AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಲವರ್​ ಜೊತೆ ಫೊನ್​ನಲ್ಲಿ ಮಾತಾಡಿದ್ದಕ್ಕೆ ಜಗಳ: ಗಂಡನ ಮೇಲಿನ ಕೋಪಕ್ಕೆ ಮಗನನ್ನು ಕೊಂದ ತಾಯಿ

ಗಂಡನ ಮೇಲಿನ ಕೋಪಕ್ಕೆ ಹೆತ್ತ ಮಗುವನ್ನೇ ಕೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪುಟ್ಟ ಕಂದನನ್ನ ಕೊಂದು ವಿಷಯ ಮುಚ್ಚಿಟ್ಟಿದ್ದ ಪಾಪಿ ತಾಯಿ ಸುಮಾಳನ್ನು (21) ಪೊಲೀಸರು ಬಂಧಿಸಿದ್ದಾರೆ.

ಹಳೇ ಲವರ್​ ಜೊತೆ ಫೊನ್​ನಲ್ಲಿ ಮಾತಾಡಿದ್ದಕ್ಕೆ ಜಗಳ: ಗಂಡನ ಮೇಲಿನ ಕೋಪಕ್ಕೆ ಮಗನನ್ನು ಕೊಂದ ತಾಯಿ
ಗಂಡನ ಮೇಲಿನ ಕೋಪಕ್ಕೆ ಮಗುವನ್ನು ಕೊಂದ ತಾಯಿ ವಶಕ್ಕೆ
KUSHAL V
|

Updated on: Jan 29, 2021 | 11:23 PM

Share

ಹಾಸನ: ಗಂಡನ ಮೇಲಿನ ಕೋಪಕ್ಕೆ ಹೆತ್ತ ಮಗುವನ್ನೇ ಕೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪುಟ್ಟ ಕಂದನನ್ನ ಕೊಂದು ವಿಷಯ ಮುಚ್ಚಿಟ್ಟಿದ್ದ ಪಾಪಿ ತಾಯಿ ಸುಮಾಳನ್ನು (21) ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದ 12 ದಿನಗಳ ಬಳಿಕ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ.

ಗಂಡನ ಮೇಲೆ ಸುಮಾಗೆ ಯಾಕೆ ಅಷ್ಟು ಕೋಪ? ಅಂದ ಹಾಗೆ, ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹುಲ್ಲೇನಹಳ್ಳಿಯ ನಿವಾಸಿಯಾದ ಸುಮಾ ಜನವರಿ 19ರಂದು ತನ್ನ ಹಳೇ ಲವರ್​ ಜೊತೆ ಫೋನ್​ನಲ್ಲಿ ಮಾತಾಡುವಾಗ ತನ್ನ ಗಂಡ ನಂಜಪ್ಪನ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಳು. ಇದೇ ವಿಚಾರಕ್ಕೆ ದಂಪತಿ ನಡುವೆ ಸಿಕ್ಕಾಪಟ್ಟೆ ಜಗಳವಾಗಿತ್ತು.

ಹಾಗಾಗಿ, ಗಂಡ ಮನೆಯಿಂದ ಹೊರ ಹೋಗುತ್ತಲೇ ಸುಮಾ ತನ್ನ 2 ವರ್ಷದ ಮಗ ತನ್ಮಯ್​ ಮೇಲೆ ಪತಿ ಮೇಲಿನ ಸಿಟ್ಟನ್ನು ತೀರಿಸಿಕೊಂಡಿದ್ದಾಳೆ. ಗಂಡನ ಮೇಲಿನ ಕೋಪಕ್ಕೆ ಮಗುವನ್ನ ಬಡಿದು ಕೊಂದಿದ್ದಾಳೆ.

ಬಳಿಕ, ತನ್ಮಯ್​ಗೆ ಅನಾರೋಗ್ಯ ಎಂದು ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಹಾಗೆ ನಾಟಕವಾಡಿದ್ದಳು. ಆದರೆ, ಮಗು ಆಸ್ಪತ್ರೆಗೆ ತೆರಳೋ ಮುನ್ನವೇ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ, ತಾನು ಹಲ್ಲೆ ಮಾಡಿದ ವಿಷಯವನ್ನು ಮುಚ್ಚಿಟ್ಟ ಸುಮಾ ಗಂಡನ ಜೊತೆ ಅದೇ ದಿನ ಮಗನ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಳು.

ಆದರೂ, ತನ್ನ ಪತ್ನಿ ಬಗ್ಗೆ ಅನುಮಾನಗೊಂಡ​ ನಂಜಪ್ಪ ಜನವರಿ 23ರಂದು ಪೊಲೀಸರಿಗೆ ದೂರು ನೀಡಿದ್ದನು. ನಂಜಪ್ಪ ನೀಡಿದ ದೂರಿನನ್ವಯ ನುಗ್ಗೆಹಳ್ಳಿ ಪೊಲೀಸರು ಜನವರಿ 25 ರಂದು ಮಗುವಿನ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.

ಮರಣೋತ್ತರ ಪರೀಕ್ಷಾ ವರದಿ ಕೈಸೇರುತ್ತಲೆ ಸುಮಾಳ ದುಷ್ಕೃತ್ಯ ಬಯಲಾಗಿದೆ. ಹಾಗಾಗಿ, ಅರೋಪಿ ತಾಯಿಯನ್ನ ಇಂದು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಕರ್ನಾಟಕದ ಬಸ್​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ಗರಂ: ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ