AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಲವರ್​ ಜೊತೆ ಫೊನ್​ನಲ್ಲಿ ಮಾತಾಡಿದ್ದಕ್ಕೆ ಜಗಳ: ಗಂಡನ ಮೇಲಿನ ಕೋಪಕ್ಕೆ ಮಗನನ್ನು ಕೊಂದ ತಾಯಿ

ಗಂಡನ ಮೇಲಿನ ಕೋಪಕ್ಕೆ ಹೆತ್ತ ಮಗುವನ್ನೇ ಕೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪುಟ್ಟ ಕಂದನನ್ನ ಕೊಂದು ವಿಷಯ ಮುಚ್ಚಿಟ್ಟಿದ್ದ ಪಾಪಿ ತಾಯಿ ಸುಮಾಳನ್ನು (21) ಪೊಲೀಸರು ಬಂಧಿಸಿದ್ದಾರೆ.

ಹಳೇ ಲವರ್​ ಜೊತೆ ಫೊನ್​ನಲ್ಲಿ ಮಾತಾಡಿದ್ದಕ್ಕೆ ಜಗಳ: ಗಂಡನ ಮೇಲಿನ ಕೋಪಕ್ಕೆ ಮಗನನ್ನು ಕೊಂದ ತಾಯಿ
ಗಂಡನ ಮೇಲಿನ ಕೋಪಕ್ಕೆ ಮಗುವನ್ನು ಕೊಂದ ತಾಯಿ ವಶಕ್ಕೆ
KUSHAL V
|

Updated on: Jan 29, 2021 | 11:23 PM

Share

ಹಾಸನ: ಗಂಡನ ಮೇಲಿನ ಕೋಪಕ್ಕೆ ಹೆತ್ತ ಮಗುವನ್ನೇ ಕೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪುಟ್ಟ ಕಂದನನ್ನ ಕೊಂದು ವಿಷಯ ಮುಚ್ಚಿಟ್ಟಿದ್ದ ಪಾಪಿ ತಾಯಿ ಸುಮಾಳನ್ನು (21) ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದ 12 ದಿನಗಳ ಬಳಿಕ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ.

ಗಂಡನ ಮೇಲೆ ಸುಮಾಗೆ ಯಾಕೆ ಅಷ್ಟು ಕೋಪ? ಅಂದ ಹಾಗೆ, ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹುಲ್ಲೇನಹಳ್ಳಿಯ ನಿವಾಸಿಯಾದ ಸುಮಾ ಜನವರಿ 19ರಂದು ತನ್ನ ಹಳೇ ಲವರ್​ ಜೊತೆ ಫೋನ್​ನಲ್ಲಿ ಮಾತಾಡುವಾಗ ತನ್ನ ಗಂಡ ನಂಜಪ್ಪನ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಳು. ಇದೇ ವಿಚಾರಕ್ಕೆ ದಂಪತಿ ನಡುವೆ ಸಿಕ್ಕಾಪಟ್ಟೆ ಜಗಳವಾಗಿತ್ತು.

ಹಾಗಾಗಿ, ಗಂಡ ಮನೆಯಿಂದ ಹೊರ ಹೋಗುತ್ತಲೇ ಸುಮಾ ತನ್ನ 2 ವರ್ಷದ ಮಗ ತನ್ಮಯ್​ ಮೇಲೆ ಪತಿ ಮೇಲಿನ ಸಿಟ್ಟನ್ನು ತೀರಿಸಿಕೊಂಡಿದ್ದಾಳೆ. ಗಂಡನ ಮೇಲಿನ ಕೋಪಕ್ಕೆ ಮಗುವನ್ನ ಬಡಿದು ಕೊಂದಿದ್ದಾಳೆ.

ಬಳಿಕ, ತನ್ಮಯ್​ಗೆ ಅನಾರೋಗ್ಯ ಎಂದು ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಹಾಗೆ ನಾಟಕವಾಡಿದ್ದಳು. ಆದರೆ, ಮಗು ಆಸ್ಪತ್ರೆಗೆ ತೆರಳೋ ಮುನ್ನವೇ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ, ತಾನು ಹಲ್ಲೆ ಮಾಡಿದ ವಿಷಯವನ್ನು ಮುಚ್ಚಿಟ್ಟ ಸುಮಾ ಗಂಡನ ಜೊತೆ ಅದೇ ದಿನ ಮಗನ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಳು.

ಆದರೂ, ತನ್ನ ಪತ್ನಿ ಬಗ್ಗೆ ಅನುಮಾನಗೊಂಡ​ ನಂಜಪ್ಪ ಜನವರಿ 23ರಂದು ಪೊಲೀಸರಿಗೆ ದೂರು ನೀಡಿದ್ದನು. ನಂಜಪ್ಪ ನೀಡಿದ ದೂರಿನನ್ವಯ ನುಗ್ಗೆಹಳ್ಳಿ ಪೊಲೀಸರು ಜನವರಿ 25 ರಂದು ಮಗುವಿನ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.

ಮರಣೋತ್ತರ ಪರೀಕ್ಷಾ ವರದಿ ಕೈಸೇರುತ್ತಲೆ ಸುಮಾಳ ದುಷ್ಕೃತ್ಯ ಬಯಲಾಗಿದೆ. ಹಾಗಾಗಿ, ಅರೋಪಿ ತಾಯಿಯನ್ನ ಇಂದು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಕರ್ನಾಟಕದ ಬಸ್​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ಗರಂ: ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?