ಹೆಚ್.ಡಿ. ಕೋಟೆ ಬಳಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ

Wild Elephant rescued| ಎರಡು ಗಂಟೆ ಕಾರ್ಯಾಚರಣೆ ನಡೆಸಿ, ಜೆಸಿಬಿ ಯಂತ್ರದ ಸಹಾಯದಿಂದ ಆನೆ ಮರಿಯನ್ನು ರಕ್ಷಣೆ ಮಾಡಲಾಗಿದೆ. ಬಳಿಕ, ಆನೆ ಮರಿಯು ತನ್ನ ತಾಯಿಯ ಮಡಿಲು ಸೇರಿದೆ.

ಹೆಚ್.ಡಿ. ಕೋಟೆ ಬಳಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ
ಮೈಸೂರಿನಲ್ಲಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ
ಸಾಧು ಶ್ರೀನಾಥ್​

Updated on: Mar 23, 2021 | 10:54 AM

ಮೈಸೂರು: ಕೂರ್ಣೆಗಾಲ ಬಳಿ ಕಂದಕಕ್ಕೆ ಬಿದ್ದಿದ್ದ ಎರಡು ವರ್ಷದ ಗಂಡು ಕಾಡಾನೆ ಮರಿಯನ್ನು ರಕ್ಷಣೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕೂರ್ಣೆಗಾಲ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಮರಿಯನ್ನು ರಕ್ಷಿಸಿದ್ದಾರೆ.

ಮೈಸೂರಿನಲ್ಲಿ ಕಾಡಿನಿಂದ ನಾಡಿಗೆ ಬಂದು ಕಂದಕ್ಕೆ ಬಿದ್ದು ಹೊರ ಬರಲಾಗದೆ ಒದ್ದಾಡುತ್ತಿದ್ದ ಆನೆ ಮರಿಯನ್ನು ರಕ್ಷಿಸಲಾಗಿದೆ. ಹೆಚ್ ಡಿ ಕೋಟೆ ತಾಲ್ಲೂಕಿನ ಕೂರ್ಣೆಗಾಲ ಗ್ರಾಮದ ಬಳಿ ಈ ಘಟನೆ ನಡೆದಿದೆ. ಎರಡು ವರ್ಷದ ಗಂಡು ಆನೆ ಮರಿಯನ್ನು ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆಯಿಂದ ರಕ್ಷಿಸಲಾಗಿದೆ.

ಎರಡು ಗಂಟೆ ಕಾರ್ಯಾಚರಣೆ ನಡೆಸಿ, ಜೆಸಿಬಿ ಯಂತ್ರದ ಸಹಾಯದಿಂದ ಆನೆ ಮರಿಯನ್ನು ರಕ್ಷಣೆ ಮಾಡಲಾಗಿದೆ. ಬಳಿಕ, ಆನೆ ಮರಿಯು ತನ್ನ ತಾಯಿಯ ಮಡಿಲು ಸೇರಿದೆ.

ಇದನ್ನೂ ಓದಿ – ಕಾಡಾನೆ ದಾಳಿ: ತಪ್ಪಿಸಿಕೊಳ್ಳುವ ಬರದಲ್ಲಿ ಹಳ್ಳಕ್ಕೆ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

Published On - 10:41 am, Tue, 23 March 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us