AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಕ್ಷೇತ್ರ ಶಿಗ್ಗಾಂವಿಯನ್ನು ಮಾದರಿ ಕ್ಷೇತ್ರವಾಗಿ ಮಾಡುವೆ: ನೂತನ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಸ್ವಕ್ಷೇತ್ರ ಶಿಗ್ಗಾಂವಿಯನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ. ರಾಜ್ಯದ ಅಭಿವೃದ್ಧಿ ಜತೆಗೆ ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡುವೆ ಎಂದು ಅಭಿನಂದನಾ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಭರವಸೆ ನೀಡಿದರು.

ಸ್ವಕ್ಷೇತ್ರ ಶಿಗ್ಗಾಂವಿಯನ್ನು ಮಾದರಿ ಕ್ಷೇತ್ರವಾಗಿ ಮಾಡುವೆ: ನೂತನ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jul 28, 2021 | 4:04 PM

Share

ಬೆಂಗಳೂರು: ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮೂಲದ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಳ್ಳುತ್ತಿದ್ದಂತೆ ಅವರ ಸ್ವಕ್ಷೇತ್ರ  ಶಿಗ್ಗಾಂವಿ ಮತ್ತು ಹಾವೇರಿ ಜಿಲ್ಲೆಯಿಂದ ಸಾವಿರಾರು ಅಭಿಮಾನಿಗಳು ಬೆಂಗಳೂರಿಗೆ ಧಾವಿಸಿ ಬಂದಿದ್ದಾರೆ. ಅರಮನೆ ಮೈದಾನಕ್ಕೆ ಆಗಮಿಸಿದ ತಮ್ಮಅಭಿಮಾನಿಗಳು ಮತ್ತು ಬೆಂಬಲಿಗರನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಮನೆ ಮೈದಾನದ ತ್ರಿಪುರ ವಾಸಿನಿ ವೇದಿಕೆಗೆ ಬಂದಿದ್ದಾರೆ.

‘ಹಾವೇರಿ ಹುಲಿ’ಗೆ ಜಯವಾಗಲಿ ಎಂದು ಬೆಂಬಲಿಗರಿಂದ ಹರ್ಷೋದ್ಘಾರ:

ಹಾವೇರಿ ಜಿಲ್ಲೆ ಹಾಗೂ ಶಿಗ್ಗಾಂವ್ ಕ್ಷೇತ್ರದ ಜನತೆ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಅಭಿನಂದನಾ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದರು.  ಕಾರ್ಯಕ್ರಮದಲ್ಲಿ ಭಾಗಿಯಾಗಲು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ವೇದಿಕೆಗೆ ಬರುತ್ತಿದ್ದಂತೆ ಅಭಿಮಾನಿಗಳು ಹಾವೇರಿ ಹುಲಿಗೆ ಜೈ ಅಂತಾ ಹರ್ಷೋದ್ಘಾರ ಮಾಡಿದರು.

ಈ ವೇಳೆ ಹೆಬ್ಬುಲಿ ಹುಲಿ ಹುಲಿ ಅಂತಾ ಅಭಿಮಾನಿಗಳು ಕೂಗು ಹಾಕಿದಾಗ ಹೇ ಸುಮ್ನಿರಪ್ಪ ಆ ರೀತಿ ಬೇಡ ಅಂತಾ ನೂತನ ಸಿಎಂ ಬೊಮ್ಮಾಯಿ ಸೂಚಿಸಿದರು. ಸ್ಥಾನದ ಬಲಕ್ಕಿಂತ ಸೇವೆ ಮಾಡುವುದು ಬಹಳ ಮುಖ್ಯ. ನಾನು ನಿಮ್ಮ ಹೃದಯದಲ್ಲಿದ್ದೇನೆ. ನಾನು ಮುಂದಿನ ಮುಖ್ಯಮಂತ್ರಿ ಎಂಬುದು ನನಗೆ ನಿನ್ನೆ ಸಂಜೆ 7 ಗಂಟೆಗೆ ಗೊತ್ತಾಗಿದ್ದು. ಆದ್ರೆ ಟಿವಿಯವರು ಅಡ್ವಾನ್ಸ್ ಆಗಿ ಹೊಡೆದಿದ್ರು. ನೀವೂ ಅಡ್ವಾನ್ಸ್ ಆಗಿ ಬಂದುಬಿಟ್ರಿ. ನಾನು ಶಿಗ್ಗಾಂವ್ ಕ್ಷೇತ್ರವನ್ನ ಪ್ರವಾಸ ಮಾಡ್ತೀನಿ ಎಂದರು.

ನನಗೆ ಶಕ್ತಿ ತುಂಬಿದವರು ನೀವು, ನಿಮ್ಮ ಬೆಂಬಲದಲ್ಲಿ ನನಗೆ ಎಷ್ಟು ಶಕ್ತಿ ಇದೆ ಅನ್ನೋದು ಗೊತ್ತಿದೆ. ನನಗೆ ಹೆಗಲಿಗೆ ಹೆಗಲು ಕೊಟ್ಟಿದ್ದೀರಿ. ಹೆಜ್ಜೆಯಲ್ಲಿ ಹೆಜ್ಜೆಯಿಟ್ಟು ಸಾಧನೆ ಮಾಡಿದ್ದೀರಿ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನ ಮಾಡುವಲ್ಲಿ ಯಶಸ್ವಿಯಾಗಿದ್ದೇನೆ. ನಿಮ್ಮನ್ನ ಪಡೆದುಕೊಂಡಿರುವುದು ನನ್ನ ಪೂರ್ವಜನ್ಮದ ಪುಣ್ಯ. ನಿಮ್ಮನ್ನೆಲ್ಲ ನೋಡಿದಾಗ ಅತ್ಮವಿಶ್ವಾಸ ಹೆಚ್ಚಾಗುತ್ತೆ, ಆದಮ್ಯವಾದ ಶಕ್ತಿ ಬರುತ್ತದೆ. ನಿಮ್ಮೀ ಶಕ್ತಿ-ಬೆಂಬಲದಿಂದ ಮುಂದೆ ಇಟ್ಟ ಹೆಜ್ಜೆಯನ್ನ ಯಾವತ್ತೂ ಹಿಂದೆ ಇಟ್ಟಿಲ್ಲ ಎಂದು ಬಸವರಾಜ ಬೊಮ್ಮಾಯಿ ಎದೆತುಂಬಿ ಈ ಸಂದರ್ಭದಲ್ಲಿ ಹೇಳಿದರು. ನಾನು ಎಷ್ಟೇ ಮೇಲೆ ಹೋದರೂ ನಾನು ನಿಮ್ಮ ಬಸಣ್ಣನೇ: ಈ ವೇಳೆ, ತಮ್ಮನ್ನು ಅಭಿನಂದಿಸಲು ಬಂದಿದ್ದ ಸಾವಿರಾರು ಮಂದಿಯನ್ನುದ್ದೇಶಿಸಿ ಮಾತನಾಡಿದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದ ಪ್ರತಿ ಹಳ್ಳಿಯ ಮನೆಯಲ್ಲೂ ನಾನಿದ್ದೇನೆ. ಸ್ಥಾನದ ಬಲಕ್ಕಿಂತ ಸೇವೆ ಮಾಡುವುದು ಬಹಳ ಮುಖ್ಯ. ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನತೆಗೆ ವಿಶೇಷ ವ್ಯವಸ್ಥೆ ಮಾಡುತ್ತೇನೆ ಎಂದರು. ಇದೇ ವೇಳೆ, ಸ್ವಕ್ಷೇತ್ರ ಶಿಗ್ಗಾಂವಿಯನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ. ರಾಜ್ಯದ ಅಭಿವೃದ್ಧಿ ಜತೆಗೆ ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡುವೆ ಎಂದು ಅಭಿನಂದನಾ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಭರವಸೆ ನೀಡಿದರು.

ನಮ್ಮ ಜಿಲ್ಲೆ ಹಾಗೂ ಕ್ಷೇತ್ರದ ಜನತೆಗೆ ವಿಶೇಷ ವ್ಯವಸ್ಥೆಯನ್ನ ಮಾಡುತ್ತೇನೆ. ಅವರು ನಮ್ಮ ಅನ್ನದಾತರು. ನಿಮ್ಮ ಜೊತೆಗೆ ಕೆಲಸ ಹೋರಾಟ ಮಾಡಿರುವಂತಹದ್ದು ಎಲ್ಲಾ ನೆನಪಿದೆ. ನನಗೆ ಹಿರಿಯರಾದ ಉದಾಸಿಯವರು ನೆನಪಿಗೆ ಬರುತ್ತಿದ್ದಾರೆ. 12 ತಾಲ್ಲೂಕಿಗೆ ಅವರ ಸೇವೆ ಅಪಾರವಾಗಿದೆ. ಇವತ್ತು ಅವರು ನಮ್ಮ ನಡುವೆ ಇಲ್ಲ. ಎಲ್ಲೇ ಇದ್ದರೂ ಅವರ ಆಶೀರ್ವಾದ ನಮ್ಮ ಮೇಲೆ ಇರುತ್ತದೆ ಎಂದು ಬಸವರಾಜ ಬೊಮ್ಮಾಯಿ ಗದ್ಗದಿತರಾದರು.

ಎಲ್ಲಾ ವರ್ಗದ ಜನತೆಗೆ ನ್ಯಾಯ ಒದಗಿಸಲು ಬದ್ದನಾಗುತ್ತೇನೆ. ಸ್ವಲ್ಪ ತಾಳ್ಮೆಯೂ ಬೇಕು, ಸಹಕಾರವೂ ಬೇಕು. ನಿಮಗೋಸ್ಕರ ವಿಶೇಷ ಸಮಾರಂಭವನ್ನ ಏರ್ಪಡಿಸುತ್ತೇನೆ. ನಾನು ಎಷ್ಟೇ ಮೇಲೆ ಹೋದರೂ ನಾನು ನಿಮ್ಮ ಬಸಣ್ಣನೇ. ನೀವೂ ಕೂತರೀ, ನಾನೇ ಅಲ್ಲಿ ಬಂದು ಹೋಗ್ತೇನೆ ಅಂತಾ ಜನ ಇದ್ದ ಕಡೆಗೆ ಬಸವರಾಜ ಬೊಮ್ಮಾಯಿ ತೆರಳಿದರು. ಆ ವೇಳೆ ನೂತನ ಸಿಎಂ ಮಾತನಾಡಿಸಲು ಮುಗಿಬಿದ್ದ ಜನ, ಹೂ ಗುಚ್ಛಗಳನ್ನ ನೀಡುತ್ತಾ ಅಭಿನಂದನೆ ಸಲ್ಲಿಸಿದರು.

(will build shiggaon into model constitution declares karnataka new cm basavaraj bommai)

Published On - 3:41 pm, Wed, 28 July 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ