AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡವನ್ನು ಕೀಳಾಗಿ ಬಿಂಬಿಸಿದ ಗೂಗಲ್ ವಿರುದ್ಧ ಕಾನೂನು ಕ್ರಮ: ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ

Ugliest Language in India: ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಕನ್ನಡವನ್ನು ಕೀಳಾಗಿ ಬಿಂಬಿಸಿದ ಗೂಗಲ್ ವಿರುದ್ಧ ಕಾನೂನು ಕ್ರಮ: ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 03, 2021 | 4:19 PM

Share

ಬೆಂಗಳೂರು: ಕನ್ನಡವನ್ನು ಕೊಳಕು ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸದ್ಯ ಕನ್ನಡಿಗರ ಆಕ್ರೋಶಕ್ಕೆ ಮಣಿದು ಕರ್ನಾಟಕ ಕೀಳು ಭಾಷೆಯೆಂಬ ( Ugliest Language in India) ಲೇಖನವನ್ನು ಗೂಗಲ್ ಕೈಬಿಟ್ಟಿದೆಯಾದರೂ  ಕರ್ನಾಟಕ ರಾಜ್ಯ ಸರ್ಕಾರ ಗೂಗಲ್ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಅವರು ಮಾಹಿತಿ ನೀಡಿದ್ದಾರೆ.

ಭಾರತದ ಕೊಳಕು ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ, ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು. ಕನ್ನಡ ಭಾಷೆ ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಭಾಷೆಯ ಬಗ್ಗೆ ಕೀಳಾಗಿ ಮಾತಾಡಿದರೂ ಅದನ್ನು ಸಹಿಸಲಾಗುವುದಿಲ್ಲ, ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್ ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಅನಾವಶ್ಯಕವಾಗಿ ಕನ್ನಡಿಗರನ್ನು, ಕನ್ನಡ ಭಾಷೆಯನ್ನು ಕೀಳೆಂದು ಬಿಂಬಿಸುವ ಯತ್ನದ ವಿರುದ್ಧ ಧ್ವನಿ ಎತ್ತಲಾಗುತ್ತಿದೆ. ಗೂಗಲ್​ನಂತಹ ದೊಡ್ಡ ಸಂಸ್ಥೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಹಾಗೂ ಈ ಕೂಡಲೇ ಪ್ರಮಾದವನ್ನು ಸರಿಪಡಿಸಬೇಕು ಎಂದು ಕನ್ನಡಿಗರು ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದಾರೆ. debtconsolidationsquad.com ಎಂಬ ಜಾಲತಾಣದಲ್ಲಿ ಇದು ಮೊದಲು ಕಂಡುಬಂದಿದ್ದು, ಸದ್ಯ ಆ ಲೇಖನವನ್ನು ಹಿಂಪಡೆಯಲಾಗಿದೆ.

ಇದನ್ನೂ ಓದಿ: PU Exams 2021: ಜುಲೈ 7ರಿಂದ ಪಿಯು ಪರೀಕ್ಷೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಹೆಸರಲ್ಲಿ ಮಾಡಲಾದ ಟ್ವೀಟ್ ಸುಳ್ಳು; ನಂಬಬೇಡಿ ಎಂದು ಸಚಿವರ ಮನವಿ

ಜೂನ್ ತಿಂಗಳಲ್ಲಿ ರಾಜ್ಯದ 60 ಲಕ್ಷಕ್ಕೂ ಹೆಚ್ಚು ಜನರಿಗೆ ಕೊವಿಡ್ ಲಸಿಕೆ ವಿತರಿಸಲು ಸಿದ್ಧತೆ: ಸಿಎಂ ಯಡಿಯೂರಪ್ಪ

(Will take action against Google for used Ugliest Language in India as Kannada says Karnataka Culture Minister Arvind Limbavali)

Published On - 4:05 pm, Thu, 3 June 21

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ