AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ: ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್​​ ಲೀ ತಲೆದಂಡ

ವಿಸ್ಟ್ರಾನ್ ಎಲೆಕ್ಟ್ರಾನಿಕ್ಸ್​ ಕಂಪನಿಯಲ್ಲಿ ದಾಂದಲೆ ಪ್ರಕರಣಕ್ಕೆ ಸಂಬಂಧಿಸಿ ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್​​ ಲೀ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ: ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್​​ ಲೀ ತಲೆದಂಡ
ವಿಸ್ಟ್ರಾನ್​ ಕಂಪನಿ
KUSHAL V
|

Updated on:Dec 19, 2020 | 3:21 PM

Share

ಕೋಲಾರ: ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್​ ಮೂಲದ ವಿಸ್ಟ್ರಾನ್ ಎಲೆಕ್ಟ್ರಾನಿಕ್ಸ್​ ಕಂಪನಿಯಲ್ಲಿ ಇತ್ತೀಚೆಗೆ ನಡೆದ ಭಾರೀ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್​​ ಲೀ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಸರಿಯಾಗಿ ಸಂಬಳ ನೀಡಿಲ್ಲವೆಂದು ಜಿಲ್ಲೆಯ ನರಸಾಪುರದಲ್ಲಿರುವ ತೈವಾನ್​ ಮೂಲದ iPhone ತಯಾರಕ ಕಂಪನಿಯಲ್ಲಿ ಕಾರ್ಮಿಕರು ದಾಂಧಲೆ ನಡೆಸಿದ್ದರು. ಈ ವೇಳೆ, ಕಂಪನಿಯ ಆಸ್ತಿಪಾಸ್ತಿಗೆ ಬಹಳಷ್ಟು ಪ್ರಮಾಣದಲ್ಲಿ ಹಾನಿ ಮಾಡಿದ್ದರು.

ಇದೀಗ, ಸಂಸ್ಥೆಯ ಆಡಳಿತ ಮಂಡಳಿ ತನ್ನ ತಪ್ಪೊಪ್ಪಿಕೊಂಡಿದ್ದು ಇಂದು ಬಿಡುಗಡೆ ಮಾಡಿರುವ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ಈ ಕುರಿತು ನೌಕರರ ಬಳಿ ಕ್ಷಮೆ ಸಹ ಯಾಚಿಸಿದೆ ಎಂದು ತಿಳಿದುಬಂದಿದೆ. ಜೊತೆಗೆ, ನರಸಾಪುರದಲ್ಲಿರುವ ತನ್ನ ಕಾರ್ಖಾನೆಯನ್ನು ವಿಸ್ತರಿಸುತ್ತಿರುವ ವೇಳೆ ಕಾರ್ಮಿಕರ ವೇತನ ಮತ್ತು ಇತರೆ ವ್ಯವಸ್ಥೆಗಳ ಕಡೆ ಸೂಕ್ತ ಗಮನ ಹರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಘಟನೆಗೆ ಕಾರಣವಾಯಿತು. ಹಾಗಾಗಿ, ಮುಂಬರುವ ದಿನಗಳಲ್ಲಿ ಇಂಥದ್ದು ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ಇದಲ್ಲದೆ, ತಾವು ಕೈಗೊಂಡಿರುವ ಶಿಸ್ತುಕ್ರಮದ ಅನುಗುಣವಾಗಿ ವಿಸ್ಟ್ರಾನ್​ನ ಭಾರತ ವಿಭಾಗದ ಉಪಾಧ್ಯಕ್ಷರಾದ ವಿನ್ಸೆಂಟ್​​ ಲೀ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಜೊತೆಗೆ, ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಲು ಒಂದು 24X7 ಬಹುಭಾಷಾ ಹೆಲ್ಪಲೈನ್​ನ ಸಹ ಸ್ಥಾಪಿಸಿದೆ ಎಂದು ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ರಾಜ್ಯ ಸರ್ಕಾರ ಕೇಂದ್ರ ಕಾರ್ಮಿಕ ಇಲಾಖೆಗೆ ಸಲ್ಲಿಸಿದ ವರದಿಯ ಬೆನ್ನಲ್ಲೇ ವಿಸ್ಟ್ರಾನ್​ ಕಂಪನಿಯು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಸರ್ಕಾರ ಸಲ್ಲಿಸಿದ ವರದಿಯಲ್ಲಿ ಕಾರ್ಖಾನೆಯಲ್ಲಿದ್ದ ಅಟೆಂಡೆನ್ಸ್​ ಮೆಷಿನ್​ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಹಾಗಾಗಿ, ಇದರಿಂದ ಕಾರ್ಮಿಕರ ಸಂಬಳವನ್ನು ಕಡಿತ ಮಾಡಲಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ. ಜೊತೆಗೆ, ಕಾರ್ಮಿಕರ ಕೆಲಸದ ವೇಳೆಯನ್ನು 8 ಗಂಟೆಗಳಿಂದ 12 ಗಂಟೆಗೆ ಹೆಚ್ಚಿಸಲಾಗಿತ್ತು. ಆದ್ದರಿಂದ, ಕಾರ್ಮಿಕರು ಮನನೊಂದು ದಾಂಧಲೆ ನಡೆಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವೇತನ ನೀಡದ್ದಕ್ಕೆ ಕಚೇರಿ ಧ್ವಂಸ: ನರಸಾಪುರದ iPhone ತಯಾರಿಕಾ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ

ಸರ್ಕಾರ ವಿಸ್ಟ್ರಾನ್ ಕಂಪನಿಯ ಕಾರ್ಮಿಕರ ಪರ ನಿಲ್ಲಬೇಕು: ಕಾರ್ಮಿಕ ಸಂಘಟನೆ ಮುಖಂಡ ಜಿ.ವಿ. ಶ್ರೀರಾಮರೆಡ್ಡಿ

ದಾಂಧಲೆಗೆ ತುತ್ತಾಗಿದ್ದ ವಿಸ್ಟ್ರಾನ್ ಕಂಪನಿ, ಶೀಘ್ರದಲ್ಲೇ ಕೆಲಸ ಪುನರಾರಂಭ

iPhone ವಿಸ್ಟ್ರಾನ್‌ ದಾಂಧಲೆ ಪ್ರಕರಣ: ನೆಗಡಿಯೆಂದು ಮೂಗು ಕೊಯ್ದುಕೊಂಡರೇ ಕಾರ್ಮಿಕರು?

Published On - 2:59 pm, Sat, 19 December 20

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ