AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಕೋರ್ಟ್​ನಲ್ಲಿ ಸಿಡಿ ಯುವತಿಯ ಹೇಳಿಕೆ ದಾಖಲಿಸಲು ಜಡ್ಜ್ ಆದೇಶ

ತನಿಖಾಧಿಕಾರಿ ಮತ್ತು ವಕೀಲ ಯುವತಿ ಪರ ವಕೀಲ ಕೆ.ಎನ್. ಜಗದೀಶ್ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ. ನ್ಯಾಯಾಧೀಶ ಬಾಲಗೋಪಾಲ್ ಅವರ ಆಗಮನದ ನಂತರ ವಕೀಲ ಜಗದೀಶ್ ತಮ್ಮ ವಾದ ಮಂಡಿಸಿದ್ದಾರೆ.

ಮೊದಲು ಕೋರ್ಟ್​ನಲ್ಲಿ ಸಿಡಿ ಯುವತಿಯ ಹೇಳಿಕೆ ದಾಖಲಿಸಲು ಜಡ್ಜ್ ಆದೇಶ
ವಕೀಲ ಜಗದೀಶ್
Follow us
guruganesh bhat
|

Updated on:Mar 30, 2021 | 1:02 PM

ಬೆಂಗಳೂರು: ಮೊದಲು ಸಿಆರ್‌ಪಿಸಿ 164 ಪ್ರಕಾರ ಹೇಳಿಕೆ ದಾಖಲು ಮಾಡುತ್ತೇವೆ.  ನಂತರ ಯುವತಿಯ ಹೇಳಿಕೆ ಪಡೆಯುತ್ತೇವೆ. ಹೇಳಿಕೆ ಪಡೆದ ಬಳಿಕ ತನಿಖಾಧಿಕಾರಿಗೆ ಒಪ್ಪಿಸುತ್ತೇವೆ ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರಣೆ ವೇಳೆ 24ನೇ ಎಸಿಎಂಎಂ ನ್ಯಾಯಾಧೀಶರು ಸೂಚಿಸಿದ್ದಾರೆ. ಈವೇಳೆ ಕೋರ್ಟ್​ನಲ್ಲಿ ಯುವತಿ ಹೇಳಿಕೆ ದಾಖಲಿಸಲು ಯಾವುದೇ ರೀತಿಯ ಆಕ್ಷೇಪ ವ್ಯಕ್ತವಾಗಿಲ್ಲ.

ಎಸ್ಐಟಿ ಹಾಗೂ ತನಿಖಾಧಿಕಾರಿ ಮೇಲೆ ಸಂತ್ರಸ್ಥೆಗೆ ನಂಬಿಕೆ ಇಲ್ಲ ಎಂದು ವಕೀಲ ಜಗದೀಶ್ ವಾದಿಸಿದ್ದಾರೆ.  ಇದೇ ವೇಳೆ ತನಿಖಾಧಿಕಾರಿ ಕವಿತಾ ‘ನಾವು ಇದುವರೆಗೂ ಯುವತಿಯ ಮುಖ ನೋಡಿಲ್ಲ’ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.  ಈ ವೇಳೆ ಮೊದಲು ಯುವತಿಯ ಹೇಳಿಕೆ ಪಡೆಯುತ್ತೇವೆ, ನಂತರ ತನಿಖಾಧಿಕಾರಿಗಳು ಮುಂದಿನ ಹೇಳಿಕೆ ಪಡೆಯಲಿ ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಸಂತ್ರಸ್ಥೆಯನ್ನು ಎಂದು  ಹಾಜರುಪಡಿಸುತ್ತೀರಾ ಎಂದು ಯುವತಿ ಪರ ವಕೀಲ ಜಗದೀಶ್​ಗೆ  ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಈ ವೇಳೆ ನ್ಯಾಯಾಲಯದಲ್ಲಿದ್ದ ಇತರ ಎಲ್ಲರನ್ನೂ ಹೊರಗೆ ಕಳುಹಿಸಿ, ಕೇವಲ ಯುವತಿ ಪರ ವಕೀಲರು, ತನಿಖಾಧಿಕಾರಿಗಳನ್ನು ಮಾತ್ರ ಕೋರ್ಟ್​ ಹಾಲ್​ನಲ್ಲಿ ಇರಿಸಿಕೊಂಡಿದ್ದಾರೆ. ಯುವತಿ ಹಾಜರಾಗುವ ಸಮಯದ ಬಗ್ಗೆ ಗೌಪ್ಯತೆ ಕಾಪಾಡಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಈ ಕ್ರಮ ಕೈಗೊಂಡಿದ್ದಾರೆ. ನಂತರ ಲಿಖಿತ ರೂಪದಲ್ಲಿ ನ್ಯಾಯಾಧೀಶರಿಗೆ ದಿನಾಂಕ ಸಮಯವನ್ನು ತಿಳಿಸಿ ವಕೀಲ ಜಗದೀಶ್ ಕೋರ್ಟ್​ನಿಂದ ಹೊರಬಂದಿದ್ದಾರೆ.

ಪ್ರಕರಣ 24ನೇ ಎಸಿಎಂಎಂ ಕೋರ್ಟ್‌ಗೆ ರವಾನೆಯಾಗಿದೆ. ತನಿಖಾಧಿಕಾರಿ ಮತ್ತು ವಕೀಲ ಯುವತಿ ಪರ ವಕೀಲ ಕೆ.ಎನ್. ಜಗದೀಶ್ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ. ನ್ಯಾಯಾಧೀಶ ಬಾಲಗೋಪಾಲ್ ಅವರ ಆಗಮನದ ನಂತರ ವಕೀಲ ಜಗದೀಶ್ ತಮ್ಮ ವಾದ ಮಂಡಿಸಿದ್ದಾರೆ.

ಸಿಡಿ ಯುವತಿ ಪರ ವಕೀಲ ಜಗದೀಶ್‌, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಯುವತಿ ಹೇಳಿಕೆ ದಾಖಲಿಸಲು ಅನುಮತಿ ನೀಡಲು ಮನವಿ ಮಾಡಿದ್ದಾರೆ. ನಮಗೆ ಬೆದರಿಕೆ ಕರೆಗಳು ಬರುತ್ತಿವೆ. ಎಸ್‌ಐಟಿ ಮೇಲೆ ಯಾವುದೇ ನಂಬಿಕೆ ಇಲ್ಲ ಎಂದು ಯುವತಿ ಪರ ವಕೀಲರಾದ ಕೆ.ಎನ್.ಜಗದೀಶ್ ವಾದಿಸಿದ್ದಾರೆ.

ಇದನ್ನೂ ಓದಿ: ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ

Published On - 12:43 pm, Tue, 30 March 21

ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್