AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನು ಮಾರಾಟಕ್ಕೆ ಮುಂದಾದ ಮಹಿಳೆಯ ಅಂಗಡಿ ಮುಚ್ಚಿಸಿದ ನಗರಸಭೆ ಅಧಿಕಾರಿಗಳು; ವ್ಯಾಪಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಆಕ್ರೋಶ

ಮೀನು ವ್ಯಾಪಾರ ಮಾಡಲು ಹಾಕಿಕೊಂಡ ಈ ಶೆಡ್​ಗೆ ಪರವಾನಿಗೆ ಇಲ್ಲ ಎನ್ನುವುದು ನಗರಸಭೆಯ ವಾದ, ಆದರೆ ಈ ಪರಿಸರದಲ್ಲಿ ಇರುವ ಯಾವುದೇ ಗೂಡಂಗಡಿಗೆ ಪರವಾನಿಗೆ ಇಲ್ಲ, ದುಡಿದು ತಿನ್ನಬಾರದು ಎನ್ನುವ ಕಾರಣಕ್ಕೆ ಅಡ್ಡಿ ಮಾಡುತ್ತಿದ್ದಾರೆ ಎಂದು ಮೀನು ಮಾರಾಟಕ್ಕೆ ಮುಂದಾದ ಮಹಿಳೆ ರಾಧ ಬೇಸರ ವ್ಯಕ್ತಪಡಿಸಿದ್ದಾರೆ.

ಮೀನು ಮಾರಾಟಕ್ಕೆ ಮುಂದಾದ ಮಹಿಳೆಯ ಅಂಗಡಿ ಮುಚ್ಚಿಸಿದ ನಗರಸಭೆ ಅಧಿಕಾರಿಗಳು; ವ್ಯಾಪಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಆಕ್ರೋಶ
ಮೀನು ಮಾರಾಟಕ್ಕೆ ಅವಕಾಶ ನೀಡದೆ ಅಂಗಡಿ ಮುಚ್ಚಿಸಿರುವ ದೃಶ್ಯ
TV9 Web
| Edited By: |

Updated on:Jun 11, 2021 | 11:29 AM

Share

ಉಡುಪಿ: ಉದರ ನಿಮಿತ್ತಂ ಬಹುಕೃತ ವೇಷಂ ಎಂಬ ಮಾತಿದೆ. ಲಾಕ್​ಡೌನ್ ಕಲಿಸಿದ ಜೀವನಪಾಠ ಏನಪ್ಪಾ ಅಂದರೆ, ಯಾವುದೇ ಉದ್ಯೋಗವಾದರೂ ಸರಿ, ದುಡಿಮೆಯೇ ದೇವರು, ಅನ್ನ ಸಂಪಾಂದನೆಗೆ ಹಿಂದೆ ಮುಂದೆ ನೋಡದೆ ಸಿಕ್ಕ ಉದ್ಯೋಗ ಮಾಡುವ ಸ್ಥಿತಿಗೆ ಈಗ ಜನ ಬಂದಿದ್ದಾರೆ. ಅದರಂತೆ ಉಡುಪಿಯ ಬ್ರಹ್ಮಗಿರಿಯಲ್ಲಿ ಮಹಿಳೆಯೊಬ್ಬರು ಮೀನು ವ್ಯಾಪಾರ ಮಾಡಲು ಮುಂದಾಗಿದ್ದಾರೆ. ಪುಟ್ಟದೊಂದು ಶೆಡ್ ಹಾಕಿಕೊಂಡು, ಪ್ರತಿದಿನ ಲಾಕ್​ಡೌನ್​ನ ಸೀಮಿತ ಅವಕಾಶದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದಾರೆ. ಆದರೆ ಪ್ರತಿಷ್ಟಿತರ ಈ ಬಡವಾಣೆಯಲ್ಲಿ ಮೀನು ವ್ಯಾಪಾರ ನಡೆಸುವುದಕ್ಕೆ ಕೆಲ ಪ್ರಭಾವಿಗಳು ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಈಗ ಕೇಳಿ ಬಂದಿದೆ.

ಮೀನು ವ್ಯಾಪಾರ ಮಾಡಲು ಹಾಕಿಕೊಂಡ ಈ ಶೆಡ್​ಗೆ ಪರವಾನಿಗೆ ಇಲ್ಲ ಎನ್ನುವುದು ನಗರಸಭೆಯ ವಾದ, ಆದರೆ ಈ ಪರಿಸರದಲ್ಲಿ ಇರುವ ಯಾವುದೇ ಗೂಡಂಗಡಿಗೆ ಪರವಾನಿಗೆ ಇಲ್ಲ, ದುಡಿದು ತಿನ್ನಬಾರದು ಎನ್ನುವ ಕಾರಣಕ್ಕೆ ಅಡ್ಡಿ ಮಾಡುತ್ತಿದ್ದಾರೆ ಎಂದು ಮೀನು ಮಾರಾಟಕ್ಕೆ ಮುಂದಾದ ಮಹಿಳೆ ರಾಧ ಬೇಸರ ವ್ಯಕ್ತಪಡಿಸಿದ್ದಾರೆ.

ಪತಿ ಕಲಾವಿದ, ಲಾಕ್​ಡೌನ್ ನಂತರ ಕಲಾವಿದರಿಗೆ ಎಲ್ಲೂ ಅವಕಾಶ ಸಿಗುತ್ತಿಲ್ಲ. ಹಾಗಾಗಿ ಪತ್ನಿ ಸಾಲ ತೀರಿಸಲು ಮೀನು ವ್ಯಾಪಾರಕ್ಕೆ ಇಳಿದಿದ್ದಾರೆ. ವಾಸ್ತವದಲ್ಲಿ ಮಾರುಕಟ್ಟೆಗೆ ಹೋಗಿ ಮಹಿಳೆಯರು ಮೀನು ಮಾರುವುದು ಮಾಮೂಲು. ಆದರೆ ಮೀನು ಮಾರುಕಟ್ಟೆಯಲ್ಲಿ ಮೊಗವೀರ ಮಸುದಾಯದ್ದೇ ಪಾರಮ್ಯ ಇದೆ. ಹೀಗಾಗಿ ಇಲ್ಲಿ ಬೇರೆಯವರು ಮೀನು ಮಾರಾಟ ಮಾಡಲು ಬಿಡುವುದಿಲ್ಲ ಎಂದು ದಲಿತ ಮುಖಂಡ ಸುಂದರ ಮಾಸ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕ ರಘುಪತಿ ಭಟ್ ಹಾಗೂ ಮೊಗವೀರ ಮುಖಂಡ ಯಶಪಾಲ ಸುವರ್ಣ ಮಾನವೀಯ ನೆಲೆಯಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡುವಂತೆ ನಗರಸಭೆಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಲಾಕ್​ಡೌನ್ ಮುಗಿಯುತ್ತಾ ಬಂತು, ಉದ್ಯೋಗ ಭದ್ರತೆ ಇಲ್ಲದ ಅನೇಕ ಜನ ನಾನಾ ಸ್ವಂತ ಉದ್ಯೋಗಗಳತ್ತ ಹೊರಳೋದು ಮಾಮೂಲು. ನಾನಾ ಪರವಾನಿಗೆಗಳ ನೆಪವೊಡ್ಡಿ ಕಿರುಕುಳ ನೀಡುವುದರ ಬದಲಿಗೆ, ದುಡಿದು ತಿನ್ನುವವರಿಗೆ ಅವಕಾಶ ನೀಡಿ ಎಂದು ದಲಿತ ಮುಖಂಡರು ಸದ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರು; ಮೀನು ವ್ಯಾಪರಕ್ಕೆ ಅವಕಾಶ ನೀಡುವಂತೆ ಒತ್ತಾಯ

ಜೂನ್ 1 ರಿಂದ ಎರಡು ತಿಂಗಳುಗಳ ಕಾಲ ಮೀನುಗಾರಿಕೆ ಸ್ಥಗಿತ; ಮೀನುಗಾರರ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಮನವಿ

Published On - 11:27 am, Fri, 11 June 21

Follow Us
Web contact
Web contact

TV9 Kannada

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ