AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ, ಹೊಸ ಕಾನೂನು ಜಾರಿಗೆ ನಿರ್ಧಾರ: ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಡ್ರಗ್ಸ್​ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಮತ್ತು ಪೊಲೀಸ್​ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್​ ಹಾವಳಿ ತಡೆಯಲು ತೆಗೆದುಕೊಳ್ಳಲಾಗುವ ಕ್ರಮಗಳ ಬಗ್ಗೆ ತಿಳಿಸಿದರು.

ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ, ಹೊಸ ಕಾನೂನು ಜಾರಿಗೆ ನಿರ್ಧಾರ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Anil Kalkere
| Edited By: ವಿವೇಕ ಬಿರಾದಾರ|

Updated on:Sep 18, 2024 | 2:48 PM

Share

ಬೆಂಗಳೂರು, ಸೆಪ್ಟೆಂಬರ್​ 18: ಬೆಂಗಳೂರು (Bengaluru) ನಗರದಲ್ಲಿ ಡ್ರಗ್ಸ್ (Drugs) ಹಾವಳಿ ಹೆಚ್ಚಾಗಿದೆ. ಶೇಕಡಾ 50ರಷ್ಟು ಪ್ರಕರಣಗಳು ಬೆಂಗಳೂರು ನಗರದಲ್ಲಿ ದಾಖಲಾಗಿವೆ. ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ‌ ಶೇ11 ರಷ್ಟು ಕೇಸ್​​ಗಳಿವೆ. ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಿದ್ದೇವೆ. ಗೃಹ ಸಚಿವರು, ಆರೋಗ್ಯ, ವೈದ್ಯಕೀಯ, ನಗರಾಭಿವೃದ್ಧಿ, ಐಟಿಬಿಟಿ ಇಲಾಖೆ ಸಚಿವರುಗಳು‌ ಈ ಟಾಸ್ಕ್​ ಫೋರ್ಸ್​​ನ ಸದಸ್ಯರಾಗಿರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್​ ಹಾವಳಿ ತಡೆಗಟ್ಟಲು ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು, ಐಟಿಬಿಟಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವರು ಜೊತೆ‌ ಸಭೆ ನಡೆಸಿದೆ. ಸಭೆಯಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿಸಿದರು.

ಡ್ರಗ್ಸ್​ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್​ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ ಆಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಸುಲಭವಾಗಿ ಸಿಗುತ್ತಿದೆ ಡ್ರಗ್ಸ್​, ಗಾಂಜಾ! ಈ ಕುರಿತು ವಿಶೇಷ ವರದಿ ಇಲ್ಲಿದೆ

ಡ್ರಗ್ಸ್​ ಹಾವಳಿ ತಡೆಗಟ್ಟಲು ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಮಿಟಿ ಇದೆ. ಇದಕ್ಕೆ ಹೆಚ್​​ ಸಿಜಿ ಆಸ್ಪತ್ರೆ ಕ್ಯಾನರ್​ ತಜ್ಞ, ತಂಬಾಕು ನಿಯಂತ್ರಣ ಸಂಬಂಧಿತ ಉನ್ನತ ಮಟ್ಟದ ಸಮಿತಿ ಸದಸ್ಯ ಡಾ. ವಿಶಾಲ್​ ರಾವ್​ ಸದಸ್ಯರರಾಗಿದ್ದಾರೆ. ಇವರ ಅಭಿಪ್ರಾಯವನ್ನೂ ತೆಗೆಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರು ಪೂರ್ವದಲ್ಲಿ ಅತಿ ಡಗ್ಸ್​ ಪೆಡ್ಲೆರ್ಸ್​ ಇದ್ದಾರೆ. ಹೀಗಾಗಿ ಅಲ್ಲಿಂದ ಅತಿ‌ ಹೆಚ್ಚು ಡ್ರಗ್ಸ್​ ಸರಬರಾಜು ಆಗುತ್ತಿದೆ. ಡ್ರಗ್ಸ್​​​​ನಲ್ಲಿ‌ ಸಿಂಥೆಟಿಕ್ ಬಂದಿದೆ. ಇದೆಲ್ಲ ಪೊಲೀಸ್​ ಠಾಣೆಗಳಿಗೆ ಗೊತ್ತಿಲ್ಲದೆ ನಡೆಯುವುದಿಲ್ಲ. ಇವೆಲ್ಲದರ ಬಗ್ಗೆ ಪೊಲೀಸರಿಗೆ ಮಾಹಿತಿ‌ ಇದ್ದೇ ಇರುತ್ತೆ ಎಂದರು.

ಮೆಡಿಕಲ್‌ ಶಾಪ್​​ಗಳಲ್ಲೂ ಡ್ರಗ್ಸ್ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ಕೆಲ ಮೆಡಿಕಲ್ ಶಾಪ್​​ಗಳ ಲೈಸೆನ್ಸ್ ರದ್ದು ಮಾಡಿದ್ದೇವೆ. ಡ್ರಗ್ಸ್ ಇಲ್ಲ ಅಂತ ಹೇಳಲ್ಲ, ಕಡಿಮೆ ಮಾಡಬೇಕು ನಂತರ ತಡೆಗಟ್ಟಬೇಕು. 2023ರಲ್ಲಿ 123 ಅಂತರಾಷ್ಟ್ರೀಯ ಡ್ರಗ್ಸ್​ ಸರಬರಾಜುದಾರರನ್ನು ಬಂಧಿಸಲಾಗಿದೆ. 2024ರಲ್ಲಿ 8,018 ಡ್ರಗ್ಸ್ ಸೇವನೆ ಮಾಡುವವರನ್ನು ಬಂಧಿಸಲಾಗಿದೆ. ಒಡಿಶಾ ಹಾಗೂ ಆಂಧ್ರ ಪ್ರದೇಶದಿಂದ ಡ್ರಗ್ಸ್ ಪೂರೈಕೆ ಆಗುತ್ತಿದೆ. ಮೊದಲು ಕಡಿಮೆ ಮಾಡಬೇಕು, ನಂತರ ಸಂಪೂರ್ಣ ನಿಲ್ಲಿಸಬೇಕು ಎಂದು ಹೇಳಿದರು.

ಡ್ರಗ್ಸ್ ಹಾವಳಿಯಿಂದ ಅಪರಾಧ ಪ್ರಕರಣ ಹೆಚ್ಚಳ

ಡ್ರಗ್ಸ್​ ಸೇವನೆಯಿಂದ ಯುವ ಸಮೂಹ ಹಾಳಾಗುತ್ತಿದ್ದು, ಇದು ಸಮಾಜಕ್ಕೆ ಕಂಟಕ. ಡ್ರಗ್ಸ್ ತಡೆಗಟ್ಟಲು ಎನ್​ಜಿಒಗಳನ್ನು ಬಳಕೆ ಮಾಡಿಕೊಳ್ಳುತ್ತೇವೆ. ಡ್ರಗ್ಸ್ ತಡೆಗಟ್ಟಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಡ್ರಗ್ಸ್​ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಡ್ರಗ್ಸ್ ಹಾವಳಿಯಿಂದ ಅಪರಾಧ ಪ್ರಕರಣ ಕೂಡ ಹೆಚ್ಚಾಗುತ್ತಿದೆ. ನಶೆಯಲ್ಲಿ ಚಾಕು ಇರಿತದಿಂದ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಟಾಸ್ಕ್​ಫೋರ್ಸ್​ ರಚನೆ ಮಾಡಲು ನಿರ್ಧರಿಸಿದ್ದೇವೆ. NCC, ಸ್ಕೌಡ್ಸ್ ಆ್ಯಂಡ್​ ಗೈಡ್ಸ್​ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಜಾಗೃತಿ ಮೂಡಿಸಿ, ಡ್ರಗ್ಸ್​ ತಡೆಗಟ್ಟುವಲ್ಲಿ ಅವರು ಭಾಗಿಯಾಗುವಂತೆ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:19 pm, Wed, 18 September 24

Follow Us
Anil Kalkere
Anil Kalkere
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ