AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನು ಮಾರಾಟಕ್ಕೆ ಮುಂದಾದ ಮಹಿಳೆಯ ಅಂಗಡಿ ಮುಚ್ಚಿಸಿದ ನಗರಸಭೆ ಅಧಿಕಾರಿಗಳು; ವ್ಯಾಪಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಆಕ್ರೋಶ

ಮೀನು ವ್ಯಾಪಾರ ಮಾಡಲು ಹಾಕಿಕೊಂಡ ಈ ಶೆಡ್​ಗೆ ಪರವಾನಿಗೆ ಇಲ್ಲ ಎನ್ನುವುದು ನಗರಸಭೆಯ ವಾದ, ಆದರೆ ಈ ಪರಿಸರದಲ್ಲಿ ಇರುವ ಯಾವುದೇ ಗೂಡಂಗಡಿಗೆ ಪರವಾನಿಗೆ ಇಲ್ಲ, ದುಡಿದು ತಿನ್ನಬಾರದು ಎನ್ನುವ ಕಾರಣಕ್ಕೆ ಅಡ್ಡಿ ಮಾಡುತ್ತಿದ್ದಾರೆ ಎಂದು ಮೀನು ಮಾರಾಟಕ್ಕೆ ಮುಂದಾದ ಮಹಿಳೆ ರಾಧ ಬೇಸರ ವ್ಯಕ್ತಪಡಿಸಿದ್ದಾರೆ.

ಮೀನು ಮಾರಾಟಕ್ಕೆ ಮುಂದಾದ ಮಹಿಳೆಯ ಅಂಗಡಿ ಮುಚ್ಚಿಸಿದ ನಗರಸಭೆ ಅಧಿಕಾರಿಗಳು; ವ್ಯಾಪಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಆಕ್ರೋಶ
ಮೀನು ಮಾರಾಟಕ್ಕೆ ಅವಕಾಶ ನೀಡದೆ ಅಂಗಡಿ ಮುಚ್ಚಿಸಿರುವ ದೃಶ್ಯ
TV9 Web
| Edited By: |

Updated on:Jun 11, 2021 | 11:29 AM

Share

ಉಡುಪಿ: ಉದರ ನಿಮಿತ್ತಂ ಬಹುಕೃತ ವೇಷಂ ಎಂಬ ಮಾತಿದೆ. ಲಾಕ್​ಡೌನ್ ಕಲಿಸಿದ ಜೀವನಪಾಠ ಏನಪ್ಪಾ ಅಂದರೆ, ಯಾವುದೇ ಉದ್ಯೋಗವಾದರೂ ಸರಿ, ದುಡಿಮೆಯೇ ದೇವರು, ಅನ್ನ ಸಂಪಾಂದನೆಗೆ ಹಿಂದೆ ಮುಂದೆ ನೋಡದೆ ಸಿಕ್ಕ ಉದ್ಯೋಗ ಮಾಡುವ ಸ್ಥಿತಿಗೆ ಈಗ ಜನ ಬಂದಿದ್ದಾರೆ. ಅದರಂತೆ ಉಡುಪಿಯ ಬ್ರಹ್ಮಗಿರಿಯಲ್ಲಿ ಮಹಿಳೆಯೊಬ್ಬರು ಮೀನು ವ್ಯಾಪಾರ ಮಾಡಲು ಮುಂದಾಗಿದ್ದಾರೆ. ಪುಟ್ಟದೊಂದು ಶೆಡ್ ಹಾಕಿಕೊಂಡು, ಪ್ರತಿದಿನ ಲಾಕ್​ಡೌನ್​ನ ಸೀಮಿತ ಅವಕಾಶದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದಾರೆ. ಆದರೆ ಪ್ರತಿಷ್ಟಿತರ ಈ ಬಡವಾಣೆಯಲ್ಲಿ ಮೀನು ವ್ಯಾಪಾರ ನಡೆಸುವುದಕ್ಕೆ ಕೆಲ ಪ್ರಭಾವಿಗಳು ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಈಗ ಕೇಳಿ ಬಂದಿದೆ.

ಮೀನು ವ್ಯಾಪಾರ ಮಾಡಲು ಹಾಕಿಕೊಂಡ ಈ ಶೆಡ್​ಗೆ ಪರವಾನಿಗೆ ಇಲ್ಲ ಎನ್ನುವುದು ನಗರಸಭೆಯ ವಾದ, ಆದರೆ ಈ ಪರಿಸರದಲ್ಲಿ ಇರುವ ಯಾವುದೇ ಗೂಡಂಗಡಿಗೆ ಪರವಾನಿಗೆ ಇಲ್ಲ, ದುಡಿದು ತಿನ್ನಬಾರದು ಎನ್ನುವ ಕಾರಣಕ್ಕೆ ಅಡ್ಡಿ ಮಾಡುತ್ತಿದ್ದಾರೆ ಎಂದು ಮೀನು ಮಾರಾಟಕ್ಕೆ ಮುಂದಾದ ಮಹಿಳೆ ರಾಧ ಬೇಸರ ವ್ಯಕ್ತಪಡಿಸಿದ್ದಾರೆ.

ಪತಿ ಕಲಾವಿದ, ಲಾಕ್​ಡೌನ್ ನಂತರ ಕಲಾವಿದರಿಗೆ ಎಲ್ಲೂ ಅವಕಾಶ ಸಿಗುತ್ತಿಲ್ಲ. ಹಾಗಾಗಿ ಪತ್ನಿ ಸಾಲ ತೀರಿಸಲು ಮೀನು ವ್ಯಾಪಾರಕ್ಕೆ ಇಳಿದಿದ್ದಾರೆ. ವಾಸ್ತವದಲ್ಲಿ ಮಾರುಕಟ್ಟೆಗೆ ಹೋಗಿ ಮಹಿಳೆಯರು ಮೀನು ಮಾರುವುದು ಮಾಮೂಲು. ಆದರೆ ಮೀನು ಮಾರುಕಟ್ಟೆಯಲ್ಲಿ ಮೊಗವೀರ ಮಸುದಾಯದ್ದೇ ಪಾರಮ್ಯ ಇದೆ. ಹೀಗಾಗಿ ಇಲ್ಲಿ ಬೇರೆಯವರು ಮೀನು ಮಾರಾಟ ಮಾಡಲು ಬಿಡುವುದಿಲ್ಲ ಎಂದು ದಲಿತ ಮುಖಂಡ ಸುಂದರ ಮಾಸ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕ ರಘುಪತಿ ಭಟ್ ಹಾಗೂ ಮೊಗವೀರ ಮುಖಂಡ ಯಶಪಾಲ ಸುವರ್ಣ ಮಾನವೀಯ ನೆಲೆಯಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡುವಂತೆ ನಗರಸಭೆಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಲಾಕ್​ಡೌನ್ ಮುಗಿಯುತ್ತಾ ಬಂತು, ಉದ್ಯೋಗ ಭದ್ರತೆ ಇಲ್ಲದ ಅನೇಕ ಜನ ನಾನಾ ಸ್ವಂತ ಉದ್ಯೋಗಗಳತ್ತ ಹೊರಳೋದು ಮಾಮೂಲು. ನಾನಾ ಪರವಾನಿಗೆಗಳ ನೆಪವೊಡ್ಡಿ ಕಿರುಕುಳ ನೀಡುವುದರ ಬದಲಿಗೆ, ದುಡಿದು ತಿನ್ನುವವರಿಗೆ ಅವಕಾಶ ನೀಡಿ ಎಂದು ದಲಿತ ಮುಖಂಡರು ಸದ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರು; ಮೀನು ವ್ಯಾಪರಕ್ಕೆ ಅವಕಾಶ ನೀಡುವಂತೆ ಒತ್ತಾಯ

ಜೂನ್ 1 ರಿಂದ ಎರಡು ತಿಂಗಳುಗಳ ಕಾಲ ಮೀನುಗಾರಿಕೆ ಸ್ಥಗಿತ; ಮೀನುಗಾರರ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಮನವಿ

Published On - 11:27 am, Fri, 11 June 21

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ