AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳ ಆಗದ ಸಾರಿಗೆ ನೌಕರರಿಂದ ನಾಳೆ ಡಿಪೋ ಮ್ಯಾನೇಜರ್​ಗಳ ವಿರುದ್ಧ ದೂರು: ವಕೀಲ ಬಾಲನ್

Karnataka Bus Strike: ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯ ನಂತರ ಮಾತನಾಡಿದ ವಕೀಲ ಬಾಲನ್, ನಾಳೆ ಡಿಪೋ ಮ್ಯಾನೇಜರ್‌ಗಳ ವಿರುದ್ಧ ದೂರು ನೀಡುವ ಕುರಿತು ಮಾಹಿತಿ ನೀಡಿದರು.

ಸಂಬಳ ಆಗದ ಸಾರಿಗೆ ನೌಕರರಿಂದ ನಾಳೆ ಡಿಪೋ ಮ್ಯಾನೇಜರ್​ಗಳ ವಿರುದ್ಧ ದೂರು: ವಕೀಲ ಬಾಲನ್
ಸರ್ಕಾರಿ ಬಸ್ (ಸಂಗ್ರಹ ಚಿತ್ರ)
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Apr 12, 2021 | 8:08 PM

Share

ಬೆಂಗಳೂರು: ರಾಜ್ಯ ಸರ್ಕಾರ ಮುಷ್ಕರ ನಿರತ ಸಾರಿಗೆ ನೌಕರರಿಗೆ ವೇತನ ನೀಡದಿರುವುದು ಕಾನೂನುಬಾಹಿರ. ಹೀಗಾಗಿ ವೇತನ ನಾಳೆ ಸಾರಿಗೆ ನೌಕರರು ಸೆಕ್ಷನ್ 406ರಡಿ ಡಿಪೋ ಮ್ಯಾನೇಜರ್‌ಗಳ ವಿರುದ್ಧ ದೂರು ನೀಡಲಿದ್ದಾರೆ ಎಂದು ಬೆಂಗಳೂರಿನಲ್ಲಿ ವಕೀಲ ಬಾಲನ್ ತಿಳಿಸಿದರು. ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯ ನಂತರ ಮಾತನಾಡಿದ ವಕೀಲ ಬಾಲನ್, ನಾಳೆ ಡಿಪೋ ಮ್ಯಾನೇಜರ್‌ಗಳ ವಿರುದ್ಧ ದೂರು ನೀಡುವ ಕುರಿತು ಮಾಹಿತಿ ನೀಡಿದರು.

ಈ ಮೊದಲು ಮಾತನಾಡಿದ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ನೌಕರರ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರಾಜ್ಯ ಸರ್ಕಾರ ಎಚ್ಚರಿಕೆಯಿಂದ ಮುದುವರಿಯಬೇಕಾಗಿದೆ. ಪ್ರೀತಿ, ವಿಶ್ವಾಸದಿಂದ ರಾಜ್ಯವನ್ನು ಕಟ್ಟಬೇಕಾಗಿದೆ. ದಬ್ಬಾಳಿಕೆ, ಬೆದರಿಕೆಯಿಂದ ರಾಜ್ಯವನ್ನು ಕಟ್ಟಲು ಸಾಧ್ಯವಿಲ್ಲ . ಇಂತಹ ಬೆದರಿಕೆಗಳು ಹೆಚ್ಚು ದಿನಗಳ ಕಾಲ ಉಳಿಯೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ನೌಕರರಿಗೆ ಸಂಬಳ ನೀಡದೆ ಸರ್ಕಾರ ವಂಚಿಸಿದೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಉಪಚುನಾವಣೆ ಮುಖ್ಯವಾಗಿದೆ. 1.30 ಲಕ್ಷ ಸಾರಿಗೆ ನೌಕರರ ಜೀವನದ ಬಗ್ಗೆ ನೋಡ್ತಿಲ್ಲ. ಸಾರಿಗೆ ನೌಕರರ ಜತೆ ಮಾತಾಡಿಲ್ಲ, ಸಮಸ್ಯೆಯನ್ನ ಆಲಿಸಿಲ್ಲ. ಮಾತುಕತೆ ಮಾಡುವುದಿಲ್ಲ ಎನ್ನುವುದು ತಪ್ಪು ನಿರ್ಧಾರ. ನಾವು ಅಹಿಂಸಾತ್ಮಕವಾಗಿ ಹೋರಾಟ ಮುಂದುವರೆಸುತ್ತೇವೆ. ಜನರ ಸಮಸ್ಯೆ ಕೇಳದಿರುವ ಸರ್ಕಾರ ಸರ್ಕಾರವೇ ಅಲ್ಲ. ನಾಳೆ ಯುಗಾದಿ ಹಬ್ಬ ಆಚರಿಸಬೇಕು. ಆದರೆ ಮಾರ್ಚ್ ತಿಂಗಳ ವೇತನ ನೀಡದೇ ಸರ್ಕಾರ ವಂಚನೆ ಮಾಡಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ನಡೆಸಿ ಸರ್ಕಾರದವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಾಗರಿಕರ ಸಮಸ್ಯೆ ಕೇಳದ ಸರ್ಕಾರ ಸರ್ಕಾರವೇ ಅಲ್ಲ. ಸಾರಿಗೆ ಸಿಬ್ಬಂದಿಗಳು ಪ್ರತಿಭಟನೆ ಮುಂದುವರೆರೂ ಕೂಡ ಸರ್ಕಾರ ಕ್ರಮ ಕೈಗೊಂಡಿಲ್ಲ. ಇದರ ಜೊತೆಗೆ ಸಂಬಳವನ್ನೂ ಕೊಟ್ಟಿಲ್ಲ. ನಾಳೆ ಯುಗಾದಿ ಹಬ್ಬ ಇದೆ . ವಿಪರ್ಯಾಸವೆಂದರೆ ಇದು ಮೊಂಡು ಧೋರಣೆ. ಹೀಗೆ ಜನರ ಸಮಸ್ಯೆ ಕೇಳದಿರುವ ಸರ್ಕಾರ ಸರ್ಕಾರವೇ ಅಲ್ಲ ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರ 1.30 ಲಕ್ಷ ನೌಕರರ ಜೀವನದ ಕುರಿತು ಲಕ್ಷ್ಯ ವಹಿಸುತ್ತಿಲ್ಲ. ಮಾತುಕತೆ ಮಾಡಲ್ಲ, ನಮ್ಮ ಸಮಸ್ಯೆ ಕೇಳಲ್ಲ ಎನ್ನುವುದು ತಪ್ಪು ನಿರ್ಧಾರ. ಸರ್ಕಾರಕ್ಕೆ ಚುನಾವಣೆಯೇ ಮುಖ್ಯವಾಗಿದೆ. ನಮ್ಮ ಕಷ್ಟ ಕೇಳೋದಿಲ್ಲ ಎನ್ನುತ್ತಿದೆ, ಇದು ಸರ್ಕಾರದ ತಪ್ಪು ನಿರ್ಧಾರ. ನಾವು ಅಹಿಂಸಾತ್ಮಕವಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಸಂಬಳ ನೀಡದೆ ವಂಚನೆ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋಡಿಹಳ್ಳಿ ಚಂದ್ರಶೇಖರ್

ಇದನ್ನೂ ಓದಿ: Ugadi 2021: ಯುಗಾದಿ ಹಬ್ಬ, ಸಾರಿಗೆ ಸಿಬ್ಬಂದಿ ಮುಷ್ಕರ: ಸಾರ್ವಜನಿಕರ ನೆರವಿಗೆ ನೈರುತ್ಯ ರೈಲ್ವೆಯಿಂದ 20 ವಿಶೇಷ ರೈಲು

(Will lodge complaint against KSRTC depo managers tomorrow for not pay salary says Lawyer Balan instead of Ugadi 2021)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ