AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Row: ಕೋರ್ಟ್ ಆದೇಶ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ -ಶಿಕ್ಷಣ ಸಚಿವ ಬಿ ಸಿ ನಾಗೇಶ್

ಪರಿಸ್ಥಿತಿ ನೋಡಿದರೆ ಈ ಘಟನೆಗಳ ಹಿಂದೆ ಕಾಣದ ಕೈಗಳು ಇದೆ ಅನ್ನೋ ಅನುಮಾನ ಮೂಡುತ್ತಿದೆ. ಇಷ್ಟು ಹಠವಾಗಿ ಹೆಣ್ಣುಮಕ್ಕಳು ವಿದ್ಯೆಗಿಂತ ಧರ್ಮವೇ ಮುಖ್ಯ ಎಂದು ಕುಳಿತಿದ್ದಾರೆ. ಇದನ್ನು ನೋಡಿದರೆ ದೇಶ ವಿಭಜನೆ ಮಾಡುವ ದುಷ್ಟ ಶಕ್ತಿಗಳ ಕೆಟ್ಟ ಮನಸುಗಳು ಈ ರೀತಿ ಗೊಂದಲ ಸೃಷ್ಟಿ ಮಾಡುತ್ತಿವೆ ಎನಿಸುತ್ತದೆ- ಶಿಕ್ಷಣ ಸಚಿವ ಬಿ ಸಿ ನಾಗೇಶ್

Hijab Row: ಕೋರ್ಟ್ ಆದೇಶ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ -ಶಿಕ್ಷಣ ಸಚಿವ ಬಿ ಸಿ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Feb 09, 2022 | 10:03 AM

Share

ಬೆಂಗಳೂರು: ದಿಢೀರನೆ ಭುಗಿಲೆದ್ದ ಹಿಜಾಬ್​ ಬೇಡಿಕೆ (hijab row) ಬಿರುಗಾಳಿಯಂತೆ ಎಲ್ಲೆಡೆ ಚರ್ಚೆಗೆ ಆಸ್ಪದ ಕಲ್ಪಿಸಿದೆ. ಒಂದಷ್ಟು ವೈಮನಸ್ಸಿಗೂ ನೀರೆರೆದಿದೆ. ಈ ಮಧ್ಯೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಇಂದು ಅಥವಾ ನಾಳೆ ಕೋರ್ಟ್ (karnataka high court) ತನ್ನ ಮಹತ್ವದ ದೂರಗಾಮಿ ಆದೇಶ ನೀಡುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಟಿವಿ9 ಜೊತೆ ಮಾತನಾಡಿದ್ದು ಕೋರ್ಟ್ ಯಾವುದೇ ತೀರ್ಪು ಕೊಟ್ಟರು ಸರ್ಕಾರ ಮಾನ್ಯತೆ ಮಾಡುತ್ತದೆ. ಇದೇ ರೀತಿಯ ತೀರ್ಪು ಬರುತ್ತದೆ ಎಂದು ಹೇಳಲು ಆಗಲ್ಲ. ಕೋರ್ಟ್ ತೀರ್ಪು ನೋಡಿಕೊಂಡು ಸರ್ಕಾರ ಮುಂದಿನ ತೀರ್ಮಾನ ಮಾಡುತ್ತದೆ. ಯಾವುದೇ ತರಹದ ತೊಂದರೆ ಆಗದಂತೆ ಗೃಹ ಇಲಾಖೆ ಕ್ರಮ ತೆಗೆದುಕೊಂಡಿದ್ದೆ ಎಂದು (education minister bc nagesh) ಹೇಳಿದ್ದಾರೆ.

ರಾಜ್ಯದ ಕಾಲೇಜುಗಳ ಸ್ಥಿತಿಗತಿ ಬಗ್ಗೆ ಸಿಎಂ ಬಿಮ್ಮಾಯಿಗೆ ಮಾಹಿತಿ ನೀಡಿದ್ದೀವಿ. ಈಗಿನ ಪರಿಸ್ಥಿತಿ ನೋಡಿದರೆ ಈ ಘಟನೆಗಳ ಹಿಂದೆ ಕಾಣದ ಕೈಗಳು ಇದೆ ಅನ್ನೋ ಅನುಮಾನ ಮೂಡುತ್ತಿದೆ. ಇಷ್ಟು ಹಠವಾಗಿ ಹೆಣ್ಣುಮಕ್ಕಳು ವಿದ್ಯೆಗಿಂತ ಧರ್ಮವೇ ಮುಖ್ಯ ಎಂದು ಕುಳಿತಿದ್ದಾರೆ. ಇದನ್ನು ನೋಡಿದರೆ ದೇಶ ವಿಭಜನೆ ಮಾಡುವ ದುಷ್ಟ ಶಕ್ತಿಗಳ ಕೆಟ್ಟ ಮನಸುಗಳು ಈ ರೀತಿ ಗೊಂದಲ ಸೃಷ್ಟಿ ಮಾಡುತ್ತಿವೆ ಎಂದು ಅವರು ಗಂಭೀರವಾಗಿ ಹೇಳಿದರು.

ಈ ಮಧ್ಯೆ, ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಸಿಎಂ ಬೊಮ್ಮಾಯಿ ಜತೆ ಎಜಿ ಪ್ರಭುಲಿಂಗ ನಾವದಗಿ ಇದೀಗತಾನೆ 40 ನಿಮಿಷ ಚರ್ಚೆ ನಡೆಸಿದ್ದಾರೆ. ಸರ್ಕಾರದ ವತಿಯಿಂದ ಕಾನೂನು ಹೋರಾಟದ ಬಗ್ಗೆ ಬೆಂಗಳೂರಿನ ಆರ್​.ಟಿ. ನಗರದ ಸಿಎಂ ನಿವಾಸದಲ್ಲಿ ಚರ್ಚೆ ನಡೆಸಿದ್ದಾರೆ. ಅದಕ್ಕೂ ಮುನ್ನ, ಸಿಎಂ ಬೊಮ್ಮಾಯಿ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಉನ್ನತ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ. ಸಚಿವರು ನಿನ್ನೆ ತಡರಾತ್ರಿಯೂ ಬಂದು ಸಿಎಂ ಜೊತೆ ಚರ್ಚೆ ನಡೆಸಿದ್ದರು.

ಇದನ್ನೂ ಓದಿ: ಮೃತಪಟ್ಟ ಗಂಡನ ನಕಲಿ ದಾಖಲೆ ನೀಡಿ, ಮೂರು ಕೋಟಿ ವಿಮೆ ಕ್ಲೈಮ್! ಪತ್ನಿಗಾಗಿ ಕೋರಮಂಗಲ ಪೊಲೀಸರಿಂದ ಹುಡುಕಾಟ

ಇದನ್ನೂ ಓದಿ: ಪಾಂಡವರ ರಾಜಧಾನಿ ಹಸ್ತಿನಾಪುರದಲ್ಲಿ ಜಯ ಸಾಧಿಸುವವರೇ ಉತ್ತರ ಪ್ರದೇಶದಲ್ಲಿ ಸದಾ ಅಧಿಕಾರಕ್ಕೆ ಬರುವುದು, ಇದು ನಿಜ್ಜಾ!

Published On - 9:50 am, Wed, 9 February 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ