AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ದಿನಗಳಲ್ಲಿ ಸಂಸದರ ವ್ಯಾಪ್ತಿ ಮೀರಿ ಕೆಲಸ ಮಾಡಲು ಪ್ರಯತ್ನಿಸುತ್ತೇನೆ- ಸಂಸದೆ ಸುಮಲತಾ

ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸಬೇಕೆಂದು ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕಾರ್ಖಾನೆ ಆರಂಭಿಸುವುದಾಗಿ ರೈತರಿಗೆ ಮಾತು ಕೊಟ್ಟಿದ್ದೇನೆ. ಈ ಮಾತನ್ನು ಉಳಿಸಿಕೊಳ್ಳಬೇಕಿದೆ ಎಂದರು.

ಮುಂದಿನ ದಿನಗಳಲ್ಲಿ ಸಂಸದರ ವ್ಯಾಪ್ತಿ ಮೀರಿ ಕೆಲಸ ಮಾಡಲು ಪ್ರಯತ್ನಿಸುತ್ತೇನೆ- ಸಂಸದೆ ಸುಮಲತಾ
ಸುಮಲತಾ ಅಂಬರೀಷ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 20, 2021 | 9:30 PM

Share

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸುವುದಾಗಿ ರೈತರಿಗೆ ಮಾತು ಕೊಟ್ಟಿದ್ದೇನೆ. ಹೀಗಾಗಿ, ಸರ್ಕಾರ ಅಥವಾ ಖಾಸಗಿಯವರು ಕಾರ್ಖಾನೆ ಆರಂಭ ಮಾಡಲಿ ಎಂದು ಸುಮಲತಾ ಅಂಬರೀಶ್​ ಹೇಳಿದ್ದಾರೆ.

ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದಲ್ಲಿ ಮಾತನಾಡಿದ ಸುಮಲತಾ, ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸಬೇಕೆಂದು ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕಾರ್ಖಾನೆ ಆರಂಭಿಸುವುದಾಗಿ ರೈತರಿಗೆ ಮಾತು ಕೊಟ್ಟಿದ್ದೇನೆ. ಈ ಮಾತನ್ನು ಉಳಿಸಿಕೊಳ್ಳಬೇಕಿದೆ ಎಂದರು.

ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭವಾಗುವುದಕ್ಕೆ ವಿಘ್ನಗಳು ಎದುರಾಗುತ್ತಲೇ ಇವೆ ಎಂದ ಅವರು, ಸಕ್ಕರೆ ಕಾರ್ಖಾನೆ ಆರಂಭಿಸುವುದಕ್ಕೂ ಕೆಲವರು ಅಡಚಣೆ ಮಾಡಿ, ಕಿರುಕುಳ ನೀಡುತ್ತಿದ್ದಾರೆ. ಮಂಡ್ಯದಲ್ಲಿ ಶೂಟಿಂಗ್ ಮಾಡಬಾರದು, ಕಂಪನಿ ಬರಬಾರದು ಎನ್ನುತ್ತಾರೆ. ಹೀಗೆ ಆದರೆ ಮಂಡ್ಯ ಜಿಲ್ಲೆ ಉದ್ಧಾರವಾಗುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಚಿತ್ರೀಕರಣ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ, ನನ್ನ ಪುತ್ರನ ಸಿನಿಮಾ ಶೂಟಿಂಗ್‌ಗೂ ನನಗೆ ಸಂಬಂಧವಿಲ್ಲ. ಟೀಕಾಕಾರರ ಹೇಳಿಕೆಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಎಲ್ಲಾದರೂ ಶೂಟಿಂಗ್ ಮಾಡಿದ್ರೆ ಅದು ನಮ್ಮದಾಗುತ್ತಾ. ಹಣ ಪಾವತಿ ಮಾಡಿ ಶೂಟಿಂಗ್ ಮಾಡುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ವರ್ಷದಲ್ಲಿ ನಾಲ್ಕು ತ್ರೈ ಮಾಸಿಕ ಸಭೆ ವರ್ಷದಲ್ಲಿ ನಾಲ್ಕು ತ್ರೈ ಮಾಸಿಕ ಸಭೆ ನಡೆಸಿದ ರಾಜ್ಯದ ಮೊದಲ ಸಂಸದೆ ಎಂಬ ಕೀರ್ತಿಗೆ ಸುಮಲತಾ ಪಾತ್ರರಾಗಿದ್ದಾರೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ನಾನು ಹೆಚ್ಚು ಸಭೆ ನಡೆಸಿದ ಕೀರ್ತಿಗೆ ಪಾತ್ರವಾಗಿರೊ ವಿಚಾರ ನನಗೆ ಸಂತಸ ತಂದಿದೆ. ಆದರೆ, ಈ ವಿಚಾರ ನನಗೆ ಗೊತ್ತಿರಲಿಲ್ಲ. ಮೊನ್ನೆ ನಡೆದ ಸಭೆಯಲ್ಲಿ ಜಿ.ಪಂ. ಸಿಇಒ ಅವರು ನನಗೆ ಈ ವಿಚಾರ ತಿಳಿಸಿದ್ದರು. ಈ ಸಭೆಯಿಂದ ಸರ್ಕಾರದ ಕೆಲವು ಇಲಾಖೆಗಳ ಸಮಸ್ಯೆಗಳೇನು, ಅಲ್ಲಿನ ಲೋಪದೋಷಗಳೇನು ಎನ್ನುವುದು ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಸಂಸದರ ವ್ಯಾಪ್ತಿ ಮೀರಿ ಕೆಲಸ ಮಾಡಲು ಪ್ರಯತ್ನಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ.

Photos ಅಭಿ​ ‘ಬ್ಯಾಡ್ ಮ್ಯಾನರ್ಸ್’ ಬಗ್ಗೆ ಕೇಳಿ ಬೆರಗಾದ ದಚ್ಚು ಮತ್ತು ಸುಮಲತಾ: ಶೂಟಿಂಗ್​ ಸ್ಪಾಟ್​ಗೆ ಭೇಟಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!