AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಸೋಂಕಿತರ ಪಕ್ಕದಲ್ಲೇ ಶವ ಇರಿಸುತ್ತಾರೆ.. ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ

ರಾಜ್ಯ ಸರ್ಕಾರ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂದು ಈ ಹಿಂದೆ ಕಾಂಗ್ರೆಸ್ ಆರೋಪಿಸಿತ್ತು. ಇದಕ್ಕೆ ಸಚಿವ ಸುಧಾಕರ್ ಸಹ ಪ್ರತಿಕ್ರಿಯೆ ನೀಡಿ ಆರೋಪವನ್ನು ತಳ್ಳಿ ಹಾಕಿದ್ದರು. ಆದ್ರೆ ಈಗ ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಈ ಆರೋಪ ಕೇಳಿ ಬಂದಿದೆ.

ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಸೋಂಕಿತರ ಪಕ್ಕದಲ್ಲೇ ಶವ ಇರಿಸುತ್ತಾರೆ.. ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ
ಕೋವಿಡ್​​ ಆಸ್ಪತ್ರೆ
TV9 Web
| Edited By: |

Updated on: Jun 17, 2021 | 9:09 AM

Share

ಚಿಕ್ಕಮಗಳೂರು: ಮಹಾಮರಿ ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಎಂಬ ಕೂಗು ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲಾಡಳಿತ ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಆಕ್ಸಿಜನ್ ಇಲ್ಲದೇ ಜಿಲ್ಲಾಸ್ಪತ್ರೆಯಲ್ಲಿ ಜನರು ಪ್ರಾಣ ಬಿಟ್ತಿದ್ದಾರಾ? ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಕಾರಣ ಮಹಿಳೆ ಮಾಡಿರುವ ಸಂಭಾಷಣೆಯ ವಿಡಿಯೋ.

ರಾಜ್ಯ ಸರ್ಕಾರ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂದು ಈ ಹಿಂದೆ ಕಾಂಗ್ರೆಸ್ ಆರೋಪಿಸಿತ್ತು. ಇದಕ್ಕೆ ಸಚಿವ ಸುಧಾಕರ್ ಸಹ ಪ್ರತಿಕ್ರಿಯೆ ನೀಡಿ ಆರೋಪವನ್ನು ತಳ್ಳಿ ಹಾಕಿದ್ದರು. ಆದ್ರೆ ಈಗ ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಆಕ್ಸಿಜನ್ ಇಲ್ಲದೇ ರಕ್ತಕಾರಿ ಜನರು ಪ್ರಾಣ ಬಿಡುತ್ತಿದ್ದಾರೆ ಎಂಬ ಮಹಿಳೆಯೊಬ್ಬರು ನಡೆಸಿರುವ ಸಂಭಾಷಣೆಯ ವಿಡಿಯೋ ಫುಲ್ ವೈರಲ್ ಆಗಿದೆ.

ಎಂಟು ಜನ ಸತ್ತರು ಇಬ್ಬರು ಎಂದು ವರದಿ ನೀಡಿದ್ದಾರೆ. ನನ್ನ ಕಣ್ಣೆದುರೇ ಮಹಿಳೆಯೊಬ್ಬರು ರಕ್ತಕಾರಿ ಸತ್ತಿದ್ದಾರೆ. ರೋಗಿಗಳಿಗೆ ಸರಿಯಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿಲ್ಲ. ವೈದ್ಯರುಗಳು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಹಣವಿದ್ದವರಿಗೆ ಒಂದು ರೀತಿ, ಇಲ್ಲದವರಿಗೆ ಮತ್ತೊಂದು ರೀತಿ ಟ್ರೀಟ್ಮೆಂಟ್ ಕೊಡ್ತಾರೆ. ಪಕ್ಕದ ಬೆಡ್ನಲ್ಲಿ ಐದಾರು ಗಂಟೆಗಳ ಕಾಲ ಮೃತದೇಹ ಹಾಗೆ ಇರುತ್ತೆ. ಆ ಮೃತದೇಹವನ್ನೇ ನೋಡಿಕೊಂಡು ಅಕ್ಕಪಕ್ಕದವರು ಇರಬೇಕು. ಶವ ಮುಂದಿಟ್ಟುಕೊಂಡು ಕೂರುವುದಾದರೂ ಹೇಗೆ ಈ ಭಯಕ್ಕೆಯೇ ಕೆಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ತಮ್ಮ ಬೇಜವಾಬ್ದಾರಿತನ ಬಯಲಾಗುತ್ತೆ ಅಂತ ಸಾವಿನ ಸಂಖ್ಯೆಯನ್ನೇ ಮುಚ್ಚಿಡುತ್ತಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡವನ್ನು ಮಹಿಳೆಯೊಬ್ಬರು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: TRAI: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋಗೆ ಮತ್ತೆ ಮೊದಲ ಸ್ಥಾನ, ಕೊನೆಯಲ್ಲಿ ಏರ್‌ಟೆಲ್! ಏನಿದರ ಲೆಕ್ಕಾಚಾರ?

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ