AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ದಿನಗಳಲ್ಲಿ ಸಂಸದರ ವ್ಯಾಪ್ತಿ ಮೀರಿ ಕೆಲಸ ಮಾಡಲು ಪ್ರಯತ್ನಿಸುತ್ತೇನೆ- ಸಂಸದೆ ಸುಮಲತಾ

ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸಬೇಕೆಂದು ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕಾರ್ಖಾನೆ ಆರಂಭಿಸುವುದಾಗಿ ರೈತರಿಗೆ ಮಾತು ಕೊಟ್ಟಿದ್ದೇನೆ. ಈ ಮಾತನ್ನು ಉಳಿಸಿಕೊಳ್ಳಬೇಕಿದೆ ಎಂದರು.

ಮುಂದಿನ ದಿನಗಳಲ್ಲಿ ಸಂಸದರ ವ್ಯಾಪ್ತಿ ಮೀರಿ ಕೆಲಸ ಮಾಡಲು ಪ್ರಯತ್ನಿಸುತ್ತೇನೆ- ಸಂಸದೆ ಸುಮಲತಾ
ಸುಮಲತಾ ಅಂಬರೀಷ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 20, 2021 | 9:30 PM

Share

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸುವುದಾಗಿ ರೈತರಿಗೆ ಮಾತು ಕೊಟ್ಟಿದ್ದೇನೆ. ಹೀಗಾಗಿ, ಸರ್ಕಾರ ಅಥವಾ ಖಾಸಗಿಯವರು ಕಾರ್ಖಾನೆ ಆರಂಭ ಮಾಡಲಿ ಎಂದು ಸುಮಲತಾ ಅಂಬರೀಶ್​ ಹೇಳಿದ್ದಾರೆ.

ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದಲ್ಲಿ ಮಾತನಾಡಿದ ಸುಮಲತಾ, ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸಬೇಕೆಂದು ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕಾರ್ಖಾನೆ ಆರಂಭಿಸುವುದಾಗಿ ರೈತರಿಗೆ ಮಾತು ಕೊಟ್ಟಿದ್ದೇನೆ. ಈ ಮಾತನ್ನು ಉಳಿಸಿಕೊಳ್ಳಬೇಕಿದೆ ಎಂದರು.

ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭವಾಗುವುದಕ್ಕೆ ವಿಘ್ನಗಳು ಎದುರಾಗುತ್ತಲೇ ಇವೆ ಎಂದ ಅವರು, ಸಕ್ಕರೆ ಕಾರ್ಖಾನೆ ಆರಂಭಿಸುವುದಕ್ಕೂ ಕೆಲವರು ಅಡಚಣೆ ಮಾಡಿ, ಕಿರುಕುಳ ನೀಡುತ್ತಿದ್ದಾರೆ. ಮಂಡ್ಯದಲ್ಲಿ ಶೂಟಿಂಗ್ ಮಾಡಬಾರದು, ಕಂಪನಿ ಬರಬಾರದು ಎನ್ನುತ್ತಾರೆ. ಹೀಗೆ ಆದರೆ ಮಂಡ್ಯ ಜಿಲ್ಲೆ ಉದ್ಧಾರವಾಗುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಚಿತ್ರೀಕರಣ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ, ನನ್ನ ಪುತ್ರನ ಸಿನಿಮಾ ಶೂಟಿಂಗ್‌ಗೂ ನನಗೆ ಸಂಬಂಧವಿಲ್ಲ. ಟೀಕಾಕಾರರ ಹೇಳಿಕೆಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಎಲ್ಲಾದರೂ ಶೂಟಿಂಗ್ ಮಾಡಿದ್ರೆ ಅದು ನಮ್ಮದಾಗುತ್ತಾ. ಹಣ ಪಾವತಿ ಮಾಡಿ ಶೂಟಿಂಗ್ ಮಾಡುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ವರ್ಷದಲ್ಲಿ ನಾಲ್ಕು ತ್ರೈ ಮಾಸಿಕ ಸಭೆ ವರ್ಷದಲ್ಲಿ ನಾಲ್ಕು ತ್ರೈ ಮಾಸಿಕ ಸಭೆ ನಡೆಸಿದ ರಾಜ್ಯದ ಮೊದಲ ಸಂಸದೆ ಎಂಬ ಕೀರ್ತಿಗೆ ಸುಮಲತಾ ಪಾತ್ರರಾಗಿದ್ದಾರೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ನಾನು ಹೆಚ್ಚು ಸಭೆ ನಡೆಸಿದ ಕೀರ್ತಿಗೆ ಪಾತ್ರವಾಗಿರೊ ವಿಚಾರ ನನಗೆ ಸಂತಸ ತಂದಿದೆ. ಆದರೆ, ಈ ವಿಚಾರ ನನಗೆ ಗೊತ್ತಿರಲಿಲ್ಲ. ಮೊನ್ನೆ ನಡೆದ ಸಭೆಯಲ್ಲಿ ಜಿ.ಪಂ. ಸಿಇಒ ಅವರು ನನಗೆ ಈ ವಿಚಾರ ತಿಳಿಸಿದ್ದರು. ಈ ಸಭೆಯಿಂದ ಸರ್ಕಾರದ ಕೆಲವು ಇಲಾಖೆಗಳ ಸಮಸ್ಯೆಗಳೇನು, ಅಲ್ಲಿನ ಲೋಪದೋಷಗಳೇನು ಎನ್ನುವುದು ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಸಂಸದರ ವ್ಯಾಪ್ತಿ ಮೀರಿ ಕೆಲಸ ಮಾಡಲು ಪ್ರಯತ್ನಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ.

Photos ಅಭಿ​ ‘ಬ್ಯಾಡ್ ಮ್ಯಾನರ್ಸ್’ ಬಗ್ಗೆ ಕೇಳಿ ಬೆರಗಾದ ದಚ್ಚು ಮತ್ತು ಸುಮಲತಾ: ಶೂಟಿಂಗ್​ ಸ್ಪಾಟ್​ಗೆ ಭೇಟಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?