AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಹನಿಟ್ರ್ಯಾಪ್ ಮಾಡ್ತಿದ್ದಳು.. ದೂರು ನೀಡಲು ಹೋಗಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಮಹಿಳೆ

ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ಕವಿತಾ. ಕೆಲಸ ಬಿಟ್ಟು ಹನಿಟ್ರ್ಯಾಪ್ ದಂಧೆಗಿಳಿದಿದ್ದಾಳೆ. ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಟಾರ್ಗೆಟ್ ಮಾಡಿ ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಮೋಸ ಮಾಡುತ್ತಿದ್ದ ಮಾಜಿ ಟೀಚರ್, ಐನಾತಿ ಮಹಿಳೆಯನ್ನು ಇಂದಿರಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಹನಿಟ್ರ್ಯಾಪ್ ಮಾಡ್ತಿದ್ದಳು.. ದೂರು ನೀಡಲು ಹೋಗಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಮಹಿಳೆ
ಬಂಧಿತ ಆರೋಪಿ ಕವಿತಾ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 04, 2021 | 9:09 AM

Share

ಬೆಂಗಳೂರು: ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಟಾರ್ಗೆಟ್ ಮಾಡಿ ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಮೋಸ ಮಾಡುತ್ತಿದ್ದ ಮಾಜಿ ಟೀಚರ್, ಐನಾತಿ ಮಹಿಳೆಯನ್ನು ಇಂದಿರಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯ ಹೆಸರು ಕವಿತಾ. ಈಕೆ ಹೈಟೆಕ್ ಹನಿಟ್ರ್ಯಾಪ್ ದಂಧೆ ನಡೆಸುತ್ತಾಳೆ. ಈ ಹಿಂದೆ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ಕವಿತಾ, ಕಾರಣಾಂತರಗಳಿಂದ ಶಿಕ್ಷಕ ವೃತ್ತಿ ಕಳೆದುಕೊಂಡಿದ್ದಳು. ಬಳಿಕ ಹನಿಟ್ರ್ಯಾಪ್ ದಂಧೆಗಿಳಿದು ಮ್ಯಾಟ್ರಿಮೋನಿಯಲ್ಲಿ ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನ ಪರಿಚಯ ಮಾಡಿಕೊಳ್ಳುತ್ತಿದ್ದಳು. ಅವರೊಂದಿಗಿನ ಖಾಸಗಿ ಕ್ಷಣಗಳನ್ನ ಚಿತ್ರಿಸಿಕೊಳ್ಳುತ್ತಿದ್ದಳು. ನಂತರ ಹಣಕ್ಕಾಗಿ ಡಿಮ್ಯಾಂಡ್ ಮಾಡ್ತಿದ್ದಳು.

ಇದೇ ರೀತಿ ಕವಿತಾ ಡಿ.22ರಂದು ಯುವಕನೊಬ್ಬನ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಳು. ಸಂತ್ರಸ್ತ ಯುವಕ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಿ ಪೊಲೀಸರನ್ನ ಕರೆಸಿ ಅವರ ಸಮ್ಮುಖದಲ್ಲೇ ಖಾಸಗಿ ವಿಡಿಯೋ ಡಿಲಿಟ್ ಮಾಡಿಸಿದ್ದಳು. ಯುವಕನ ವಿರುದ್ಧ ದೂರು ನೀಡದಿರಲು 2 ಲಕ್ಷ ಹಣಕ್ಕೆ ಆತನ ಬಳಿ ಡಿಮ್ಯಾಂಡ್ ಮಾಡಿದ್ದಳು. ಆದ್ರೆ ಸಂತ್ರಸ್ತ ಯುವಕ ಹಣ ನೀಡದಿದ್ದಾಗ ಡಿ.31ರಂದು ಆತನ ವಿರುದ್ಧ ಇಂದಿರಾನಗರ ಠಾಣೆಗೆ ದೂರು ನೀಡಿದ್ದಳು.

ದೂರು ನೀಡಿ ತಾನೇ ಬಂಧಿಯಾದ್ಳು ಅಸಲಿಗೆ ವಿಡಿಯೋ ಡಿಲಿಟ್ ಮಾಡಲಾಗಿದೆ. ಆದರೂ ಈ ಪ್ರಕರಣ ಸಂಬಂಧ ಯುವಕನ ಮೇಲೆ ಕವಿತಾ ದೂರು ದಾಖಲಿಸಿದ್ಳು. ಇತ್ಯರ್ಥ ಎಂದುಕೊಂಡ ಪ್ರಕರಣ ಮತ್ತೆ ಠಾಣಾ ಮೆಟ್ಟಿಲೇರಿದ್ದಾಗ ಪೊಲೀಸರಿಗೆ ಅನುಮಾನ ಬಂದಿದೆ. ಆಗ ಕವಿತಾಳ ಮೊಬೈಲ್ ಪಡೆದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಕೆಯ ಕಳ್ಳಾಟ ಬಯಲಾಗಿದೆ. ವಿಡಿಯೋ ಪರಿಶೀಲಿಸಿದಾಗ ಪರಸ್ಪರ ಒಪ್ಪಿಯೇ ದೈಹಿಕ ಸಂಪರ್ಕ ಹೊಂದಿದ್ದು ತಿಳಿದು ಬಂದಿದೆ. ಕವಿತಾಳ ಬಣ್ಣ ಬಯಲಾಗುತ್ತಿದ್ದಂತೆ ಇಂದಿರಾನಗರ ಠಾಣಾ ಪೊಲೀಸರು ತೀವ್ರ ವಿಚಾರಣೆ ನಡೆಸಿ ದೂರುದಾರಳಾಗಿದ್ದ ಕವಿತಾಳ ಖತರ್ನಾಕ್ ಕೃತ್ಯವನ್ನು ತಿಳಿದುಕೊಂಡಿದ್ದಾರೆ.

ಇನ್ನು ಈ ಐನಾತಿ ಕವಿತಾ ಇದೇ ಪ್ರಕರಣ ಸಂಬಂಧ ಯುವಕನ ಮೇಲೆ 2 ವಿವಿಧ ಠಾಣೆಗಳಲ್ಲಿ ದೂರು ನೀಡಿದ್ದಳು. ಹಾಗೂ ಮಲ್ಲೇಶ್ವರಂ, ಮಹಾದೇವಪುರ ಠಾಣೆಯಲ್ಲಿ ಈ ಹಿಂದೆ ಇದೇ ರೀತಿ ದೂರು ನೀಡಿದ್ದಳು. ಒಂದು ಪ್ರಕರಣದಲ್ಲಂತೂ ಸಂತ್ರಸ್ತ ಯುವಕನನ್ನ ಬಂಧನ ಮಾಡಿಸಿದ್ದಳು.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ