AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸಿಎಂ ಹೇಳಿಕೆ: ಕೋಡಿಶ್ರೀ ಭವಿಷ್ಯದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ

ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅದೇಲ್ಲ ನಗಣ್ಯ ಎಂದು ಗರಂ ಆಗಿದ್ದಾರೆ. ಈ ವಿಚಾರವಾಗಿ ನಾನು ಏನೂ ಮಾತನಾಡಲು ಬಯಸಲ್ಲ ಎಂದಿದ್ದಾರೆ.

ಮಹಿಳಾ ಸಿಎಂ ಹೇಳಿಕೆ: ಕೋಡಿಶ್ರೀ ಭವಿಷ್ಯದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ
ಮಹಿಳಾ ಸಿಎಂ ಹೇಳಿಕೆ: ಕೋಡಿಶ್ರೀ ಭವಿಷ್ಯದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ
ಸಹದೇವ್​ ಮಾನೆ
| Edited By: |

Updated on: Sep 11, 2024 | 3:11 PM

Share

ಬೆಳಗಾವಿ, ಸೆಪ್ಟೆಂಬರ್​ 11: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿಬರುತ್ತಿದೆ. ಈ ಮಧ್ಯೆ ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ಕೂಡ ವೈರಲ್​ ಆಗಿತ್ತು. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೋಡಿಮಠದ ಶ್ರೀಗಳ ಹೇಳಿಕೆ ಬಗ್ಗೆ ಗರಂ ಆಗಿದ್ದು, ಅದೇಲ್ಲ ನಗಣ್ಯ ಎಂದು ಹೇಳಿದ್ದಾರೆ.

ಹಾದಿ ಬೀದಿಯಲ್ಲಿ ಮಾತನಾಡುವ ವಿಷಯ ಅಲ್ಲ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ನಾವೆಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕಿದೆ. ಇದೆಲ್ಲ ಬಾಲಿಷ ಅನಿಸುತ್ತದೆ. ಈ ವಿಚಾರವಾಗಿ ನಾನು ಏನೂ ಮಾತನಾಡಲು ಬಯಸಲ್ಲ ಎಂದಿದ್ದಾರೆ.

ಇದನ್ನೂ ಓದಿ: Kodi Mutt Swamiji: ರಾಜ್ಯ ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತೇನೆ. ಪಕ್ಷದಲ್ಲಿ ಹೈಕಮಾಂಡ್, ಶಾಸಕಾಂಗ ಅಂತ ಇದೆ. ಆದರೆ ಇಂತಹ ವಿಚಾರವನ್ನು ಅಲ್ಲಿ, ಇಲ್ಲಿ ಗಲ್ಲಿಯಲ್ಲಿ ಮಾತನಾಡುವ ವಿಚಾರ ಅಲ್ಲ. ಧೀಮಂತ ನಾಯಕತ್ವ ನಮ್ಮ ಪಕ್ಷಕ್ಕೆ ಇದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಗಟ್ಟಿಯಾಗಿ ಇರುತ್ತಾರೆ. ಸಿದ್ದರಾಮಯ್ಯ ಎಲ್ಲಿಯವರೆಗೆ ಗಟ್ಟಿಯಾಗಿ ಇರುತ್ತಾರೆ ಅಲ್ಲಿಯವರೆಗೆ ಅವರೇ ಸಿಎಂ. ಅಲ್ಲಿ ಇಲ್ಲಿ ಗಲ್ಲಿ, ಹಾದಿ ಬೀದಿಯಲ್ಲಿ ಮಾತನಾಡುವ ವಿಷಯ ಅಲ್ಲ. ಸಿದ್ದರಾಮಯ್ಯ ಎಲ್ಲಿಯವರೆಗೆ ಇರುತ್ತೇನೆ ಅಂತಾರೆ ಅಲ್ಲಿಯವರೆಗೆ ನಮ್ಮ ಬೆಂಬಲ ಅವರಿಗೆ ಇದೆ ಎಂದು ಖಡಕ್​ ಆಗಿ ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ

ಕಳೆದ ತಿಂಗಳು ಮಾತನಾಡಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳು ರಾಜ್ಯದಲ್ಲಿ ಮುಂದಿನ ಸಿಎಂ ಮಹಿಳೆ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ಇದೀಗ ಲಕ್ಷೀ ಹೆಬ್ಬಾಳ್ಕರ್​ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಮುಂದಿನ ಸಿಎಂ ಲಕ್ಷೀ ಹೆಬ್ಬಾಳ್ಕರ್​ ಎಂದು ಪೋಸ್ಟ್​ ಹರಿಬಿಟ್ಟಿದ್ದಾರೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ