AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಪತಿ ಹತ್ಯೆಗೆ 10 ಲಕ್ಷ ರೂ.ಗೆ ಸುಪಾರಿ ನೀಡಿದ್ದ ಪತ್ನಿ! ಮೂವರು ಅರೆಸ್ಟ್

ರಾಜು, ಧರ್ಮೇಂದ್ರ ಮತ್ತು ಶಶಿಕಾಂತ್ ಸೇರಿ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದರು. ಧರ್ಮೇಂದ್ರ ಮತ್ತು ಶಶಿಕಾಂತ್ನನ್ನು ದೂರವಿಟ್ಟು ರಾಜು ಬೇರೆ ಆರು ಪ್ರಾಜೆಕ್ಟ್ ಮಾಡಿದ್ದ.

ಬೆಳಗಾವಿಯಲ್ಲಿ ಪತಿ ಹತ್ಯೆಗೆ 10 ಲಕ್ಷ ರೂ.ಗೆ ಸುಪಾರಿ ನೀಡಿದ್ದ ಪತ್ನಿ! ಮೂವರು ಅರೆಸ್ಟ್
ಕೊಲೆಯಾದ ರಾಜು, ಹೆಂಡತಿ ಕಿರಣಾ
TV9 Web
| Edited By: sandhya thejappa|

Updated on:Mar 23, 2022 | 10:48 AM

Share

ಬೆಳಗಾವಿ: ತನ್ನ ಪತಿಯನ್ನು ಕೊಲ್ಲಲು ಎರಡನೇ ಪತ್ನಿ ಸುಪಾರಿ (Supari) ನೀಡಿದ್ದ ಘಟನೆ ಬೆಳಗಾವಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯಮಿಯಾಗಿದ್ದ (Business Man) ರಾಜು ದೊಡ್ಡಬಣ್ಣವರ್ ಮಾರ್ಚ್ 15ಕ್ಕೆ ಕೊಲೆಯಾಗಿದ್ದಾನೆ. ಪತಿ ಹತ್ಯೆಗೆ ಪತ್ನಿ ಕಿರಣಾ ಗಂಡನ ಪಾರ್ಟ್​ನರ್​ಗಳಿಗೆ 10 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಳು. ಈ ಪ್ರಕರಣ ಸಂಬಂಧ ಮೃತನ 2ನೇ ಪತ್ನಿ ಕಿರಣಾ, ಧರ್ಮೇಂದ್ರ, ಶಶಿಕಾಂತ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜು, ಧರ್ಮೇಂದ್ರ ಮತ್ತು ಶಶಿಕಾಂತ್ ಸೇರಿ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಅಪಾರ್ಟ್​ಮೆಂಟ್ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದರು. ಧರ್ಮೇಂದ್ರ ಮತ್ತು ಶಶಿಕಾಂತ್​ನನ್ನು ದೂರವಿಟ್ಟು ರಾಜು ಬೇರೆ ಆರು ಪ್ರಾಜೆಕ್ಟ್ ಮಾಡಿದ್ದ. ಹತ್ತು ವರ್ಷದ ಹಿಂದೆ ಆರಂಭಿಸಿದ್ದ ಪ್ರಾಜೆಕ್ಟ್ ಮುಗಿಯದ ಹಿನ್ನೆಲೆ ವೈಷಮ್ಯ ಇತ್ತು. ಮತ್ತೊಂದೆಡೆ ಎರಡನೇ ಹೆಂಡತಿ ಕಿರಣಾಗೂ ಪತಿ ರಾಜು ಮೇಲೆ ದ್ವೇಷವಿತ್ತು. ಮೊದಲ ಮದುವೆಯಾದ ಬಗ್ಗೆ ಬಚ್ಚಿಟ್ಟು ತನ್ನ ವಿವಾಹವಾಗಿದ್ದನೆಂಬ ದ್ವೇಷವಿತ್ತು ಎಂಬ ಮಾಹಿತಿ ವಿಚಾರಣೆ ಬಳಿಕ ತಿಳಿದುಬಂದಿದೆ.

ವಿವಾಹವಾಗಿ ಎರಡು ಮಕ್ಕಳಾದ ಬಳಿಕ ರಾಜು ಮೂರನೇ ವಿವಾಹವಾಗಿದ್ದ. ತನ್ನ ಹಾಗೂ ತನ್ನ ಇಬ್ಬರ ಮಕ್ಕಳ ಹೆಸರಲ್ಲಿ ಆಸ್ತಿ ಮಾಡುವಂತೆ ರಾಜುಗೆ ಕಿರಣಾ ಒತ್ತಾಯಿಸಿದ್ದಳು. ಆದರೆ ಯಾವುದೇ ಆಸ್ತಿ ಎರಡನೇ ಹೆಂಡತಿ ಹೆಸರಲ್ಲಿ ಮಾಡದೇ ಇದ್ದಿದ್ದಕ್ಕೆ ಕಿರಣಾಗೆ ಸಿಟ್ಟಿತ್ತು. ಹೀಗಾಗಿ ಪತಿಯ ಬ್ಯುಸಿನೆಸ್ ಪಾರ್ಟ್​ನರ್​ಗಳ ಜತೆಗೂಡಿ ಗಂಡನ ಹತ್ಯೆಗೆ ಸ್ಕೆಚ್ ಹಾಕಿದ್ದಾಳೆ. ಮಾರ್ಚ್ 15ರಂದು ಬೆಳಗ್ಗೆ 5.30ರ ವೇಳೆ ರಾಜು ಮನೆಯಿಂದ ಕಾರಿನಲ್ಲಿ ತೆರಳಿದ್ದ. ಬೆಳಗ್ಗೆ 6 ಗಂಟೆ ಸುಮಾರಿಗೆ ಕಾರು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಅಟ್ಯಾಕ್ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಎರಡು ಕಾಲುಗಳ ಮೇಲೆ ಹಲ್ಲೆ ಮಾಡಿದ್ದರು. ತೀವ್ರ ರಕ್ತ ಸ್ರಾವವಾಗಿ ರಾಜು ಸ್ಥಳದಲ್ಲೇ ಮೃತಪಟ್ಟಿದ್ದನು.

ರಕ್ತಚಂದನ ವಶಕ್ಕೆ ಪಡೆದ 6 ತಿಂಗಳ ಬಳಿಕ ಎಫ್‌ಐಆರ್: ರಾಮಮೂರ್ತಿ ನಗರ ಪೊಲೀಸರ ಮೇಲೆ ರಕ್ತಚಂದನ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಶಪಡಿಸಿಕೊಂಡು ಆರು ತಿಂಗಾಳದರು ಪೊಲೀಸರಿಗೆ ಅದು ರಕ್ತ ಚಂದನ ಅಂತ ಗೊತ್ತಿರಲಿಲ್ಲವಂತೆ. ಆರು ತಿಂಗಳ ಬಳಿಕ ರಕ್ತ ಚಂದನ ಸಿಕ್ಕಿದೆ ಅಂತ ಪೊಲೀಸರು ಎಫ್​ಐಆರ್ ಮಾಡಿದ್ದಾರೆ. ಅದು ಇಲಾಖಾ ತನಿಖೆ ನಡೆಯುವಾಗ ಪೊಲೀಸರು ಎಫ್​ಐಆರ್ ಹಾಕಿದ್ದಾರೆ. ಕೆಲ ದಿನಗಳ ಹಿಂದೆ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಮಮೂರ್ತಿನಗರ ಪೊಲೀಸರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. 80 ಲಕ್ಷ ಮೌಲ್ಯದ ರಕ್ತಚಂದನ ಆಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆ ಇಲಾಖಾ ತನಿಖೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚಿಸಿದ್ದಾರೆ.

ಶಾಲಾ ಬಾಲಕನ ಮೇಲೆ ಕರಡಿ ದಾಳಿ: ಕಾರವಾರ: ಶಾಲಾ ಬಾಲಕನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಅಜಗಾಂವ ಗ್ರಾಮದ ಬಳಿ ನಡೆದಿದೆ. ಬಾಲಕ ಶಾಲೆ ಮುಗಿಸಿ ಬರುವಾಗ ತಮ್ಮ ಹೊಲದ ಬಳಿ ಬರುತ್ತಿದ್ದ. ಈ ವೇಳೆ ಕರಡಿ ಬಾಲಕನ ಮೇಲೆ ದಿಡೀರ್ ದಾಳಿ ನಡೆಸಿದೆ. ಕರಡಿ ದಾಳಿ ನಡೆಸುತ್ತಿದ್ದಂತೆ ಬಾಲಕನ ಕೂಗಾಟ ಕೇಳಿ ಅಕ್ಕ ಪಕ್ಕದ ಜನ ಬಂದಿದ್ದಾರೆ. ಸಮೀಪದ ಆಸ್ಪತ್ರೆಯಲ್ಲಿ ಬಾಲಕ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ

ಅಪಘಾತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ; ವೈ.ಎನ್. ಹೊಸಕೋಟೆ- ಪಾವಗಡ ಮಧ್ಯೆ 9 KSRTC ಬಸ್‌ಗಳ ಸಂಚಾರ ಆರಂಭ

ನ್ಯಾಯಾಲಯ, ಸರ್ಕಾರದ ಆದೇಶ ಉಲ್ಲಂಘನೆ! ವಾಟಾಳ್ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲು

Published On - 10:33 am, Wed, 23 March 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್