ಪೊಲೀಸ್ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ: ಸಿದ್ದರಾಮಯ್ಯ ಘೋಷಣೆ

ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಪೊಲೀಸರ ಜವಾಬ್ದಾರಿ ಬಹಳ ದೊಡ್ಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪೊಲೀಸ್ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ: ಸಿದ್ದರಾಮಯ್ಯ ಘೋಷಣೆ
ಸಿಎಂ ಸಿದ್ದರಾಮಯ್ಯ
Follow us
|

Updated on: Oct 21, 2024 | 10:44 AM

ಬೆಂಗಳೂರು, ಅಕ್ಟೋಬರ್​ 21: ಪೊಲೀಸರು (Police) ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು.

ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲ ಹುತಾತ್ಮರಾಗಿದ್ದಾರೆ ಎಂದರು.

ಇದನ್ನೂ ಓದಿ: ಚಾಲನೆ ವೇಳೆ BMTC ಬಸ್​ ಚಾಲಕನಿಗೆ ಎದೆ ನೋವು, ಟ್ರಾಫಿಕ್​ ಪೊಲೀಸ್​ ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಾಣ

ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದರು.

ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು.

ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಗೃಹ ಸಚಿವ ಜಿ.ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅತೀಕ್ ಎಲ್.ಕೆ., ಗೃಹ ಕಾರ್ಯದರ್ಶಿ ಉಮಾಶಂಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ