AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರವಾಗಿರುವ ಆರೋಪ ಜಿಲ್ಲೆಯ ಬೇಲೂರು ತಾಲೂಕಿನ ಸಿ.ಹೊಸಳ್ಳಿಯಲ್ಲಿ ಕೇಳಿಬಂದಿದೆ. ಈ ನಡುವೆ, ಪ್ರಕರಣದಿಂದ ಮನನೊಂದು ವಿಷ ಸೇವಿಸಿದ್ದ 30 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು ಅಸುನೀಗಿದ್ದಾರೆ. Rape

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು
ಮೃತ ಮಹಿಳೆಯ ಅಂತ್ಯಸಂಸ್ಕಾರದ ವೇಳೆ ಕುಟುಂಬಸ್ಥರ ವಾಗ್ವಾದ
KUSHAL V
| Updated By: ಸಾಧು ಶ್ರೀನಾಥ್​|

Updated on:Feb 09, 2021 | 11:02 AM

Share

ಹಾಸನ: ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರವಾಗಿರುವ ಆರೋಪ ಜಿಲ್ಲೆಯ ಬೇಲೂರು ತಾಲೂಕಿನ ಸಿ.ಹೊಸಳ್ಳಿಯಲ್ಲಿ ಕೇಳಿಬಂದಿದೆ. ಈ ನಡುವೆ, ಪ್ರಕರಣದಿಂದ ಮನನೊಂದು ವಿಷ ಸೇವಿಸಿದ್ದ 30 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು ಅಸುನೀಗಿದ್ದಾರೆ. Rape

ಏನಿದು ಪ್ರಕರಣ? 6 ವರ್ಷಗಳ ಹಿಂದೆ ಪುಟ್ಟರಾಜು ಎಂಬಾತನ ಜೊತೆ ಮಹಿಳೆ ವಿವಾಹವಾಗಿದ್ದರು. ಕಳೆದ ಡಿಸೆಂಬರ್ 21 ರಂದು ಮಹಿಳೆಯ ಮಾವ ವೆಂಕಟೇಶ್ ಜೋಗಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದನಂತೆ. ಇದರಿಂದ, ಮನನೊಂದ ಮಹಿಳೆ ಜ.15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜನವರಿ 17 ರಂದು ತನ್ನ ಮೇಲೆ ನಡೆದಿದ್ದ ದೌರ್ಜನ್ಯದ ಬಗ್ಗೆ ಮಹಿಳೆ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದರಂತೆ. ಹಾಗಾಗಿ, ಪೊಲೀಸರು ಆರೋಪಿ ವೆಂಕಟೇಶ್ ಜೋಗಿಯನ್ನು ಬಂಧಿಸಿದ್ದರು.

ಈ ನಡುವೆ, ಕಳೆದ 20 ದಿನಗಳಿಂದ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇಂದು ಕೊನೆಯುಸಿರೆಳೆದಿದ್ದಾರೆ. ಹಾಗಾಗಿ, ಪತಿಯ ಮನೆ ಮುಂದೆಯೇ ಅಂತ್ಯಸಂಸ್ಕಾರ ನೆರವೇರಿಸಬೇಕೆಂದು ಮೃತ ಮಹಿಳೆಯ ಪೋಷಕರ ಪಟ್ಟುಹಿಡಿದರು. ಹೀಗಾಗಿ, ಎರಡು ಕುಟುಂಬಗಳ ನಡುವೆ ವಾಗ್ವಾದ ನಡೆಯಿತು.

Rape ಪುತ್ತೂರು: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ

Published On - 10:08 pm, Mon, 8 February 21

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ