AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಹನಿಟ್ರ್ಯಾಪ್ ಮಾಡ್ತಿದ್ದಳು.. ದೂರು ನೀಡಲು ಹೋಗಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಮಹಿಳೆ

ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ಕವಿತಾ. ಕೆಲಸ ಬಿಟ್ಟು ಹನಿಟ್ರ್ಯಾಪ್ ದಂಧೆಗಿಳಿದಿದ್ದಾಳೆ. ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಟಾರ್ಗೆಟ್ ಮಾಡಿ ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಮೋಸ ಮಾಡುತ್ತಿದ್ದ ಮಾಜಿ ಟೀಚರ್, ಐನಾತಿ ಮಹಿಳೆಯನ್ನು ಇಂದಿರಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಹನಿಟ್ರ್ಯಾಪ್ ಮಾಡ್ತಿದ್ದಳು.. ದೂರು ನೀಡಲು ಹೋಗಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಮಹಿಳೆ
ಬಂಧಿತ ಆರೋಪಿ ಕವಿತಾ
ಆಯೇಷಾ ಬಾನು
|

Updated on: Jan 04, 2021 | 9:09 AM

Share

ಬೆಂಗಳೂರು: ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಟಾರ್ಗೆಟ್ ಮಾಡಿ ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಮೋಸ ಮಾಡುತ್ತಿದ್ದ ಮಾಜಿ ಟೀಚರ್, ಐನಾತಿ ಮಹಿಳೆಯನ್ನು ಇಂದಿರಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯ ಹೆಸರು ಕವಿತಾ. ಈಕೆ ಹೈಟೆಕ್ ಹನಿಟ್ರ್ಯಾಪ್ ದಂಧೆ ನಡೆಸುತ್ತಾಳೆ. ಈ ಹಿಂದೆ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ಕವಿತಾ, ಕಾರಣಾಂತರಗಳಿಂದ ಶಿಕ್ಷಕ ವೃತ್ತಿ ಕಳೆದುಕೊಂಡಿದ್ದಳು. ಬಳಿಕ ಹನಿಟ್ರ್ಯಾಪ್ ದಂಧೆಗಿಳಿದು ಮ್ಯಾಟ್ರಿಮೋನಿಯಲ್ಲಿ ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನ ಪರಿಚಯ ಮಾಡಿಕೊಳ್ಳುತ್ತಿದ್ದಳು. ಅವರೊಂದಿಗಿನ ಖಾಸಗಿ ಕ್ಷಣಗಳನ್ನ ಚಿತ್ರಿಸಿಕೊಳ್ಳುತ್ತಿದ್ದಳು. ನಂತರ ಹಣಕ್ಕಾಗಿ ಡಿಮ್ಯಾಂಡ್ ಮಾಡ್ತಿದ್ದಳು.

ಇದೇ ರೀತಿ ಕವಿತಾ ಡಿ.22ರಂದು ಯುವಕನೊಬ್ಬನ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಳು. ಸಂತ್ರಸ್ತ ಯುವಕ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಿ ಪೊಲೀಸರನ್ನ ಕರೆಸಿ ಅವರ ಸಮ್ಮುಖದಲ್ಲೇ ಖಾಸಗಿ ವಿಡಿಯೋ ಡಿಲಿಟ್ ಮಾಡಿಸಿದ್ದಳು. ಯುವಕನ ವಿರುದ್ಧ ದೂರು ನೀಡದಿರಲು 2 ಲಕ್ಷ ಹಣಕ್ಕೆ ಆತನ ಬಳಿ ಡಿಮ್ಯಾಂಡ್ ಮಾಡಿದ್ದಳು. ಆದ್ರೆ ಸಂತ್ರಸ್ತ ಯುವಕ ಹಣ ನೀಡದಿದ್ದಾಗ ಡಿ.31ರಂದು ಆತನ ವಿರುದ್ಧ ಇಂದಿರಾನಗರ ಠಾಣೆಗೆ ದೂರು ನೀಡಿದ್ದಳು.

ದೂರು ನೀಡಿ ತಾನೇ ಬಂಧಿಯಾದ್ಳು ಅಸಲಿಗೆ ವಿಡಿಯೋ ಡಿಲಿಟ್ ಮಾಡಲಾಗಿದೆ. ಆದರೂ ಈ ಪ್ರಕರಣ ಸಂಬಂಧ ಯುವಕನ ಮೇಲೆ ಕವಿತಾ ದೂರು ದಾಖಲಿಸಿದ್ಳು. ಇತ್ಯರ್ಥ ಎಂದುಕೊಂಡ ಪ್ರಕರಣ ಮತ್ತೆ ಠಾಣಾ ಮೆಟ್ಟಿಲೇರಿದ್ದಾಗ ಪೊಲೀಸರಿಗೆ ಅನುಮಾನ ಬಂದಿದೆ. ಆಗ ಕವಿತಾಳ ಮೊಬೈಲ್ ಪಡೆದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಕೆಯ ಕಳ್ಳಾಟ ಬಯಲಾಗಿದೆ. ವಿಡಿಯೋ ಪರಿಶೀಲಿಸಿದಾಗ ಪರಸ್ಪರ ಒಪ್ಪಿಯೇ ದೈಹಿಕ ಸಂಪರ್ಕ ಹೊಂದಿದ್ದು ತಿಳಿದು ಬಂದಿದೆ. ಕವಿತಾಳ ಬಣ್ಣ ಬಯಲಾಗುತ್ತಿದ್ದಂತೆ ಇಂದಿರಾನಗರ ಠಾಣಾ ಪೊಲೀಸರು ತೀವ್ರ ವಿಚಾರಣೆ ನಡೆಸಿ ದೂರುದಾರಳಾಗಿದ್ದ ಕವಿತಾಳ ಖತರ್ನಾಕ್ ಕೃತ್ಯವನ್ನು ತಿಳಿದುಕೊಂಡಿದ್ದಾರೆ.

ಇನ್ನು ಈ ಐನಾತಿ ಕವಿತಾ ಇದೇ ಪ್ರಕರಣ ಸಂಬಂಧ ಯುವಕನ ಮೇಲೆ 2 ವಿವಿಧ ಠಾಣೆಗಳಲ್ಲಿ ದೂರು ನೀಡಿದ್ದಳು. ಹಾಗೂ ಮಲ್ಲೇಶ್ವರಂ, ಮಹಾದೇವಪುರ ಠಾಣೆಯಲ್ಲಿ ಈ ಹಿಂದೆ ಇದೇ ರೀತಿ ದೂರು ನೀಡಿದ್ದಳು. ಒಂದು ಪ್ರಕರಣದಲ್ಲಂತೂ ಸಂತ್ರಸ್ತ ಯುವಕನನ್ನ ಬಂಧನ ಮಾಡಿಸಿದ್ದಳು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ