AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಸೋಂಕಿತರ ಪಕ್ಕದಲ್ಲೇ ಶವ ಇರಿಸುತ್ತಾರೆ.. ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ

ರಾಜ್ಯ ಸರ್ಕಾರ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂದು ಈ ಹಿಂದೆ ಕಾಂಗ್ರೆಸ್ ಆರೋಪಿಸಿತ್ತು. ಇದಕ್ಕೆ ಸಚಿವ ಸುಧಾಕರ್ ಸಹ ಪ್ರತಿಕ್ರಿಯೆ ನೀಡಿ ಆರೋಪವನ್ನು ತಳ್ಳಿ ಹಾಕಿದ್ದರು. ಆದ್ರೆ ಈಗ ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಈ ಆರೋಪ ಕೇಳಿ ಬಂದಿದೆ.

ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಸೋಂಕಿತರ ಪಕ್ಕದಲ್ಲೇ ಶವ ಇರಿಸುತ್ತಾರೆ.. ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ
ಕೋವಿಡ್​​ ಆಸ್ಪತ್ರೆ
Follow us
TV9 Web
| Updated By: ಆಯೇಷಾ ಬಾನು

Updated on: Jun 17, 2021 | 9:09 AM

ಚಿಕ್ಕಮಗಳೂರು: ಮಹಾಮರಿ ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಎಂಬ ಕೂಗು ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲಾಡಳಿತ ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಆಕ್ಸಿಜನ್ ಇಲ್ಲದೇ ಜಿಲ್ಲಾಸ್ಪತ್ರೆಯಲ್ಲಿ ಜನರು ಪ್ರಾಣ ಬಿಟ್ತಿದ್ದಾರಾ? ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಕಾರಣ ಮಹಿಳೆ ಮಾಡಿರುವ ಸಂಭಾಷಣೆಯ ವಿಡಿಯೋ.

ರಾಜ್ಯ ಸರ್ಕಾರ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂದು ಈ ಹಿಂದೆ ಕಾಂಗ್ರೆಸ್ ಆರೋಪಿಸಿತ್ತು. ಇದಕ್ಕೆ ಸಚಿವ ಸುಧಾಕರ್ ಸಹ ಪ್ರತಿಕ್ರಿಯೆ ನೀಡಿ ಆರೋಪವನ್ನು ತಳ್ಳಿ ಹಾಕಿದ್ದರು. ಆದ್ರೆ ಈಗ ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಆಕ್ಸಿಜನ್ ಇಲ್ಲದೇ ರಕ್ತಕಾರಿ ಜನರು ಪ್ರಾಣ ಬಿಡುತ್ತಿದ್ದಾರೆ ಎಂಬ ಮಹಿಳೆಯೊಬ್ಬರು ನಡೆಸಿರುವ ಸಂಭಾಷಣೆಯ ವಿಡಿಯೋ ಫುಲ್ ವೈರಲ್ ಆಗಿದೆ.

ಎಂಟು ಜನ ಸತ್ತರು ಇಬ್ಬರು ಎಂದು ವರದಿ ನೀಡಿದ್ದಾರೆ. ನನ್ನ ಕಣ್ಣೆದುರೇ ಮಹಿಳೆಯೊಬ್ಬರು ರಕ್ತಕಾರಿ ಸತ್ತಿದ್ದಾರೆ. ರೋಗಿಗಳಿಗೆ ಸರಿಯಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿಲ್ಲ. ವೈದ್ಯರುಗಳು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಹಣವಿದ್ದವರಿಗೆ ಒಂದು ರೀತಿ, ಇಲ್ಲದವರಿಗೆ ಮತ್ತೊಂದು ರೀತಿ ಟ್ರೀಟ್ಮೆಂಟ್ ಕೊಡ್ತಾರೆ. ಪಕ್ಕದ ಬೆಡ್ನಲ್ಲಿ ಐದಾರು ಗಂಟೆಗಳ ಕಾಲ ಮೃತದೇಹ ಹಾಗೆ ಇರುತ್ತೆ. ಆ ಮೃತದೇಹವನ್ನೇ ನೋಡಿಕೊಂಡು ಅಕ್ಕಪಕ್ಕದವರು ಇರಬೇಕು. ಶವ ಮುಂದಿಟ್ಟುಕೊಂಡು ಕೂರುವುದಾದರೂ ಹೇಗೆ ಈ ಭಯಕ್ಕೆಯೇ ಕೆಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ತಮ್ಮ ಬೇಜವಾಬ್ದಾರಿತನ ಬಯಲಾಗುತ್ತೆ ಅಂತ ಸಾವಿನ ಸಂಖ್ಯೆಯನ್ನೇ ಮುಚ್ಚಿಡುತ್ತಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡವನ್ನು ಮಹಿಳೆಯೊಬ್ಬರು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: TRAI: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋಗೆ ಮತ್ತೆ ಮೊದಲ ಸ್ಥಾನ, ಕೊನೆಯಲ್ಲಿ ಏರ್‌ಟೆಲ್! ಏನಿದರ ಲೆಕ್ಕಾಚಾರ?

ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?