AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಲವರ್​ ಜೊತೆ ಫೊನ್​ನಲ್ಲಿ ಮಾತಾಡಿದ್ದಕ್ಕೆ ಜಗಳ: ಗಂಡನ ಮೇಲಿನ ಕೋಪಕ್ಕೆ ಮಗನನ್ನು ಕೊಂದ ತಾಯಿ

ಗಂಡನ ಮೇಲಿನ ಕೋಪಕ್ಕೆ ಹೆತ್ತ ಮಗುವನ್ನೇ ಕೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪುಟ್ಟ ಕಂದನನ್ನ ಕೊಂದು ವಿಷಯ ಮುಚ್ಚಿಟ್ಟಿದ್ದ ಪಾಪಿ ತಾಯಿ ಸುಮಾಳನ್ನು (21) ಪೊಲೀಸರು ಬಂಧಿಸಿದ್ದಾರೆ.

ಹಳೇ ಲವರ್​ ಜೊತೆ ಫೊನ್​ನಲ್ಲಿ ಮಾತಾಡಿದ್ದಕ್ಕೆ ಜಗಳ: ಗಂಡನ ಮೇಲಿನ ಕೋಪಕ್ಕೆ ಮಗನನ್ನು ಕೊಂದ ತಾಯಿ
ಗಂಡನ ಮೇಲಿನ ಕೋಪಕ್ಕೆ ಮಗುವನ್ನು ಕೊಂದ ತಾಯಿ ವಶಕ್ಕೆ
KUSHAL V
|

Updated on: Jan 29, 2021 | 11:23 PM

Share

ಹಾಸನ: ಗಂಡನ ಮೇಲಿನ ಕೋಪಕ್ಕೆ ಹೆತ್ತ ಮಗುವನ್ನೇ ಕೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪುಟ್ಟ ಕಂದನನ್ನ ಕೊಂದು ವಿಷಯ ಮುಚ್ಚಿಟ್ಟಿದ್ದ ಪಾಪಿ ತಾಯಿ ಸುಮಾಳನ್ನು (21) ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದ 12 ದಿನಗಳ ಬಳಿಕ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ.

ಗಂಡನ ಮೇಲೆ ಸುಮಾಗೆ ಯಾಕೆ ಅಷ್ಟು ಕೋಪ? ಅಂದ ಹಾಗೆ, ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹುಲ್ಲೇನಹಳ್ಳಿಯ ನಿವಾಸಿಯಾದ ಸುಮಾ ಜನವರಿ 19ರಂದು ತನ್ನ ಹಳೇ ಲವರ್​ ಜೊತೆ ಫೋನ್​ನಲ್ಲಿ ಮಾತಾಡುವಾಗ ತನ್ನ ಗಂಡ ನಂಜಪ್ಪನ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಳು. ಇದೇ ವಿಚಾರಕ್ಕೆ ದಂಪತಿ ನಡುವೆ ಸಿಕ್ಕಾಪಟ್ಟೆ ಜಗಳವಾಗಿತ್ತು.

ಹಾಗಾಗಿ, ಗಂಡ ಮನೆಯಿಂದ ಹೊರ ಹೋಗುತ್ತಲೇ ಸುಮಾ ತನ್ನ 2 ವರ್ಷದ ಮಗ ತನ್ಮಯ್​ ಮೇಲೆ ಪತಿ ಮೇಲಿನ ಸಿಟ್ಟನ್ನು ತೀರಿಸಿಕೊಂಡಿದ್ದಾಳೆ. ಗಂಡನ ಮೇಲಿನ ಕೋಪಕ್ಕೆ ಮಗುವನ್ನ ಬಡಿದು ಕೊಂದಿದ್ದಾಳೆ.

ಬಳಿಕ, ತನ್ಮಯ್​ಗೆ ಅನಾರೋಗ್ಯ ಎಂದು ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಹಾಗೆ ನಾಟಕವಾಡಿದ್ದಳು. ಆದರೆ, ಮಗು ಆಸ್ಪತ್ರೆಗೆ ತೆರಳೋ ಮುನ್ನವೇ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ, ತಾನು ಹಲ್ಲೆ ಮಾಡಿದ ವಿಷಯವನ್ನು ಮುಚ್ಚಿಟ್ಟ ಸುಮಾ ಗಂಡನ ಜೊತೆ ಅದೇ ದಿನ ಮಗನ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಳು.

ಆದರೂ, ತನ್ನ ಪತ್ನಿ ಬಗ್ಗೆ ಅನುಮಾನಗೊಂಡ​ ನಂಜಪ್ಪ ಜನವರಿ 23ರಂದು ಪೊಲೀಸರಿಗೆ ದೂರು ನೀಡಿದ್ದನು. ನಂಜಪ್ಪ ನೀಡಿದ ದೂರಿನನ್ವಯ ನುಗ್ಗೆಹಳ್ಳಿ ಪೊಲೀಸರು ಜನವರಿ 25 ರಂದು ಮಗುವಿನ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.

ಮರಣೋತ್ತರ ಪರೀಕ್ಷಾ ವರದಿ ಕೈಸೇರುತ್ತಲೆ ಸುಮಾಳ ದುಷ್ಕೃತ್ಯ ಬಯಲಾಗಿದೆ. ಹಾಗಾಗಿ, ಅರೋಪಿ ತಾಯಿಯನ್ನ ಇಂದು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಕರ್ನಾಟಕದ ಬಸ್​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ಗರಂ: ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್