AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಸೋಂಕಿತರ ಪಕ್ಕದಲ್ಲೇ ಶವ ಇರಿಸುತ್ತಾರೆ.. ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ

ರಾಜ್ಯ ಸರ್ಕಾರ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂದು ಈ ಹಿಂದೆ ಕಾಂಗ್ರೆಸ್ ಆರೋಪಿಸಿತ್ತು. ಇದಕ್ಕೆ ಸಚಿವ ಸುಧಾಕರ್ ಸಹ ಪ್ರತಿಕ್ರಿಯೆ ನೀಡಿ ಆರೋಪವನ್ನು ತಳ್ಳಿ ಹಾಕಿದ್ದರು. ಆದ್ರೆ ಈಗ ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಈ ಆರೋಪ ಕೇಳಿ ಬಂದಿದೆ.

ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಸೋಂಕಿತರ ಪಕ್ಕದಲ್ಲೇ ಶವ ಇರಿಸುತ್ತಾರೆ.. ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ
ಕೋವಿಡ್​​ ಆಸ್ಪತ್ರೆ
TV9 Web
| Edited By: |

Updated on: Jun 17, 2021 | 9:09 AM

Share

ಚಿಕ್ಕಮಗಳೂರು: ಮಹಾಮರಿ ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಎಂಬ ಕೂಗು ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲಾಡಳಿತ ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಆಕ್ಸಿಜನ್ ಇಲ್ಲದೇ ಜಿಲ್ಲಾಸ್ಪತ್ರೆಯಲ್ಲಿ ಜನರು ಪ್ರಾಣ ಬಿಟ್ತಿದ್ದಾರಾ? ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಕಾರಣ ಮಹಿಳೆ ಮಾಡಿರುವ ಸಂಭಾಷಣೆಯ ವಿಡಿಯೋ.

ರಾಜ್ಯ ಸರ್ಕಾರ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂದು ಈ ಹಿಂದೆ ಕಾಂಗ್ರೆಸ್ ಆರೋಪಿಸಿತ್ತು. ಇದಕ್ಕೆ ಸಚಿವ ಸುಧಾಕರ್ ಸಹ ಪ್ರತಿಕ್ರಿಯೆ ನೀಡಿ ಆರೋಪವನ್ನು ತಳ್ಳಿ ಹಾಕಿದ್ದರು. ಆದ್ರೆ ಈಗ ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಆಕ್ಸಿಜನ್ ಇಲ್ಲದೇ ರಕ್ತಕಾರಿ ಜನರು ಪ್ರಾಣ ಬಿಡುತ್ತಿದ್ದಾರೆ ಎಂಬ ಮಹಿಳೆಯೊಬ್ಬರು ನಡೆಸಿರುವ ಸಂಭಾಷಣೆಯ ವಿಡಿಯೋ ಫುಲ್ ವೈರಲ್ ಆಗಿದೆ.

ಎಂಟು ಜನ ಸತ್ತರು ಇಬ್ಬರು ಎಂದು ವರದಿ ನೀಡಿದ್ದಾರೆ. ನನ್ನ ಕಣ್ಣೆದುರೇ ಮಹಿಳೆಯೊಬ್ಬರು ರಕ್ತಕಾರಿ ಸತ್ತಿದ್ದಾರೆ. ರೋಗಿಗಳಿಗೆ ಸರಿಯಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿಲ್ಲ. ವೈದ್ಯರುಗಳು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಹಣವಿದ್ದವರಿಗೆ ಒಂದು ರೀತಿ, ಇಲ್ಲದವರಿಗೆ ಮತ್ತೊಂದು ರೀತಿ ಟ್ರೀಟ್ಮೆಂಟ್ ಕೊಡ್ತಾರೆ. ಪಕ್ಕದ ಬೆಡ್ನಲ್ಲಿ ಐದಾರು ಗಂಟೆಗಳ ಕಾಲ ಮೃತದೇಹ ಹಾಗೆ ಇರುತ್ತೆ. ಆ ಮೃತದೇಹವನ್ನೇ ನೋಡಿಕೊಂಡು ಅಕ್ಕಪಕ್ಕದವರು ಇರಬೇಕು. ಶವ ಮುಂದಿಟ್ಟುಕೊಂಡು ಕೂರುವುದಾದರೂ ಹೇಗೆ ಈ ಭಯಕ್ಕೆಯೇ ಕೆಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ತಮ್ಮ ಬೇಜವಾಬ್ದಾರಿತನ ಬಯಲಾಗುತ್ತೆ ಅಂತ ಸಾವಿನ ಸಂಖ್ಯೆಯನ್ನೇ ಮುಚ್ಚಿಡುತ್ತಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡವನ್ನು ಮಹಿಳೆಯೊಬ್ಬರು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: TRAI: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋಗೆ ಮತ್ತೆ ಮೊದಲ ಸ್ಥಾನ, ಕೊನೆಯಲ್ಲಿ ಏರ್‌ಟೆಲ್! ಏನಿದರ ಲೆಕ್ಕಾಚಾರ?

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​