AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆ ಪಟ್ಟಣದೊಳಗೆ ಕಾಣಿಸಿಕೊಂಡ ಕಾಡಾನೆ; ಒಂಟಿ ಸಲಗದ ಪುರಪ್ರವೇಶ ಕಂಡು ಸಕಲೇಶಪುರ ಜನತೆ ಕಂಗಾಲು

ಒಂಟಿ ಆನೆ ಬಡಾವಣೆಯಲ್ಲಿ ಸುತ್ತಾಡಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲೂ ಸೆರೆಯಾಗಿದೆ. ಆದರೆ, ಈ ಆನೆ ಪಕ್ಕದಲ್ಲಿದ್ದ ವಾಹನಗಳಿಗಾಗಲೀ, ಮನೆ ಗೋಡೆಗಳಿಗಾಗಲೀ ಯಾವುದೇ ಹಾನಿ ಮಾಡದೇ ತನ್ನ ಪಾಡಿಗೆ ತಾನು ಸಾಗಿರುವುದು ಜನರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.

ಬೆಳ್ಳಂಬೆಳಗ್ಗೆ ಪಟ್ಟಣದೊಳಗೆ ಕಾಣಿಸಿಕೊಂಡ ಕಾಡಾನೆ; ಒಂಟಿ ಸಲಗದ ಪುರಪ್ರವೇಶ ಕಂಡು ಸಕಲೇಶಪುರ ಜನತೆ ಕಂಗಾಲು
ಬೆಳ್ಳಂಬೆಳಗ್ಗೆ ಪಟ್ಟಣದಲ್ಲಿ ಸುತ್ತಾಡಿದ ಕಾಡಾನೆ
Follow us
Skanda
| Updated By: preethi shettigar

Updated on: May 01, 2021 | 8:41 AM

ಹಾಸನ: ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಗೆ ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಪ್ರವೇಶಿಸಿದೆ. ಹಾಸನ ಭಾಗದ ಜನತೆಗೆ ಆಗಾಗ ಕಾಡಾನೆಗಳು ಕಾಣಿಸಿಕೊಳ್ಳುವುದು ಮಾಮೂಲಾಗಿದೆಯಾದರೂ ಈ ಬಾರಿ ಪಟ್ಟಣದ ಒಳಗೆ ಆನೆ ಬಂದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಬೆಳಗ್ಗಿನ ಜಾವ ಮನೆಯಿಂದ ಆಚೆ ಕಾಲಿಟ್ಟ ಜನತೆಗೆ ದೈತ್ಯ ಗಜರಾಜನ ದರ್ಶನವಾಗಿದ್ದು, ಮನೆಯೆದುರು ಕಾಡಾನೆ ಹೆಜ್ಜೆಹಾಕುತ್ತಿರುವುದನ್ನು ಕಂಡು ಸ್ಥಳೀಯ ನಿವಾಸಿಗಳು ಕಂಗಾಲಾಗಿದ್ದಾರೆ. ರಸ್ತೆಗೆ ಕಾಲಿಟ್ಟಿದ್ದ ಕೆಲವರು ಒಂಟಿ ಸಲಗನನ್ನು ಕಂಡು ಭಯಭೀತರಾಗಿ ಮನೆ ಸೇರಿದ್ದಾರೆ. ಆನೆ ಪಟ್ಟಣದೊಳಗೆ ಓಡಾಡುವ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಹರಿದಾಡಲಾರಂಭಿಸಿದೆ.

ಕೊರೊನಾ ನಿಯಂತ್ರಣದ ಸಲುವಾಗಿ ನೈಟ್​ ಕರ್ಫ್ಯೂ ಇದ್ದಿದ್ದರಿಂದ ನಸುಕಿನ ವೇಳೆಯಲ್ಲಿ ಹೆಚ್ಚಿನ ಓಡಾಟ ಇರಲಿಲ್ಲ. ಒಂದುವೇಳೆ ಜನರ ಓಡಾಟವಿದ್ದ ಸಂದರ್ಭದಲ್ಲಿ ಹೀಗೆ ಆನೆ ಬಂದಿದ್ದರೆ ಏನು ಅನಾಹುತವಾಗುತ್ತಿತ್ತು ಎಂದು ಅಲ್ಲಿನ ನಿವಾಸಿಗಳು ಆತಂಕಗೊಂಡಿದ್ದಾರೆ. ಒಂಟಿ ಆನೆ ಬಡಾವಣೆಯಲ್ಲಿ ಸುತ್ತಾಡಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲೂ ಸೆರೆಯಾಗಿದೆ. ಆದರೆ, ಈ ಆನೆ ಪಕ್ಕದಲ್ಲಿದ್ದ ವಾಹನಗಳಿಗಾಗಲೀ, ಮನೆ ಗೋಡೆಗಳಿಗಾಗಲೀ ಯಾವುದೇ ಹಾನಿ ಮಾಡದೇ ತನ್ನ ಪಾಡಿಗೆ ತಾನು ಸಾಗಿರುವುದು ಜನರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.

ಕಾಡಿನಿಂದ ನಾಡಿಗೆ ಕಾಡಾನೆಗಳು ಬರುವುದು ಹಾಸನ ಜಿಲ್ಲೆಯ ಜನರಿಗೆ ಬಹುಕಾಲದ ಸಮಸ್ಯೆಯಾಗಿದ್ದು, ಕಾಡಾನೆ ಉಪಟಳ ನಿಯಂತ್ರಿಸುವಂತೆ ಆಗ್ರಹಿಸುತ್ತಲೇ ಇದ್ದಾರೆ. ಇದೀಗ ಕಾಡಾನೆ ಹೊಲ, ಗದ್ದೆ, ತೋಟಗಳನ್ನು ಬಿಟ್ಟು ಪುರಪ್ರವೇಶ ಮಾಡಿರುವುದರಿಂದ ದೊಡ್ಡ ಅನಾಹುತ ಘಟಿಸುವ ಮುನ್ನ ಅರಣ್ಯಾಧಿಕಾರಿಗಳು ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ಧಾರೆ.

ELEPHANT IN HASSAN

ಕಾಡಾನೆ ಓಡಾಟ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಇದನ್ನೂ ಓದಿ: ಮಡಿಕೇರಿಯಲ್ಲಿ ಕಾಡಾನೆ ದಾಳಿ; ವೃದ್ಧೆ ಸಾವು 

ಹೆಚ್.ಡಿ. ಕೋಟೆ ಬಳಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್