AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್​ಗೆ ಉತ್ತರ ನೀಡದ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ತಾರಾ ವರಿಷ್ಠರು? ಬಿಜೆಪಿ ಹೈಕಮಾಂಡ್ ಮುಂದಿನ ನಡೆಯೇನು?

ಒಂದೆಡೆ ಬಂಡಾಯ ಶಾಸಕ ಬಸನಗೌಡ ಪಾಟೀಲಗೆ ಶೋಕಾಸ್ ನೋಟಿಸ್ ನೀಡಿದ ಬಳಿಕ ಅವರ ಬಣ ಮೌನಕ್ಕೆ ಶರಣಾಗಿದೆ. ಮತ್ತೊಂದೆಡೆ ಫೆಬ್ರವರಿ 20ರಂದು ಎಲ್ಲವೂ ಸರಿಯಾಗಲಿದೆ ಎಂದು ರಾಜ್ಯಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಹಾಗಾದರೆ ಯತ್ನಾಳ್ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳುತ್ತಾ? ಮುಂದಿನ ನಡೆ ಏನಿರಬಹುದು ಎಂಬುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ನೋಟಿಸ್​ಗೆ ಉತ್ತರ ನೀಡದ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ತಾರಾ ವರಿಷ್ಠರು? ಬಿಜೆಪಿ ಹೈಕಮಾಂಡ್ ಮುಂದಿನ ನಡೆಯೇನು?
ಬಸನಗೌಡ ಪಾಟೀಲ್ ಯತ್ನಾಳ್
ಕಿರಣ್​ ಹನಿಯಡ್ಕ
| Edited By: |

Updated on: Feb 18, 2025 | 6:47 AM

Share

ಬೆಂಗಳೂರು, ಫೆಬ್ರವರಿ 18: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿಯ ಶೋಕಾಸ್ ‌ನೋಟಿಸ್​ಗೆ ಉತ್ತರ ಕೊಟ್ಟಿರುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇದರ ಮಧ್ಯೆಯೇ ಫೆಬ್ರವರಿ 20 ರಂದು ಬೆಂಗಳೂರಿನಲ್ಲಿ ಯತ್ನಾಳ್ ಬಣ ಮತ್ತೊಂದು ಸಭೆ ಸೇರಲು ಸಿದ್ಧತೆ ನಡೆಸಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರರನ್ನು ಬದಲಿಸಬೇಕು ಎಂದು ಸಮರ ಸಾರಿ, ಭಿನ್ನಮತೀಯರ ಗುಂಪು ಕಟ್ಕೊಂಡು ದೆಹಲಿ ಯಾತ್ರೆ ಮಾಡಿದ್ದ ಯತ್ನಾಳ್‌ಗೆ ಹೈಕಮಾಂಡ್ ಶಾಕ್ ಕೊಟ್ಟಿತ್ತು. ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿ 72 ಗಂಟೆಯೊಳಗೆ ಉತ್ತರಿಸುವಂತೆ ಸೂಚಿಸಿತ್ತು. ಆದರೆ ಗಡುವು ಮುಗಿದರೂ ಯತ್ನಾಳ್ ಉತ್ತರ ನೀಡಿರುವ ಮಾಹಿತಿ ಇಲ್ಲ. ಈ ಬಗ್ಗೆ ಹೈಕಮಾಂಡ್ ಕೂಡ ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ಮಧ್ಯೆ ಯತ್ನಾಳ್ ಆರ್‌ಎಸ್‌ಎಸ್ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ.

ಫೆಬ್ರವರಿ 20ಕ್ಕೆ ಡೆಡ್‌ಲೈನಾ? ವಿಜಯೇಂದ್ರ ಮಾತಿನ ಮರ್ಮವೇನು?

ಫೆಬ್ರವರಿ 20 ರೊಳಗೆ ಎಲ್ಲವೂ ತೀರ್ಮಾನ ಆಗಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಈ ಮಾತಿನ ಮರ್ಮವೇನು ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಮತ್ತೊಂದೆಡೆ ಯತ್ನಾಳ್‌ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅದನ್ನೆಲ್ಲ ನಮ್ಮ ರಾಷ್ಟ್ರೀಯ ನಾಯಕರು ನೋಡಿಕೊಳ್ಳುತ್ತಾರೆ ಎಂದಿದ್ದಾರೆ. ಅಂತೇಳಿದ್ದಾರೆ.

ಇದನ್ನೂ ಓದಿ: ದಿಲ್ಲಿಯಲ್ಲಿ ರಾಜಕೀಯ ಆಟವಾಡುತ್ತಿರುವ ಯತ್ನಾಳ್​ಗೆ ಮತ್ತೊಮ್ಮೆ ಬಿಗ್ ಶಾಕ್ ಕೊಟ್ಟ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ

ಯತ್ನಾಳ್‌ಗೆ ಶಿಸ್ತು ಸಮಿತಿ ನೋಟಿಸ್ ಬಳಿಕ ಭಿನ್ನಮತೀಯರ ಬಣ ಮೌನಕ್ಕೆ ಶರಣಾಗಿದೆ. ಅದರೆ ಈಗ ಮತ್ತೆ ವಿಜಯೇಂದ್ರ ಬದಲಾವಣೆಗೆ ಒತ್ತಾಯಿಸಿ ಸಭೆ ಸೇರಲು ಮುಂದಾಗಿದೆ. 20 ರಂದು ಬೆಂಗಳೂರಿನ ಕುಮಾರ್ ಬಂಗಾರಪ್ಪ ನಿವಾಸದಲ್ಲೇ ಸಭೆ ಕರೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಾ ಎಂಬ ಪ್ರಶ್ನೆ ಜೊತೆಗೆ ಯತ್ನಾಳ್ ತಂಡದ ಮುಂದಿನ ನಡೆಯೇನು ಎಂಬುದು ಸದ್ಯ ರಾಜ್ಯ ರಾಜಕೀಯದಲ್ಲಿ ಕುತೂಹಲ ಹುಟ್ಟಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..