AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾಕಾಶಿಯಲ್ಲಿ ಹಕ್ಕಿಗಳ ಮಾರಣಹೋಮ: ಔಷಧಕ್ಕೆಂದು ಸದ್ದಿಲ್ಲದೆ ಮಾಯವಾಗ್ತಿದೆ ಪಕ್ಷಿ ಸಂಕುಲ

ವಿದ್ಯಾಕಾಶಿ ಎಂದೇ ಖ್ಯಾತಿಪಡೆದಿರುವ ಧಾರವಾಡ ಸಸ್ಯಕಾಶಿಯೂ ಹೌದು. ಇಲ್ಲಿನ ಸಸ್ಯರಾಶಿ, ಪ್ರಾಣಿ, ಪಕ್ಷಿ ಸಂಕುಲಗಳು ಪರಿಸರವನ್ನು ಸಮೃದ್ಧಗೊಳಿಸಿವೆ.ಆದರೆ, ಈ ಹಸಿರು ಪರಿಸರದ ಪಕ್ಷಿ ಸಂಕುಲಕ್ಕೆ ಕಂಟಕಪ್ರಾಯವಾದ ಕಾರ್ಯಗಳು ಇತ್ತೀಚೆಗೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಪಕ್ಷಿಗಳ ಪರಿಸ್ಥಿತಿ ಕರುಣಾಜನಕವಾಗಿದೆ.

ವಿದ್ಯಾಕಾಶಿಯಲ್ಲಿ ಹಕ್ಕಿಗಳ ಮಾರಣಹೋಮ: ಔಷಧಕ್ಕೆಂದು ಸದ್ದಿಲ್ಲದೆ ಮಾಯವಾಗ್ತಿದೆ ಪಕ್ಷಿ ಸಂಕುಲ
ವಿದ್ಯಾಕಾಶಿಯಲ್ಲಿ ಹಕ್ಕಿಗಳ ಮಾರಣಹೋಮ
TV9 Web
| Updated By: ganapathi bhat|

Updated on:Apr 07, 2022 | 5:37 PM

Share

ಧಾರವಾಡ: ವಿದ್ಯಾಕಾಶಿ ಎಂದೇ ಖ್ಯಾತಿಪಡೆದಿರುವ ಧಾರವಾಡ ಸಸ್ಯಕಾಶಿಯೂ ಹೌದು. ಇಲ್ಲಿನ ಸಸ್ಯರಾಶಿ, ಪ್ರಾಣಿ, ಪಕ್ಷಿ ಸಂಕುಲಗಳು ಪರಿಸರವನ್ನು ಸಮೃದ್ಧಗೊಳಿಸಿವೆ. ಮರ-ಗಿಡಗಳು ತುಂಬಿದ ಹಸಿರು ಪರಿಸರದಲ್ಲಿ ಬಗೆಬಗೆಯ ಪ್ರಾಣಿ-ಪಕ್ಷಿಗಳು ಆಶ್ರಯ ಪಡೆದಿವೆ. ಆದರೆ, ಈ ಹಸಿರು ಪರಿಸರದ ಪಕ್ಷಿ ಸಂಕುಲಕ್ಕೆ ಕಂಟಕಪ್ರಾಯವಾದ ಕಾರ್ಯಗಳು ಇತ್ತೀಚೆಗೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಪಕ್ಷಿಗಳ ಪರಿಸ್ಥಿತಿ ಕರುಣಾಜನಕವಾಗಿದೆ.

ವಿವಿಧ ಕಾಯಿಲೆಗಳ ಚಿಕಿತ್ಸೆಗೆ ಹಕ್ಕಿಗಳ ನೆತ್ತರು ಅತ್ಯುತ್ತಮ ಮದ್ದು ಎಂಬ ತಪ್ಪು ಕಲ್ಪನೆ ಇದೀಗ ನಗರದಲ್ಲಿ ಚಾಲ್ತಿಯಲ್ಲಿದೆ. ಈ ಕಾರಣದಿಂದ, ನೂರಾರು ಪಕ್ಷಿಗಳ ಮಾರಣಹೋಮ ನಡೆಯುತ್ತಿದೆ. ನಗರದ ವಿವಿಧ ಬಡಾವಣೆಯ ಸಾರ್ವಜನಿಕ ಉದ್ಯಾನಗಳಲ್ಲಿ ಹಲವು ಯುವಕರು ಹೊಂಚು ಹಾಕಿ, ಗುಲೇಲ್ ಅಥವಾ ಕ್ಯಾಟಿ ಬಳಸಿ ಹಕ್ಕಿಗಳನ್ನು ಹಾಡಹಗಲೇ ಹೊಡೆದು ಕೊಲ್ಲುತ್ತಿದ್ದಾರೆ ಅಥವಾ ಅರೆಜೀವಾವಸ್ಥೆಯಲ್ಲಿ ಹೊತ್ತೊಯ್ಯುತ್ತಿದ್ದಾರೆ.

ಅದರಲ್ಲೂ ಕೆಲ ಸಮುದಾಯಕ್ಕೆ ಸೇರಿದ ಯುವಕರು ಇದನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಯುವಕರು ನಾಲ್ಕಾರು ತಂಡಗಳನ್ನು ಕಟ್ಟಿಕೊಂಡು, ಹಾಡಹಗಲಲ್ಲೇ ಕಾರ್ಯಾಚರಣೆಗೆ ಇಳಿಯುತ್ತಿದ್ದಾರೆ. ಮರ-ಗಿಡಗಳಲ್ಲಿ ಆಶ್ರಯ ಪಡೆದಿರುವ ಬೆಳವ, ಪಾರಿವಾಳ, ಗೊರವಂಕ, ಕೋಗಿಲೆ, ಬುಲ್‌ಬುಲ್ ಹಕ್ಕಿಗಳು ಸೇರಿದಂತೆ ಕೆರೆಗಳ ಆವಾರಣದಲ್ಲಿರುವ ನೀಲಿನಾಮಗೋಳಿ, ಬಿಳಿ ನಾಮಗೋಳಿ, ಗುಳಮುಳಕ ಇತ್ಯಾದಿ ಹಕ್ಕಿಗಳನ್ನು ಗುಲೇಲ್ ಅಥವಾ ಕ್ಯಾಟಿ ಬಳಸಿ ಹೊಡೆದುರುಳಿಸುತ್ತಿದ್ದಾರೆ.

ಗುಲೇಲ್ ಹೊಡೆತಕ್ಕೆ ಕೆಲ ಪಕ್ಷಿಗಳು ಅಲ್ಲಿಯೇ ಜೀವತೆತ್ತರೆ ಮತ್ತೆ ಕೆಲವು ಪಕ್ಷಿಗಳನ್ನು ಅರೆಜೀವಗೊಳಿಸಿ ಚೀಲದಲ್ಲಿ ತುಂಬಿಕೊಂಡು ಒಯ್ಯುತ್ತಿದ್ದಾರೆ. ಇಂತಹ ಪಕ್ಷಿಗಳ ಪೈಕಿ ಕೆಲವನ್ನು ಔಷಧಕ್ಕೆಂದು ಬಳಕೆ ಮಾಡಿಕೊಂಡರೆ‌, ಮತ್ತೆ ಕೆಲ ಪಕ್ಷಿಗಳನ್ನು ತಿನ್ನಲು ಬಳಸಿಕೊಳ್ಳುತ್ತಿದ್ದಾರೆ.

ಈ ವಿಚಾರ ಬೆಳಕಿಗೆ ಬಂದದ್ದು ಹೇಗೆ? ನವೆಂಬರ್ 28 ರಂದು ಸರೋವರ ನಗರ ಬಡಾವಣೆಯ ಕೆ.ಎಚ್.ಬಿ. ಕಾಲೋನಿಯ ಸಾರ್ವಜನಿಕ ಉದ್ಯಾನದಲ್ಲಿ ಹೀಗೆ ಹಕ್ಕಿಗಳನ್ನು ಬೇಟೆಯಾಡಲು ಬಂದಿದ್ದ ಕೆಲವು ಯುವಕರು ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಪಾರ್ಶ್ವವಾಯು ಪೀಡಿತರ ಉಪಚಾರಕ್ಕೆ ಹಕ್ಕಿಗಳ ರಕ್ತ ಬೇಕಿತ್ತು. ಗಾಂವಟಿ ವೈದ್ಯರು ಹೇಳಿದ್ದಕ್ಕೆ ಹಕ್ಕಿಗಳನ್ನು ಒಯ್ಯುತ್ತಿದ್ದೇವೆ ಅಂತಾ ಯುವಕರು ಕಾರಣ ನೀಡಿದ್ದಾರೆ.

ಅವರ ಕೈಯಲ್ಲಿದ್ದ ಚೀಲವನ್ನು ಕಸಿದು ನೋಡಿದಾಗ 20ಕ್ಕೂ ಹೆಚ್ಚು ಹಕ್ಕಿಗಳನ್ನು ಹೊಡೆದುರುಳಿಸಿ, ತುಂಬಿಸಿದ್ದು ಗಮನಕ್ಕೆ ಬಂದಿದೆ. 15 ಕ್ಕೂ ಹೆಚ್ಚು ಹಕ್ಕಿಗಳು ಆಗಲೇ ಕೊನೆಯುಸಿರು ಎಳೆದಿದ್ದರೆ. ಜೊತೆಗೆ, ನಾಲ್ಕು ಹಕ್ಕಿಗಳ ಗೋಣು, ರೆಕ್ಕೆ ಮತ್ತು ಕಾಲು ಮುರಿದಿದ್ದು ಕಂಡುಬಂದಿದೆ.

ಚಿಕಿತ್ಸೆ ನೀಡಿದ ಸ್ಥಳೀಯರು ಕೂಡಲೇ, ಸ್ಥಳೀಯರು ಅವುಗಳನ್ನು ವಶಕ್ಕೆ ಪಡೆದು, ಚಿಕಿತ್ಸೆ ಕೊಡಿಸಿದ್ದಾರೆ. ನಾಲ್ಕು ದಿನಗಳ ಉಪಚಾರದ ಬಳಿಕ, ಒಂದು ಹೆಣ್ಣು ಕೋಗಿಲೆ ಚೇತರಿಸಿಕೊಂಡಿದ್ದು, ಒಂದು ಗಂಡು ಕೋಗಿಲೆ ಇನ್ನೂ ಪೂರ್ಣಗುಣಮುಖವಾಗಿಲ್ಲ.

ಗಾಯಗೊಂಡ ಹಕ್ಕಿಗೆ ಸ್ಥಳೀಯರು ಚಿಕಿತ್ಸೆ ನೀಡಿದ್ದಾರೆ.

ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ದೂರು ಇದನ್ನು ಗಂಭೀರವಾಗಿ ಪರಿಗಣಿಸಿರುವ ನಗರದ ನೇಚರ್ ರಿಸರ್ಚ್ ಸೆಂಟರ್ ಸಂಘಟನೆ ಸದಸ್ಯರು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಅರಣ್ಯ ರಕ್ಷಕರನ್ನು ಬೀಟ್‌ಗೆ ನಿಯೋಜಿಸುವಂತೆ ಮತ್ತು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ನಗರದ ಸಿಬಿಟಿ, ಅಕ್ಕಿಪೇಟೆಯಲ್ಲಿ ಮಾರಾಟವಾಗುವ ಹತ್ತಾರು ನಮೂನೆ ಗುಲೇಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ಒತ್ತಾಯಿಸಿದ್ದಾರೆ.

ಮತ್ತೊಂದೆಡೆ ಪ್ರಾಣಿಗಳಿಗೆ ಉರುಳು ಪಕ್ಷಿಗಳ ಮಾರಣಹೋಮ ಒಂದೆಡೆಯಾದರೆ, ಮತ್ತೊಂದು ಕಡೆ ಸೈಕಲ್, ಸ್ಕೂಟರ್​ಗಳ ಬ್ರೆಕ್ ಮತ್ತು ಕ್ಲಚ್ ಕೇಬಲ್ ಬಳಸಿ ಕರ್ನಾಟಕ ವಿಶ್ವವಿದ್ಯಾಲಯದ ಹಿಂಬದಿಯ ಶಾಲ್ಮಲಾ ಕೊಳ್ಳ, ಹನುಮಂತ ನಗರ, ಟೈವಾಕ್ ಕ್ವಾಟರ್ಸ್ ಹಿಂಬದಿ, ಮಂಡ್ಯಾಳ, ಮುಗದ, ಕಲಕೇರಿ, ಹುಣಶಿಕುಮಾರಿಯ ವಾಚ್ ಟವರ್ ಗುಡ್ಡದಲ್ಲಿ ಉರುಳುಗಳನ್ನು ಹಾಕಿಡಲಾಗುತ್ತಿದೆ. ಕಾಡು ಮೊಲ, ಮಿಕ, ಬುರ್ಲಿ, ಕಾಡುಕೋಳಿಗಳನ್ನು ಹಿಡಿಯಲು ಈ ರೀತಿ ಮಾಡಲಾಗುತ್ತಿದೆ.

ಇದೆಲ್ಲ ಅರಣ್ಯ ಇಲಾಖೆ ಸಿಬ್ಬಂದಿಗೆ ಗೊತ್ತಿಲ್ಲ ಅಂತಲ್ಲ. ಆದರೆ, ಅವರು ಜಾಣ ಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆ, ಅಷ್ಟೇ, ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಏನಂತಾರೆ? ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ್ ಇಂಥ ಕೃತ್ಯಗಳ ವಿರುದ್ಧ ಕ್ರಮ ಕೈಗೊಳ್ಳಲು ತಂಡವನ್ನು ರಚಿಸಲಾಗುವುದು. ಶೀಘ್ರದಲ್ಲೇ ಹಕ್ಕಿಗಳನ್ನು ಬೇಟೆಯಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಭೂಮಿಯ ಮೇಲೆ ಜೀವಿಸಲು ಮನುಷ್ಯನಿಗೆ ಎಷ್ಟು ಹಕ್ಕು ಇದೆಯೋ ಉಳಿದೆಲ್ಲ ಜೀವಿಗಳಿಗೂ ಅಷ್ಟೇ ಹಕ್ಕಿದೆ. ಆದರೆ ಸ್ವಾರ್ಥ ಹಾಗೂ ತಪ್ಪು ತಿಳುವಳಿಕೆಯಿಂದಾಗಿ ಪ್ರಾಣಿ, ಪಕ್ಷಿ ಸಂಕುಲದ ಜೀವಕ್ಕೆ ಈ ರೀತಿ ಹಾನಿ ಮಾಡುತ್ತ ನಾವು ಮಾನವರು ಬದುಕುತ್ತಿದ್ದೇವೆ. -ನರಸಿಂಹಮೂರ್ತಿ ಪ್ಯಾಟಿ

ಆಗಸದಲ್ಲಿ ಬಾನಾಡಿಗಳ ಚಿತ್ತಾರ.. ಚಿಲಿಪಿಲಿಗಳ ಕಲರವ, ಗದಗದಲ್ಲಿ ವಿದೇಶಿ ಪಕ್ಷಿಗಳ ಸ್ವಚ್ಚಂದ ವಿಹಾರ

Published On - 1:29 pm, Sun, 6 December 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್