AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗಂಡನಿಗೆ ಕೈಕಾಲು ಕಟ್ಟಿ ಹಾಕಿ ಟ್ರೀಟ್ಮೆಂಟ್ ಕೊಟ್ಟಿದ್ದಾರೆ, ಅವರ ಸಾವಿಗೆ ವಿಕ್ಟೋರಿಯಾ ವೈದ್ಯರೇ ಕಾರಣ ಎಂದು ಕಣ್ಣೀರಿಟ್ಟ ಮಹಿಳೆ

ಕೈಕಾಲು ಕಟ್ಟಿಹಾಕಿ ಟ್ರೀಟ್ಮೆಂಟ್ ಕೊಡುವ ಅಗತ್ಯವೇನಿತ್ತು? ನನ್ನ ಗಂಡನ ಸಾವಿಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರೇ ಕಾರಣ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ.

ನನ್ನ ಗಂಡನಿಗೆ ಕೈಕಾಲು ಕಟ್ಟಿ ಹಾಕಿ ಟ್ರೀಟ್ಮೆಂಟ್ ಕೊಟ್ಟಿದ್ದಾರೆ, ಅವರ ಸಾವಿಗೆ ವಿಕ್ಟೋರಿಯಾ ವೈದ್ಯರೇ ಕಾರಣ ಎಂದು ಕಣ್ಣೀರಿಟ್ಟ ಮಹಿಳೆ
ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧಿನ ಗಾಯಾಳು ಖೈದಿ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಸಾವು
ಆಯೇಷಾ ಬಾನು
|

Updated on: Apr 25, 2021 | 2:13 PM

Share

ಬೆಂಗಳೂರು: ಮಹಾಮಾರಿ ಕೊರೊನಾ ನಡುವೆ ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ನನ್ನ ಗಂಡನಿಗೆ ಕೈಕಾಲು ಕಟ್ಟಿ ಹಾಕಿ ಟ್ರೀಟ್ಮೆಂಟ್ ಕೊಟ್ಟಿದ್ದಾರೆ. ಕೈಕಾಲು ಕಟ್ಟಿಹಾಕಿ ಟ್ರೀಟ್ಮೆಂಟ್ ಕೊಡುವ ಅಗತ್ಯವೇನಿತ್ತು? ನನ್ನ ಗಂಡನ ಸಾವಿಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರೇ ಕಾರಣ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ.

ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿದ್ದೆವು. ಆಗ ಕೊರೊನಾ ಪಾಸಿಟಿವ್ ಬಂತು. ಎಷ್ಟೇ ಪ್ರಯತ್ನಿಸಿದರೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗಲೇ ಇಲ್ಲ. 3 ದಿನಗಳ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದೆವು. ವಿಕ್ಟೋರಿಯಾದಲ್ಲಿ ಕೊವಿಡ್ ಟೆಸ್ಟ್ ಮಾಡಿಸಿದ ವೇಳೆ ರಿಪೋರ್ಟ್ ನೆಗೆಟಿವ್ ಬಂದಿತ್ತು. ಆದ್ರೆ ಅಲ್ಲಿನ ಸಿಬ್ಬಂದಿ ಹೇಗಿದ್ರೂ ಕೊವಿಡ್ ವಾರ್ಡ್ಗೆ ಬಂದಿದ್ದೀರಿ ಚಿಕಿತ್ಸೆ ಪಡೆಯಿರಿ ಎಂದು ಒತ್ತಾಯಪೂರ್ವಕವಾಗಿ ಕೂಡಿಟ್ಟು ಚಿಕಿತ್ಸೆ ನೀಡಿದ್ದಾರೆ. ಆದರೆ ಯಾವ ರೀತಿ ಚಿಕಿತ್ಸೆ ನೀಡಿದರು ಎಂದು ಮಾಹಿತಿಯಿಲ್ಲ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ನನ್ನ ಪತಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆಯನ್ನೇ ನೀಡಿಲ್ಲ. ಆಸ್ಪತ್ರೆಗೆ ದಾಖಲಾಗುವಾಗ ಸ್ಮಾರ್ಟ್ಫೋನ್ ಬೇಡ ಅಂದಿದ್ರು. ಕೀ ಪ್ಯಾಡ್ ಸೆಟ್ ಮಾತ್ರ ಬಳಸಲು ಅವಕಾಶ ಎಂದಿದ್ದರು. ವಾರ್ಡ್ಗೆ ಹೋದ ಮೇಲೆ ಉಸಿರಾಟದ ಸಮಸ್ಯೆ ಕಾಣಿಸಿತ್ತು. ಅಲ್ಸರ್ ಆಗಿದ್ದರಿಂದ ಮಾತಾಡಲು ಆಗುತ್ತಿಲ್ಲ ಎಂದು ನನ್ನ ಪತಿ ಹೇಳಿದ್ರು. ಚಿಕಿತ್ಸೆಯನ್ನೇ ನೀಡದೆ ಕೂಡಿಟ್ಟು ಸಾಯಿಸಿದ್ದಾರೆ. ನನ್ನ ಗಂಡನ ಸಾವಿಗೆ ವಿಕ್ಟೋರಿಯಾ ಆಸ್ಪತ್ರೆಯವರೇ ಕಾರಣ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಕಣ್ಣೀರು ಇಟ್ಟಿದ್ದಾರೆ.

ಇದನ್ನೂ ಓದಿ: ಮೇಡಿ ಅಗ್ರಹಾರದಲ್ಲಿ ಒಂದೇ ದಿನ 27 ದೇಹಗಳ ದಹನ, ಕೊಂಚವೂ ಬಿಡುವಿಲ್ಲದೆ ನಡೆಯುತ್ತಿದೆ ದಹನ ಕಾರ್ಯ

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ