AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI ಬ್ಯಾನ್ ಕುರಿತು ಗೃಹ ಇಲಾಖೆ ಜೊತೆ ಚರ್ಚೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ

ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪಿ.ಎಫ್.ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆ ನಡೆಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

PFI ಬ್ಯಾನ್ ಕುರಿತು ಗೃಹ ಇಲಾಖೆ ಜೊತೆ ಚರ್ಚೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
PFI ಬ್ಯಾನ್ ಕುರಿತು ಗೃಹ ಇಲಾಖೆ ಜೊತೆ ಚರ್ಚೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on: Jul 28, 2022 | 3:45 PM

Share

ಪಿಎಫ್ ಐ ಸಂಘಟನೆ (People’s Front Of India -PFI)ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರ್ ( Praveen Nettar) ಅವರ ಹತ್ಯೆ ಹಿಂದೆ ಪಿ.ಎಫ್.ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಬೊಮ್ಮಾಯಿ ಶಂಕೆ ವ್ಯಕ್ತಪಡಿಸಿದ್ದಾರೆ.

ಪಿಎಫ್ ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಸಿಎಂ ಬಸವರಾಜ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.

ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆಯವರು ಇಂಥ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದರು. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮಾಹಿತಿಗಳು ಮತ್ತು ಮಾಧ್ಯಮ ವರದಿಗಳು ಇವೆ. ಇಂಥ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದರು.