ಬೆಳ್ಳಂಬೆಳಗ್ಗೆ ಪಟ್ಟಣದೊಳಗೆ ಕಾಣಿಸಿಕೊಂಡ ಕಾಡಾನೆ; ಒಂಟಿ ಸಲಗದ ಪುರಪ್ರವೇಶ ಕಂಡು ಸಕಲೇಶಪುರ ಜನತೆ ಕಂಗಾಲು

ಒಂಟಿ ಆನೆ ಬಡಾವಣೆಯಲ್ಲಿ ಸುತ್ತಾಡಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲೂ ಸೆರೆಯಾಗಿದೆ. ಆದರೆ, ಈ ಆನೆ ಪಕ್ಕದಲ್ಲಿದ್ದ ವಾಹನಗಳಿಗಾಗಲೀ, ಮನೆ ಗೋಡೆಗಳಿಗಾಗಲೀ ಯಾವುದೇ ಹಾನಿ ಮಾಡದೇ ತನ್ನ ಪಾಡಿಗೆ ತಾನು ಸಾಗಿರುವುದು ಜನರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.

ಬೆಳ್ಳಂಬೆಳಗ್ಗೆ ಪಟ್ಟಣದೊಳಗೆ ಕಾಣಿಸಿಕೊಂಡ ಕಾಡಾನೆ; ಒಂಟಿ ಸಲಗದ ಪುರಪ್ರವೇಶ ಕಂಡು ಸಕಲೇಶಪುರ ಜನತೆ ಕಂಗಾಲು
ಬೆಳ್ಳಂಬೆಳಗ್ಗೆ ಪಟ್ಟಣದಲ್ಲಿ ಸುತ್ತಾಡಿದ ಕಾಡಾನೆ
Follow us
| Updated By: preethi shettigar

Updated on: May 01, 2021 | 8:41 AM

ಹಾಸನ: ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಗೆ ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಪ್ರವೇಶಿಸಿದೆ. ಹಾಸನ ಭಾಗದ ಜನತೆಗೆ ಆಗಾಗ ಕಾಡಾನೆಗಳು ಕಾಣಿಸಿಕೊಳ್ಳುವುದು ಮಾಮೂಲಾಗಿದೆಯಾದರೂ ಈ ಬಾರಿ ಪಟ್ಟಣದ ಒಳಗೆ ಆನೆ ಬಂದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಬೆಳಗ್ಗಿನ ಜಾವ ಮನೆಯಿಂದ ಆಚೆ ಕಾಲಿಟ್ಟ ಜನತೆಗೆ ದೈತ್ಯ ಗಜರಾಜನ ದರ್ಶನವಾಗಿದ್ದು, ಮನೆಯೆದುರು ಕಾಡಾನೆ ಹೆಜ್ಜೆಹಾಕುತ್ತಿರುವುದನ್ನು ಕಂಡು ಸ್ಥಳೀಯ ನಿವಾಸಿಗಳು ಕಂಗಾಲಾಗಿದ್ದಾರೆ. ರಸ್ತೆಗೆ ಕಾಲಿಟ್ಟಿದ್ದ ಕೆಲವರು ಒಂಟಿ ಸಲಗನನ್ನು ಕಂಡು ಭಯಭೀತರಾಗಿ ಮನೆ ಸೇರಿದ್ದಾರೆ. ಆನೆ ಪಟ್ಟಣದೊಳಗೆ ಓಡಾಡುವ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಹರಿದಾಡಲಾರಂಭಿಸಿದೆ.

ಕೊರೊನಾ ನಿಯಂತ್ರಣದ ಸಲುವಾಗಿ ನೈಟ್​ ಕರ್ಫ್ಯೂ ಇದ್ದಿದ್ದರಿಂದ ನಸುಕಿನ ವೇಳೆಯಲ್ಲಿ ಹೆಚ್ಚಿನ ಓಡಾಟ ಇರಲಿಲ್ಲ. ಒಂದುವೇಳೆ ಜನರ ಓಡಾಟವಿದ್ದ ಸಂದರ್ಭದಲ್ಲಿ ಹೀಗೆ ಆನೆ ಬಂದಿದ್ದರೆ ಏನು ಅನಾಹುತವಾಗುತ್ತಿತ್ತು ಎಂದು ಅಲ್ಲಿನ ನಿವಾಸಿಗಳು ಆತಂಕಗೊಂಡಿದ್ದಾರೆ. ಒಂಟಿ ಆನೆ ಬಡಾವಣೆಯಲ್ಲಿ ಸುತ್ತಾಡಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲೂ ಸೆರೆಯಾಗಿದೆ. ಆದರೆ, ಈ ಆನೆ ಪಕ್ಕದಲ್ಲಿದ್ದ ವಾಹನಗಳಿಗಾಗಲೀ, ಮನೆ ಗೋಡೆಗಳಿಗಾಗಲೀ ಯಾವುದೇ ಹಾನಿ ಮಾಡದೇ ತನ್ನ ಪಾಡಿಗೆ ತಾನು ಸಾಗಿರುವುದು ಜನರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.

ಕಾಡಿನಿಂದ ನಾಡಿಗೆ ಕಾಡಾನೆಗಳು ಬರುವುದು ಹಾಸನ ಜಿಲ್ಲೆಯ ಜನರಿಗೆ ಬಹುಕಾಲದ ಸಮಸ್ಯೆಯಾಗಿದ್ದು, ಕಾಡಾನೆ ಉಪಟಳ ನಿಯಂತ್ರಿಸುವಂತೆ ಆಗ್ರಹಿಸುತ್ತಲೇ ಇದ್ದಾರೆ. ಇದೀಗ ಕಾಡಾನೆ ಹೊಲ, ಗದ್ದೆ, ತೋಟಗಳನ್ನು ಬಿಟ್ಟು ಪುರಪ್ರವೇಶ ಮಾಡಿರುವುದರಿಂದ ದೊಡ್ಡ ಅನಾಹುತ ಘಟಿಸುವ ಮುನ್ನ ಅರಣ್ಯಾಧಿಕಾರಿಗಳು ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ಧಾರೆ.

ELEPHANT IN HASSAN

ಕಾಡಾನೆ ಓಡಾಟ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಇದನ್ನೂ ಓದಿ: ಮಡಿಕೇರಿಯಲ್ಲಿ ಕಾಡಾನೆ ದಾಳಿ; ವೃದ್ಧೆ ಸಾವು 

ಹೆಚ್.ಡಿ. ಕೋಟೆ ಬಳಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ