧೆಯಲ್ಲಿ ಎದುರಾಳಿ ಆದಾಗ ಹೇಗಿರ್ಬೇಡ ಹೇಳಿ!

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ 7ನೇ ಹೊಸಕೋಟೆ ಗ್ರಾಮ ಪಂಚಾಯತಿ ಇಂತಹ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ‌ ಗಂಡನಿಗೆ ಎದುರಾಳಿಯಾಗಿ ಹೆಂಡತಿಯೇ ಅಖಾಡಕ್ಕೆ ದುಮುಕಿದ್ದಾಳೆ.

ಪತಿ-ಪತ್ನಿ ಒಟ್ಟಿಗೆ ಮತಯಾಚನೆ ಮಾಡಿದರು.

ಪಂಚಾಯತಿಯ 2ನೇ ವಾರ್ಡ್​ನಲ್ಲಿರುವ ಕಂಬಿಬಾಣೆಯಲ್ಲಿ ಕಿಶೋರ್ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಅವರ ಪತ್ನಿ ಶ್ರೀಜಾ ಕೂಡ ಸ್ಪರ್ಧೆಗೆ ಇಳಿದಿದ್ದಾರೆ. ಡಿ.22 ರಂದು ನಡೆಯುವ ಮೊದಲ ಹಂತದ ಚುನಾವಣೆಯಲ್ಲಿ ಗಂಡಹೆಂಡತಿ ಇಬ್ಬರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇಬ್ಬರೂ ಒಂದೇ ವಾರ್ಡಿನಿಂದ ಸ್ಪರ್ಧಿಸಿರುವ ಬಗ್ಗೆ ಪ್ರಶ್ನಿಸಿದರೆ, ಮನೆಯಲ್ಲಿ ಅಷ್ಟೇ ನಾವು ಪತಿಪತ್ನಿ ಹೊರಗೆ, ಅಂದರೆ ಚುನಾವಣಾ ಕಣದಲ್ಲಿ ನಾವಿಬ್ಬರು ಪ್ರತಿಸ್ಪರ್ಧಿಗಳು‌ ಎಂದು ಉತ್ತರಿಸಿದ್ದಾರೆ.

ಇಬ್ಬರು ಒಟ್ಟಿಗೆ ಮತ ಪ್ರಚಾರ ಮಾಡುತ್ತಿರುವ ದೃಶ್ಯ

ಒಟ್ಟಿಗೆ ಮತಯಾಚನೆ: ಜನರಿಗೆ ಯಾರ ಮೇಲೆ ಒಲವಿದೆಯೋ ಅವರಿಗೆ ಮತಹಾಕಿ ಗೆಲ್ಲಿಸುತ್ತಾರೆ ಎನ್ನುವುದು ಈ ದಂಪತಿಯ ಅಭಿಪ್ರಾಯ. ಇಬ್ಬರಲ್ಲಿ ಯಾರು ಗೆದ್ದರೂ ಸಂತೋಷವೇ. ಆದರೆ ಜನರಿಗೆ ಯಾರು ಸೂಕ್ತ ಎಂದು ಎನಿಸುತ್ತಾರೋ ಅವರನ್ನು ಆಯ್ಕೆ ಮಾಡುತ್ತಾರೆ. ಹೀಗಾಗಿ ನಾವಿಬ್ಬರು ಪ್ರಾಮಾಣಿಕವಾಗಿ ಮತಯಾಚನೆ ಮಾಡುತ್ತಿದ್ದೇವೆ ಎನ್ನುತ್ತಾರೆ ಅಭ್ಯರ್ಥಿ ಕಿಶೋರ್.

ಪತಿ-ಪತ್ನಿ ಮತಯಾಚನೆಗೆ ಹೊರಟಿರುವ ಚಿತ್ರಣ

ಇಬ್ಬರು ಒಟ್ಟಿಗೆ ಮತಯಾಚನೆ ಮಾಡುತ್ತಿದ್ದು, ನಮಗೆ ಮತ ನೀಡಿ ಎಂದು ಇಬ್ಬರೂ ಕೇಳುತ್ತಿದ್ದಾರೆ. ಇವರನ್ನು ಹೊರತುಪಡಿಸಿ ಇದೇ ವಾರ್ಡ್​ನಿಂದ ಇನ್ನೂ 9 ಜನರು ಕಣದಲ್ಲಿದ್ದು, ಜನರು ಮಾತ್ರ ಯಾರನ್ನು ಆಯ್ಕೆ ಮಾಡುತ್ತಾರೋ ಕಾದು ನೋಡಬೇಕಾಗಿದೆ.

ಮತದಾರರನ್ನು ಓಲೈಸುವಲ್ಲಿ ನಿರತರಾದ ಪತಿ-ಪತ್ನಿ

ಗ್ರಾ.ಪಂ. ಸದಸ್ಯ ಸ್ಥಾನಕ್ಕೆ ಹರಾಜು ಪ್ರಕರಣ: 44 ಜನರ ವಿರುದ್ಧ FIR

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ