AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಹನಿಟ್ರ್ಯಾಪ್ ಮಾಡ್ತಿದ್ದಳು.. ದೂರು ನೀಡಲು ಹೋಗಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಮಹಿಳೆ

ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ಕವಿತಾ. ಕೆಲಸ ಬಿಟ್ಟು ಹನಿಟ್ರ್ಯಾಪ್ ದಂಧೆಗಿಳಿದಿದ್ದಾಳೆ. ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಟಾರ್ಗೆಟ್ ಮಾಡಿ ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಮೋಸ ಮಾಡುತ್ತಿದ್ದ ಮಾಜಿ ಟೀಚರ್, ಐನಾತಿ ಮಹಿಳೆಯನ್ನು ಇಂದಿರಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಹನಿಟ್ರ್ಯಾಪ್ ಮಾಡ್ತಿದ್ದಳು.. ದೂರು ನೀಡಲು ಹೋಗಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಮಹಿಳೆ
ಬಂಧಿತ ಆರೋಪಿ ಕವಿತಾ
ಆಯೇಷಾ ಬಾನು
|

Updated on: Jan 04, 2021 | 9:09 AM

Share

ಬೆಂಗಳೂರು: ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಟಾರ್ಗೆಟ್ ಮಾಡಿ ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಮೋಸ ಮಾಡುತ್ತಿದ್ದ ಮಾಜಿ ಟೀಚರ್, ಐನಾತಿ ಮಹಿಳೆಯನ್ನು ಇಂದಿರಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯ ಹೆಸರು ಕವಿತಾ. ಈಕೆ ಹೈಟೆಕ್ ಹನಿಟ್ರ್ಯಾಪ್ ದಂಧೆ ನಡೆಸುತ್ತಾಳೆ. ಈ ಹಿಂದೆ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ಕವಿತಾ, ಕಾರಣಾಂತರಗಳಿಂದ ಶಿಕ್ಷಕ ವೃತ್ತಿ ಕಳೆದುಕೊಂಡಿದ್ದಳು. ಬಳಿಕ ಹನಿಟ್ರ್ಯಾಪ್ ದಂಧೆಗಿಳಿದು ಮ್ಯಾಟ್ರಿಮೋನಿಯಲ್ಲಿ ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನ ಪರಿಚಯ ಮಾಡಿಕೊಳ್ಳುತ್ತಿದ್ದಳು. ಅವರೊಂದಿಗಿನ ಖಾಸಗಿ ಕ್ಷಣಗಳನ್ನ ಚಿತ್ರಿಸಿಕೊಳ್ಳುತ್ತಿದ್ದಳು. ನಂತರ ಹಣಕ್ಕಾಗಿ ಡಿಮ್ಯಾಂಡ್ ಮಾಡ್ತಿದ್ದಳು.

ಇದೇ ರೀತಿ ಕವಿತಾ ಡಿ.22ರಂದು ಯುವಕನೊಬ್ಬನ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಳು. ಸಂತ್ರಸ್ತ ಯುವಕ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಿ ಪೊಲೀಸರನ್ನ ಕರೆಸಿ ಅವರ ಸಮ್ಮುಖದಲ್ಲೇ ಖಾಸಗಿ ವಿಡಿಯೋ ಡಿಲಿಟ್ ಮಾಡಿಸಿದ್ದಳು. ಯುವಕನ ವಿರುದ್ಧ ದೂರು ನೀಡದಿರಲು 2 ಲಕ್ಷ ಹಣಕ್ಕೆ ಆತನ ಬಳಿ ಡಿಮ್ಯಾಂಡ್ ಮಾಡಿದ್ದಳು. ಆದ್ರೆ ಸಂತ್ರಸ್ತ ಯುವಕ ಹಣ ನೀಡದಿದ್ದಾಗ ಡಿ.31ರಂದು ಆತನ ವಿರುದ್ಧ ಇಂದಿರಾನಗರ ಠಾಣೆಗೆ ದೂರು ನೀಡಿದ್ದಳು.

ದೂರು ನೀಡಿ ತಾನೇ ಬಂಧಿಯಾದ್ಳು ಅಸಲಿಗೆ ವಿಡಿಯೋ ಡಿಲಿಟ್ ಮಾಡಲಾಗಿದೆ. ಆದರೂ ಈ ಪ್ರಕರಣ ಸಂಬಂಧ ಯುವಕನ ಮೇಲೆ ಕವಿತಾ ದೂರು ದಾಖಲಿಸಿದ್ಳು. ಇತ್ಯರ್ಥ ಎಂದುಕೊಂಡ ಪ್ರಕರಣ ಮತ್ತೆ ಠಾಣಾ ಮೆಟ್ಟಿಲೇರಿದ್ದಾಗ ಪೊಲೀಸರಿಗೆ ಅನುಮಾನ ಬಂದಿದೆ. ಆಗ ಕವಿತಾಳ ಮೊಬೈಲ್ ಪಡೆದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಕೆಯ ಕಳ್ಳಾಟ ಬಯಲಾಗಿದೆ. ವಿಡಿಯೋ ಪರಿಶೀಲಿಸಿದಾಗ ಪರಸ್ಪರ ಒಪ್ಪಿಯೇ ದೈಹಿಕ ಸಂಪರ್ಕ ಹೊಂದಿದ್ದು ತಿಳಿದು ಬಂದಿದೆ. ಕವಿತಾಳ ಬಣ್ಣ ಬಯಲಾಗುತ್ತಿದ್ದಂತೆ ಇಂದಿರಾನಗರ ಠಾಣಾ ಪೊಲೀಸರು ತೀವ್ರ ವಿಚಾರಣೆ ನಡೆಸಿ ದೂರುದಾರಳಾಗಿದ್ದ ಕವಿತಾಳ ಖತರ್ನಾಕ್ ಕೃತ್ಯವನ್ನು ತಿಳಿದುಕೊಂಡಿದ್ದಾರೆ.

ಇನ್ನು ಈ ಐನಾತಿ ಕವಿತಾ ಇದೇ ಪ್ರಕರಣ ಸಂಬಂಧ ಯುವಕನ ಮೇಲೆ 2 ವಿವಿಧ ಠಾಣೆಗಳಲ್ಲಿ ದೂರು ನೀಡಿದ್ದಳು. ಹಾಗೂ ಮಲ್ಲೇಶ್ವರಂ, ಮಹಾದೇವಪುರ ಠಾಣೆಯಲ್ಲಿ ಈ ಹಿಂದೆ ಇದೇ ರೀತಿ ದೂರು ನೀಡಿದ್ದಳು. ಒಂದು ಪ್ರಕರಣದಲ್ಲಂತೂ ಸಂತ್ರಸ್ತ ಯುವಕನನ್ನ ಬಂಧನ ಮಾಡಿಸಿದ್ದಳು.

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು