AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೂ ತೊಂದರೆ ಆಗದಂತೆ, ನಮ್ಮ ಅವಧಿಯಲ್ಲಿಯೇ ಸದಾಶಿವ ಆಯೋಗ ವರದಿ ಜಾರಿ ಆಗುತ್ತೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಪುನರುಚ್ಚಾರ

A Narayanaswamy: ರಾಜ್ಯದಲ್ಲಿ ಮುಂದಿನ ಶನಿವಾರ ನಡೆಯಲಿರುವ ಬೈ ಎಲೆಕ್ಷನ್​ಗಳಲ್ಲಿ ಹಾನಗಲ್ ಮತ್ತು ಸಿಂದಗಿಯಲ್ಲಿ ನಾವು ಗೆಲ್ತೀವಿ. ಮೋದಿ ಅವರ ದೇಶಭಕ್ತಿ, ಆಡಳಿತ ವೈಖರಿ ನಮ್ಮ ಗೆಲುವಿಗೆ ಕಾರಣವಾಗಲಿದೆ. ಯಾರ ನಿರೀಕ್ಷೆಗಳನ್ನೂ ಹುಸಿ ಮಾಡದ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬೊಮ್ಮಾಯಿ ಹೋಗ್ತಿದಾರೆ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಯಾರು ಹೋಗ್ತಾರೋ ಅವರಿಗೆ ಜಯ ಕಟ್ಟಿಟ್ಟಬುತ್ತಿ ಎಂದು ನಾರಾಯಣಸ್ವಾಮಿ ಹೇಳಿದರು.‌

ಯಾರಿಗೂ ತೊಂದರೆ ಆಗದಂತೆ, ನಮ್ಮ ಅವಧಿಯಲ್ಲಿಯೇ ಸದಾಶಿವ ಆಯೋಗ ವರದಿ ಜಾರಿ ಆಗುತ್ತೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಪುನರುಚ್ಚಾರ
ಯಾರಿಗೂ ತೊಂದರೆ ಆಗದಂತೆ, ನಮ್ಮ ಅವಧಿಯಲ್ಲಿಯೇ ಸದಾಶಿವ ಆಯೋಗ ವರದಿ ಜಾರಿ ಆಗುತ್ತೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಪುನರುಚ್ಚಾರ
TV9 Web
| Edited By: |

Updated on:Oct 27, 2021 | 10:57 AM

Share

ಕೊಪ್ಪಳ: ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿರುವ ಹುಲಿಗೆಮ್ಮ ದೇಗುಲಕ್ಕೆ ಕೇಂದ್ರ ಸಚಿವ ನಾರಾಯಣಸ್ವಾಮಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಕೊಪ್ಪಳ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ನಾರಾಯಣಸ್ವಾಮಿಗೆ ಸ್ಥಳೀಯ ನಾಯಕರು ಸಾಥ್ ನೀಡಿದರು. ಈ ವೇಳೆ, ಹುಲಿಗೆಮ್ಮ ದೇವಸ್ಥಾನದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ನಾರಾಯಣಸ್ವಾಮಿ ಆರ್ಟಿಕಲ್ 370 ತೆಗೆಯೋಕೆ ಆಗಲ್ಲ ಎಂದು ಅನೇಕ ತಜ್ಞರು ದಾರಿ ತಪ್ಪಿಸಿದ್ದರು. ಆದ್ರೆ ನಮ್ಮ ಸರ್ಕಾರ ಆರ್ಟಿಕಲ್ 370 ತಗೆದು ಹಾಕ್ತು. ನಾವು ಯಾವ ಸಮಾಜವನ್ನೂ ತೆಗೆದುಹಾಕಲ್ಲ, ಯಾರಿಗೂ ತೊಂದರೆ ಆಗದ ಹಾಗೆ ನಮ್ಮ ಸರ್ಕಾರದ ಅವಧಿಯಲ್ಲಿಯೇ ಸದಾಶಿವ ಆಯೋಗ ಜಾರಿ ಮಾಡ್ತೇವೆ ಎಂದು ಪುನರ್​​ ಭರವಸೆ ನೀಡಿದರು.

ಇನ್ನು ರಾಜ್ಯದಲ್ಲಿ ಮುಂದಿನ ಶನಿವಾರ ನಡೆಯಲಿರುವ ಬೈ ಎಲೆಕ್ಷನ್​ಗಳಲ್ಲಿ ಹಾನಗಲ್ ಮತ್ತು ಸಿಂದಗಿಯಲ್ಲಿ ನಾವು ಗೆಲ್ತೀವಿ. ಮೋದಿ ಅವರ ದೇಶಭಕ್ತಿ, ಆಡಳಿತ ವೈಖರಿ ನಮ್ಮ ಗೆಲುವಿಗೆ ಕಾರಣವಾಗಲಿದೆ. ಯಾರ ನಿರೀಕ್ಷೆಗಳನ್ನೂ ಹುಸಿ ಮಾಡದ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬೊಮ್ಮಾಯಿ ಹೋಗ್ತಿದಾರೆ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಯಾರು ಹೋಗ್ತಾರೋ ಅವರಿಗೆ ಜಯ ಕಟ್ಟಿಟ್ಟಬುತ್ತಿ ಎಂದು ನಾರಾಯಣಸ್ವಾಮಿ ಹೇಳಿದರು.‌

ಇದೇ ವೇಳೆ, ಎರಡು ಪ್ರತಿಪಕ್ಷಗಳು RSS ವಿರುದ್ಧ ಮಾತಾಡಿದ್ದು ಕಪ್ಪುಚುಕ್ಕೆ ಇಟ್ಟಿದ್ದಾರೆ. ಅವರಿಗೆ ಮುಂದೆ ಜನ ಪಾಠ ಕಲಿಸ್ತಾರೆ. ಜೆ.ಡಿ.ಎಸ್ ಹಾಗೂ ಕಾಂಗ್ರೆಸ್ ಧರ್ಮ ಇಬ್ಭಾಗ ಮಾಡೋ ಕೆಲಸ ಮಾಡ್ತಿವೆ ಎಂದು ನಾರಾಯಣಸ್ವಾಮಿ ಹೇಳಿದರು. ನಾನು ಸಂಘ ಪರಿವಾರದಿಂದ ಬಂದವನು. ನನ್ನಲ್ಲಿ ಶಿಸ್ತು ಇದೆ. ವೈಯಕ್ತಿಕ ವಿಚಾರದಲ್ಲಿ ರಾಜಕಾರಣ ಮಾಡೋದು ಯಾರಿಗೂ ಶೋಭೆ ತರೋದಿಲ್ಲಎಂದು ಕೇಂದ್ರ ಸಚಿವ ನಾರಾಯಣ ಸ್ವಾಮಿ ಮಾರ್ಮಿಕವಾಗಿ ಹೇಳಿದರು.

Also Read: ಸದಾಶಿವ ವರದಿ ಜಾರಿ ವಿಚಾರ: ಡಿ ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಮಾದಿಗ ಮಹಾಸಭಾ ಕಾರ್ಯಕರ್ತರು

ಸಾಂಸ್ಕೃತಿಕ ರಾಜಧಾನಿಯಲ್ಲಿ ಇದೆಂತಾ ಅನಿಷ್ಟ ಪದ್ಧತಿ?|Mysore Family Bahiskara|TV9 Kannada

(will implement sadashiva commission report says union minister a narayanaswamy in koppal)

Published On - 10:42 am, Wed, 27 October 21

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್